AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್

ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್
ಬಸ್ ಟಿಕೆಟ್ ದರ
Kiran Surya
| Edited By: |

Updated on: Dec 24, 2023 | 11:26 AM

Share

ಬೆಂಗಳೂರು, ಡಿ.24: ಕ್ರಿಸ್ಮಸ್ (Christmas), ನ್ಯೂ ಇಯರ್(New Year) ಹಿನ್ನೆಲೆ ಸಾಲು ಸಾಲು ರಜೆಗಳು ಬಂದಿದ್ದು ಊರಿಗೆ ಹೋಗಲು ಪ್ಲ್ಯಾನ್ ಮಾಡಿಕೊಂಡವರಿಗೆ ಬಸ್ ಬುಕ್ಕಿಂಗ್ ಆ್ಯಪ್​ಗಳು (Bus Booking Apps) ಶಾಕ್ ಕೊಟ್ಟಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರಯಾಣಿಕರಿಂದ ಸುಲಿಗೆ ಮಾಡಲು ನಿಂತಿವೆ. ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟಾಗಿದೆ. ಜೊತೆಗೆ ಖಾಸಗಿ ಬಸ್ ಬುಕ್ಕಿಂಗ್ ವೆಬ್ ಸೈಟ್​ನಲ್ಲಿ ಟಿಕೆಟ್ ದರ ಒನ್ ಟು ಡಬಲ್ ತೋರಿಸಲಾಗುತ್ತಿದೆ.

ಬೆಂಗಳೂರಿನಿಂದ ಬಹುತೇಕ ಊರುಗಳಿಗೆ ಖಾಸಗಿ ಬಸ್​ಗಳು ದುಪ್ಪಟ್ಟು ದರ ನಿಗದಿ ಮಾಡಿವೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳಲ್ಲಿ ಮತ್ತಷ್ಟು ಹೆಚ್ಚಿನ ದರದಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಬೇಕಿದೆ. ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿದೆ. ಬೇಕಾಬಿಟ್ಟಿ ದರ ಹೆಚ್ಚಿಸುತ್ತಿರುವ ಖಾಸಗಿ ಬಸ್​ ಆ್ಯಪ್​ಗಳ ಮೇಲೆ ಕ್ರಮ ಯಾವಾಗ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ನಾರ್ಮಲ್ ಬಸ್ ದರ ಪಟ್ಟಿ ಇಲ್ಲಿದೆ

  • ​ ಬೆಂಗಳೂರು-ಶಿವಮೊಗ್ಗ 450-650 ರೂ.ರಿಂದ ಈಗ 1000-1400 ಇದೆ.
  • ಬೆಂಗಳೂರು- ಹುಬ್ಬಳಿ 600-850ರೂ. ಇತ್ತು. ಈಗ 1550-2000 ರೂ.
  • ಬೆಂಗಳೂರು-ಮಂಗಳೂರು 600-900 ರೂ. ಈಗ 1500-1800ರೂ.
  • ಬೆಂಗಳೂರು – ಉಡುಪಿ 700-800ರೂ ಯಿಂದ 1600 – 1900 ರೂ.
  • ಬೆಂಗಳೂರು-ಧಾರವಾಡ 650-850 ರೂ ಯಿಂದ 1500-2100 ರೂ ಇದೆ.
  • ಬೆಂಗಳೂರು-ಬೆಳಗಾವಿ 700-900 ರೂ ಇತ್ತು. ಈಗ 1500-2100 ರೂ.ಇದೆ
  • ಬೆಂಗಳೂರು – ದಾವಣಗೆರೆ 450-700 ರೂ ಇತ್ತು. ಈಗ 1200-1650 ರೂ. ಇದೆ.
  • ಬೆಂಗಳೂರು – ಚಿಕ್ಕಮಗಳೂರು 600-650 ರೂ ಇತ್ತು. 1250-1500 ರೂ ಇದೆ.
  • ಬೆಂಗಳೂರು – ಹಾಸನ 650-850 ರೂ ಇತ್ತು. ಈಗ 1600-1850 ರೂ ಇದೆ.
  • ಬೆಂಗಳೂರು-ಕುಮಟಾ 650-750 ರೂ. ಇತ್ತು. 1200-1600 ರೂ ಇದೆ.
  • ಬೆಂಗಳೂರು -ಕಲಬುರಗಿ 850-1000 ರೂ. ಇತ್ತು. 1800-2300 ರೂ ಇದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ