AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

BS Yediyurappa: 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 10:31 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ ನಿರಾಳರಾಗಿದ್ದರು. ಕುಟುಂಬದೊಂದಿಗೆ ಸಮಯ ಕಳೆಯುವ ಯೋಚನೆಯಲ್ಲಿದ್ದರು. ಐದಾರು ದಿನಗಳ ಹಿಂದೆ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದರು. ಇದೀಗ, ಮಾಲ್ಡೀವ್ಸ್ ಪ್ರವಾಸದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಕ್ಕೆ ಹಿಂತಿರುಗಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ್ದಾರೆ.

20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಹಳ ವರ್ಷಗಳ ನಂತರ ವಿದೇಶ ಪ್ರವಾಸ ಮಾಡಿದ್ದೇನೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಪ್ರವಾಸ ಕೈಗೊಂಡಿದ್ದೇನೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ನಾನು ಕೂಡ ಖುಷಿ ಪಟ್ಟಿದ್ದೇನೆ ಎಂದು ಮಾಲ್ಡೀವ್ಸ್ ಪ್ರವಾಸದ ನಂತರ ಯಡಿಯೂರಪ್ಪ ತಿಳಿಸಿದ್ದಾರೆ.

ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮಂಡ್ಯದಲ್ಲಿ ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಸಭೆಯನ್ನು ಉದ್ಘಾಟನೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ಕೊವಿಡ್ 3ನೇ ಅಲೆಯ ಕುರಿತಾಗಿ ನಡೆದಿರುವ ತಯಾರಿ, ಪಕ್ಷದ ಸಂಘಟನೆ, ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ, ಮುಂದಿನ ಕಾರ್ಯಯೋಜನೆ, ವರದಿಗಳು ಹಾಗೂ ಮೋರ್ಚಾಗಳ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Naga Panchami 2021: ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಭೇಟಿ, ನಾಗರಪಂಚಮಿ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಕೆ

Published On - 10:30 pm, Mon, 23 August 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!