ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್

ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್
ಬಸ್ ಟಿಕೆಟ್ ದರ
Follow us
| Updated By: ಆಯೇಷಾ ಬಾನು

Updated on: Dec 24, 2023 | 11:26 AM

ಬೆಂಗಳೂರು, ಡಿ.24: ಕ್ರಿಸ್ಮಸ್ (Christmas), ನ್ಯೂ ಇಯರ್(New Year) ಹಿನ್ನೆಲೆ ಸಾಲು ಸಾಲು ರಜೆಗಳು ಬಂದಿದ್ದು ಊರಿಗೆ ಹೋಗಲು ಪ್ಲ್ಯಾನ್ ಮಾಡಿಕೊಂಡವರಿಗೆ ಬಸ್ ಬುಕ್ಕಿಂಗ್ ಆ್ಯಪ್​ಗಳು (Bus Booking Apps) ಶಾಕ್ ಕೊಟ್ಟಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರಯಾಣಿಕರಿಂದ ಸುಲಿಗೆ ಮಾಡಲು ನಿಂತಿವೆ. ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟಾಗಿದೆ. ಜೊತೆಗೆ ಖಾಸಗಿ ಬಸ್ ಬುಕ್ಕಿಂಗ್ ವೆಬ್ ಸೈಟ್​ನಲ್ಲಿ ಟಿಕೆಟ್ ದರ ಒನ್ ಟು ಡಬಲ್ ತೋರಿಸಲಾಗುತ್ತಿದೆ.

ಬೆಂಗಳೂರಿನಿಂದ ಬಹುತೇಕ ಊರುಗಳಿಗೆ ಖಾಸಗಿ ಬಸ್​ಗಳು ದುಪ್ಪಟ್ಟು ದರ ನಿಗದಿ ಮಾಡಿವೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳಲ್ಲಿ ಮತ್ತಷ್ಟು ಹೆಚ್ಚಿನ ದರದಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಬೇಕಿದೆ. ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿದೆ. ಬೇಕಾಬಿಟ್ಟಿ ದರ ಹೆಚ್ಚಿಸುತ್ತಿರುವ ಖಾಸಗಿ ಬಸ್​ ಆ್ಯಪ್​ಗಳ ಮೇಲೆ ಕ್ರಮ ಯಾವಾಗ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ನಾರ್ಮಲ್ ಬಸ್ ದರ ಪಟ್ಟಿ ಇಲ್ಲಿದೆ

  • ​ ಬೆಂಗಳೂರು-ಶಿವಮೊಗ್ಗ 450-650 ರೂ.ರಿಂದ ಈಗ 1000-1400 ಇದೆ.
  • ಬೆಂಗಳೂರು- ಹುಬ್ಬಳಿ 600-850ರೂ. ಇತ್ತು. ಈಗ 1550-2000 ರೂ.
  • ಬೆಂಗಳೂರು-ಮಂಗಳೂರು 600-900 ರೂ. ಈಗ 1500-1800ರೂ.
  • ಬೆಂಗಳೂರು – ಉಡುಪಿ 700-800ರೂ ಯಿಂದ 1600 – 1900 ರೂ.
  • ಬೆಂಗಳೂರು-ಧಾರವಾಡ 650-850 ರೂ ಯಿಂದ 1500-2100 ರೂ ಇದೆ.
  • ಬೆಂಗಳೂರು-ಬೆಳಗಾವಿ 700-900 ರೂ ಇತ್ತು. ಈಗ 1500-2100 ರೂ.ಇದೆ
  • ಬೆಂಗಳೂರು – ದಾವಣಗೆರೆ 450-700 ರೂ ಇತ್ತು. ಈಗ 1200-1650 ರೂ. ಇದೆ.
  • ಬೆಂಗಳೂರು – ಚಿಕ್ಕಮಗಳೂರು 600-650 ರೂ ಇತ್ತು. 1250-1500 ರೂ ಇದೆ.
  • ಬೆಂಗಳೂರು – ಹಾಸನ 650-850 ರೂ ಇತ್ತು. ಈಗ 1600-1850 ರೂ ಇದೆ.
  • ಬೆಂಗಳೂರು-ಕುಮಟಾ 650-750 ರೂ. ಇತ್ತು. 1200-1600 ರೂ ಇದೆ.
  • ಬೆಂಗಳೂರು -ಕಲಬುರಗಿ 850-1000 ರೂ. ಇತ್ತು. 1800-2300 ರೂ ಇದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ