AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

BS Yediyurappa: 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 10:31 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ ನಿರಾಳರಾಗಿದ್ದರು. ಕುಟುಂಬದೊಂದಿಗೆ ಸಮಯ ಕಳೆಯುವ ಯೋಚನೆಯಲ್ಲಿದ್ದರು. ಐದಾರು ದಿನಗಳ ಹಿಂದೆ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದರು. ಇದೀಗ, ಮಾಲ್ಡೀವ್ಸ್ ಪ್ರವಾಸದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಕ್ಕೆ ಹಿಂತಿರುಗಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ್ದಾರೆ.

20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಹಳ ವರ್ಷಗಳ ನಂತರ ವಿದೇಶ ಪ್ರವಾಸ ಮಾಡಿದ್ದೇನೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಪ್ರವಾಸ ಕೈಗೊಂಡಿದ್ದೇನೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ನಾನು ಕೂಡ ಖುಷಿ ಪಟ್ಟಿದ್ದೇನೆ ಎಂದು ಮಾಲ್ಡೀವ್ಸ್ ಪ್ರವಾಸದ ನಂತರ ಯಡಿಯೂರಪ್ಪ ತಿಳಿಸಿದ್ದಾರೆ.

ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮಂಡ್ಯದಲ್ಲಿ ಆಗಸ್ಟ್ 25 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಸಭೆಯನ್ನು ಉದ್ಘಾಟನೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ಕೊವಿಡ್ 3ನೇ ಅಲೆಯ ಕುರಿತಾಗಿ ನಡೆದಿರುವ ತಯಾರಿ, ಪಕ್ಷದ ಸಂಘಟನೆ, ಬೆಳಗಾವಿ, ಕಲಬುರ್ಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ, ಮುಂದಿನ ಕಾರ್ಯಯೋಜನೆ, ವರದಿಗಳು ಹಾಗೂ ಮೋರ್ಚಾಗಳ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರು ಅಭಿವೃದ್ಧಿಗಾಗಿ ಕೈಗೊಂಡ ಯೋಜನೆ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Naga Panchami 2021: ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಭೇಟಿ, ನಾಗರಪಂಚಮಿ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಕೆ

Published On - 10:30 pm, Mon, 23 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?