AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್

ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್
ಬಸ್ ಟಿಕೆಟ್ ದರ
Kiran Surya
| Edited By: |

Updated on: Dec 24, 2023 | 11:26 AM

Share

ಬೆಂಗಳೂರು, ಡಿ.24: ಕ್ರಿಸ್ಮಸ್ (Christmas), ನ್ಯೂ ಇಯರ್(New Year) ಹಿನ್ನೆಲೆ ಸಾಲು ಸಾಲು ರಜೆಗಳು ಬಂದಿದ್ದು ಊರಿಗೆ ಹೋಗಲು ಪ್ಲ್ಯಾನ್ ಮಾಡಿಕೊಂಡವರಿಗೆ ಬಸ್ ಬುಕ್ಕಿಂಗ್ ಆ್ಯಪ್​ಗಳು (Bus Booking Apps) ಶಾಕ್ ಕೊಟ್ಟಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರಯಾಣಿಕರಿಂದ ಸುಲಿಗೆ ಮಾಡಲು ನಿಂತಿವೆ. ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟಾಗಿದೆ. ಜೊತೆಗೆ ಖಾಸಗಿ ಬಸ್ ಬುಕ್ಕಿಂಗ್ ವೆಬ್ ಸೈಟ್​ನಲ್ಲಿ ಟಿಕೆಟ್ ದರ ಒನ್ ಟು ಡಬಲ್ ತೋರಿಸಲಾಗುತ್ತಿದೆ.

ಬೆಂಗಳೂರಿನಿಂದ ಬಹುತೇಕ ಊರುಗಳಿಗೆ ಖಾಸಗಿ ಬಸ್​ಗಳು ದುಪ್ಪಟ್ಟು ದರ ನಿಗದಿ ಮಾಡಿವೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳಲ್ಲಿ ಮತ್ತಷ್ಟು ಹೆಚ್ಚಿನ ದರದಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಬೇಕಿದೆ. ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿದೆ. ಬೇಕಾಬಿಟ್ಟಿ ದರ ಹೆಚ್ಚಿಸುತ್ತಿರುವ ಖಾಸಗಿ ಬಸ್​ ಆ್ಯಪ್​ಗಳ ಮೇಲೆ ಕ್ರಮ ಯಾವಾಗ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ನಾರ್ಮಲ್ ಬಸ್ ದರ ಪಟ್ಟಿ ಇಲ್ಲಿದೆ

  • ​ ಬೆಂಗಳೂರು-ಶಿವಮೊಗ್ಗ 450-650 ರೂ.ರಿಂದ ಈಗ 1000-1400 ಇದೆ.
  • ಬೆಂಗಳೂರು- ಹುಬ್ಬಳಿ 600-850ರೂ. ಇತ್ತು. ಈಗ 1550-2000 ರೂ.
  • ಬೆಂಗಳೂರು-ಮಂಗಳೂರು 600-900 ರೂ. ಈಗ 1500-1800ರೂ.
  • ಬೆಂಗಳೂರು – ಉಡುಪಿ 700-800ರೂ ಯಿಂದ 1600 – 1900 ರೂ.
  • ಬೆಂಗಳೂರು-ಧಾರವಾಡ 650-850 ರೂ ಯಿಂದ 1500-2100 ರೂ ಇದೆ.
  • ಬೆಂಗಳೂರು-ಬೆಳಗಾವಿ 700-900 ರೂ ಇತ್ತು. ಈಗ 1500-2100 ರೂ.ಇದೆ
  • ಬೆಂಗಳೂರು – ದಾವಣಗೆರೆ 450-700 ರೂ ಇತ್ತು. ಈಗ 1200-1650 ರೂ. ಇದೆ.
  • ಬೆಂಗಳೂರು – ಚಿಕ್ಕಮಗಳೂರು 600-650 ರೂ ಇತ್ತು. 1250-1500 ರೂ ಇದೆ.
  • ಬೆಂಗಳೂರು – ಹಾಸನ 650-850 ರೂ ಇತ್ತು. ಈಗ 1600-1850 ರೂ ಇದೆ.
  • ಬೆಂಗಳೂರು-ಕುಮಟಾ 650-750 ರೂ. ಇತ್ತು. 1200-1600 ರೂ ಇದೆ.
  • ಬೆಂಗಳೂರು -ಕಲಬುರಗಿ 850-1000 ರೂ. ಇತ್ತು. 1800-2300 ರೂ ಇದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ