AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹೋರಾತ್ರಿ ಧರಣಿ ಹಿಂಪಡೆಯಲು ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಯಡಿಯೂರಪ್ಪ ಯತ್ನ

ಅಹೋರಾತ್ರಿ ಧರಣಿ ಹಿಂಪಡೆಯಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಭೇಟಿಯಾಗಿ ವಿನಂತಿಸಿದರು.

ಅಹೋರಾತ್ರಿ ಧರಣಿ ಹಿಂಪಡೆಯಲು ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಯಡಿಯೂರಪ್ಪ ಯತ್ನ
ಕಾಂಗ್ರೆಸ್ ನಾಯಕರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
TV9 Web
| Edited By: |

Updated on: Feb 17, 2022 | 10:18 PM

Share

ಬೆಂಗಳೂರು: ಅಹೋರಾತ್ರಿ ಧರಣಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಭೇಟಿಯಾಗಿ ವಿನಂತಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಹೋರಾತ್ರಿ ಧರಣಿ ಮಾಡದಂತೆ ಮನವಿ ಮಾಡಿದ್ದೇವೆ. ಸುಮಾರು 2 ಗಂಟೆಗಳ ಕಾಲ ನಾನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆರ್.ಅಶೋಕ್ ಮನವೊಲಿಕೆ ಮಾಡಿದೆವು. ಆದರೂ ಅವರು ಮನಸ್ಸು ಬದಲಿಸಲಿಲ್ಲ. ನಾಳೆ ನಿಮ್ಮದೇ ಆದಂಥ ರೀತಿಯಲ್ಲಿ ಪ್ರತಿಭಟನೆ ಮಾಡಿ. ಆದರೆ ಇಲ್ಲಿ ಅಹೋರಾತ್ರಿ ಧರಣಿ ಬೇಡ ಎಂದು ಹೇಳಿದರೂ ಕಾಂಗ್ರೆಸ್​ ನಾಯಕರು ಸ್ಪಂದಿಸಲಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಧರಣಿ ವಿಚಾರವನ್ನು ಟೀಕಿಸಿದ ಬಿಜೆಪಿ ಶಾಸಕ ಸಿ.ಟಿ.ರವಿ, ನಿದ್ದೆ ಮಾಡುತ್ತಿರುವವರನ್ನು ಎಬ್ಬಿಸಬಹುದು, ಆದರೆ ಮಲಗಿದಂತೆ ನಟಿಸುವವರನ್ನು ಏನೂ ಮಾಡಲು ಆಗುವುದಿಲ್ಲ. ಸೈನಿಕರ ಸರ್ಜಿಕಲ್ ಸ್ಟ್ರೈಕ್ ಮೇಲೆ ಅನುಮಾನ ಪಟ್ಟವರು. ಅವರೇ ಪಾಕಿಸ್ತಾನಕ್ಕೆ ಹೋಗಿ ಕೇಳಬಹುದಿತ್ತು. ನಮ್ಮ ರಾಷ್ಟ್ರಭಕ್ತಿಗೆ ಇವರ ಸರ್ಟಿಫಿಕೇಟ್ ಬೇಕೆ ಎಂದು ಪ್ರಶ್ನಿಸಿದರು. ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಷಡ್ಯಂತ್ರ ಬಯಲಾಯ್ತು. ಆ ಕಾರಣಕ್ಕೆ ಈ ವಿಷಯವನ್ನು ತಂದಿದ್ದಾರೆ. ಸಚಿವ ಕೆ.ಎಸ್​.ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ? ರಾಷ್ಟ್ರಧ್ವಜ ತೆಗೆದು ಹಾಕುತ್ತೇನೆ ಎಂದು ಹೇಳಿದ್ದಾರಾ? ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಪಕ್ಷದ ಧ್ವಜ ಹಾಗೂ ರಾಷ್ಟ್ರಧ್ವಜವನ್ನು ಜೊತೆಜೊತೆಗೆ ಹಾರಿಸುತ್ತಾರೆ. ಭಗವಾಧ್ವಜ ನಮ್ಮ ಸ್ಫೂರ್ತಿ ಎಂದು ಸಮರ್ಥಿಸಿಕೊಂಡರು. ನಮ್ಮ ನಿಲುವು ಭಾರತ್ ಮಾತಾ ಕಿ ಜೈ ಕಡೆ. ಕಾಂಗ್ರೆಸ್​​ನವರ ನಿಲುವು ಇಟಲಿ ಮಾತಾ ಕಿ ಜೈ ಕಡೆ. ಅವರಿಗೆ ಟೆರರಿಸ್ಟ್​ಗಳು, ಬಿನ್ ಲಾಡೆನ್​ನಂಥವರು ಗೊತ್ತು. ಆದರೆ ನಮಗೆ ಗೊತ್ತಿರೋರು ಅಬ್ದುಲ್ ಕಲಾಂನಂಥವರು ಎಂದು ವಾಗ್ದಾಳಿ ನಡೆಸಿದರು.

ವಿಧಾನಪರಿಷತ್​ನಲ್ಲೂ ಕಾಂಗ್ರೆಸ್ ಅಹೋರಾತ್ರಿ ಧರಣಿಗೆ ಮುಂದುವರಿಸಿದ ಹಿನ್ನೆಲೆಯಲ್ಲಿ ಧರಣಿ ನಿರತ ಕಾಂಗ್ರೆಸ್‌ ಸದಸ್ಯರೊಂದಿಗೆ ಸಭಾಪತಿ ಬಸವರಾಜ ಹೊರಟ್ಟಿ ಮಾತುಕತೆ ನಡೆಸಿದರು. ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ಸದಸ್ಯರು ಮುಂದಾದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸದನಕ್ಕೆ ಆಗಮಿಸಿ ಧರಣಿ ನಿರತರನ್ನು ಭೇಟಿಯಾದರು.

ವಿಧಾನ ಪರಿಷತ್​​ಗೆ ಕಾಂಗ್ರೆಸ್‌ ಹಿರಿಯ​ ನಾಯಕರು ಭೇಟಿ ನೀಡಿ, ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಇಂದು ಮಧ್ಯಾಹ್ನ ಶಿಕ್ಷಣ ಸಚಿವರ ಜೊತೆಗೆ ನಡೆದ ಭೋಜನಾಕೂಟದ ಬಗ್ಗೆ ಸದಸ್ಯ ನಜೀರ್ ಅಹ್ಮದ್ ನಾಯಕರಿಗೆ ಮಾಹಿತಿ ನೀಡಿದರು. ಈ ವೇಳೆ ಹಿಜಾಬ್ ವಿಚಾರದ ಬಗ್ಗೆಯೂ ಮಾತುಕತೆ ನಡೆದ ಬಗ್ಗೆ ಕಾಂಗ್ರೆಸ್​ನ ಅಲ್ಪಸಂಖ್ಯಾತ ಸದಸ್ಯರು ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ನೀಡಿದರು. ಉರ್ದು ಶಾಲೆಗಳ ವಿಚಾರ ಮತ್ತು ಹಿಜಾಬ್ ವಿಚಾರದ ಬಗ್ಗೆಯೂ ಮಾತುಕತೆ ನಡೆದ ಬಗ್ಗೆಯೂ ಸದಸ್ಯರು ವಿವರಿಸಿದರು. ಗೃಹ ಸಚಿವರಿಂದ ಈಶ್ವರಪ್ಪ ಹೇಳಿಕೆ ಸಮರ್ಥನೆ ಹಾಗೂ ಹಿಜಾಬ್ ವಿಚಾರದ ಕಾಂಗ್ರೆಸ್ ನಾಯಕರು ಪರಿಣಾಮಕಾರಿಯಾಗಿ ಮಾತನಾಡುತ್ತಿಲ್ಲ ಎಂಬ ವಿಚಾರದ ಬಗ್ಗೆ ಈ ವೇಳೆ ಚರ್ಚೆ ನಡೆಯಿತು.

ಇದನ್ನೂ ಓದಿ: ಸದನದಲ್ಲಿ ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ: ಮನವೊಲಿಕೆಗೆ ಅಶೋಕ್, ಯಡಿಯೂರಪ್ಪ, ಕಾಗೇರಿ ಪ್ರಯತ್ನ

ಇದನ್ನೂ ಓದಿ: ವಿಧಾನಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ ಬಸವರಾಜ ಬೊಮ್ಮಾಯಿ: ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ