AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಫಿಟ್ ಮಾಡಿಸಿದ ಆರೋಪ

ಗಾಂಜಾ ಪ್ರಕರಣ ಸಂಬಂಧ ಧಾರವಾಡದಲ್ಲಿ BSc ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ವಿದ್ಯಾಗಿರಿ ಠಾಣೆಯ ಇನ್ಸ್​​ಪೆಕ್ಟರ್ ಹಾಗೂ ಮೂರು ಕಾನ್ಸ್​​​ಟೇಬಲ್​​​ಗಳನ್ನ ಅಮಾನತು ಮಾಡಲಾಗಿದೆ. ಇದೇ ಮಾದರಿ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ವಿದ್ಯಾರ್ಥಿಯೋರ್ವ ಹಾಸ್ಟೆಲ್​ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಸಿಲುಕಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಫಿಟ್ ಮಾಡಿಸಿದ ಆರೋಪ
Aditya
ರಮೇಶ್ ಬಿ. ಜವಳಗೇರಾ
|

Updated on: May 01, 2026 | 3:47 PM

Share

ಬೆಂಗಳೂರು, (ಮೇ 01): ಹಾಸ್ಟೆಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ (Student) ಶವ ಪತ್ತೆಯಾಗಿದೆ. ಬೆಂಗಳೂರು (Bengaluru) ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್​ನಲ್ಲಿ ಎ.ಪಿ‌.ಆದಿತ್ಯ(19) ಶವ ಪತ್ತೆಯಾಗಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. 2ನೇ ವರ್ಷದ ಬಿಎಸ್​ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ, ಏಪ್ರಿಲ್ 29ರಂದೇ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ಇನ್ನು  ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ಆದಿತ್ಯ ತಂದೆ ಪ್ರದೀಪ್ ಆರೋಪಿಸಿದ್ದಾರೆ.

ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಮಗನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆದಿತ್ಯ ತಂದೆ ಪ್ರದೀಪ್ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವು

ಇನ್ನೊಂದೆಡೆ ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ಬಾಲಕ.ಮನೆಯಿಂದ ಅಂಗಡಿಗೆ ವಾಪಸ್ ಬರುಗುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಹೆಣ್ಣೂರು ಸಂಚಾರಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow Us
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ