Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್

ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್
ಬಸ್ ಟಿಕೆಟ್ ದರ
Follow us
Kiran Surya
| Updated By: ಆಯೇಷಾ ಬಾನು

Updated on: Dec 24, 2023 | 11:26 AM

ಬೆಂಗಳೂರು, ಡಿ.24: ಕ್ರಿಸ್ಮಸ್ (Christmas), ನ್ಯೂ ಇಯರ್(New Year) ಹಿನ್ನೆಲೆ ಸಾಲು ಸಾಲು ರಜೆಗಳು ಬಂದಿದ್ದು ಊರಿಗೆ ಹೋಗಲು ಪ್ಲ್ಯಾನ್ ಮಾಡಿಕೊಂಡವರಿಗೆ ಬಸ್ ಬುಕ್ಕಿಂಗ್ ಆ್ಯಪ್​ಗಳು (Bus Booking Apps) ಶಾಕ್ ಕೊಟ್ಟಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರಯಾಣಿಕರಿಂದ ಸುಲಿಗೆ ಮಾಡಲು ನಿಂತಿವೆ. ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟಾಗಿದೆ. ಜೊತೆಗೆ ಖಾಸಗಿ ಬಸ್ ಬುಕ್ಕಿಂಗ್ ವೆಬ್ ಸೈಟ್​ನಲ್ಲಿ ಟಿಕೆಟ್ ದರ ಒನ್ ಟು ಡಬಲ್ ತೋರಿಸಲಾಗುತ್ತಿದೆ.

ಬೆಂಗಳೂರಿನಿಂದ ಬಹುತೇಕ ಊರುಗಳಿಗೆ ಖಾಸಗಿ ಬಸ್​ಗಳು ದುಪ್ಪಟ್ಟು ದರ ನಿಗದಿ ಮಾಡಿವೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳಲ್ಲಿ ಮತ್ತಷ್ಟು ಹೆಚ್ಚಿನ ದರದಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಬೇಕಿದೆ. ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿದೆ. ಬೇಕಾಬಿಟ್ಟಿ ದರ ಹೆಚ್ಚಿಸುತ್ತಿರುವ ಖಾಸಗಿ ಬಸ್​ ಆ್ಯಪ್​ಗಳ ಮೇಲೆ ಕ್ರಮ ಯಾವಾಗ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ನಾರ್ಮಲ್ ಬಸ್ ದರ ಪಟ್ಟಿ ಇಲ್ಲಿದೆ

  • ​ ಬೆಂಗಳೂರು-ಶಿವಮೊಗ್ಗ 450-650 ರೂ.ರಿಂದ ಈಗ 1000-1400 ಇದೆ.
  • ಬೆಂಗಳೂರು- ಹುಬ್ಬಳಿ 600-850ರೂ. ಇತ್ತು. ಈಗ 1550-2000 ರೂ.
  • ಬೆಂಗಳೂರು-ಮಂಗಳೂರು 600-900 ರೂ. ಈಗ 1500-1800ರೂ.
  • ಬೆಂಗಳೂರು – ಉಡುಪಿ 700-800ರೂ ಯಿಂದ 1600 – 1900 ರೂ.
  • ಬೆಂಗಳೂರು-ಧಾರವಾಡ 650-850 ರೂ ಯಿಂದ 1500-2100 ರೂ ಇದೆ.
  • ಬೆಂಗಳೂರು-ಬೆಳಗಾವಿ 700-900 ರೂ ಇತ್ತು. ಈಗ 1500-2100 ರೂ.ಇದೆ
  • ಬೆಂಗಳೂರು – ದಾವಣಗೆರೆ 450-700 ರೂ ಇತ್ತು. ಈಗ 1200-1650 ರೂ. ಇದೆ.
  • ಬೆಂಗಳೂರು – ಚಿಕ್ಕಮಗಳೂರು 600-650 ರೂ ಇತ್ತು. 1250-1500 ರೂ ಇದೆ.
  • ಬೆಂಗಳೂರು – ಹಾಸನ 650-850 ರೂ ಇತ್ತು. ಈಗ 1600-1850 ರೂ ಇದೆ.
  • ಬೆಂಗಳೂರು-ಕುಮಟಾ 650-750 ರೂ. ಇತ್ತು. 1200-1600 ರೂ ಇದೆ.
  • ಬೆಂಗಳೂರು -ಕಲಬುರಗಿ 850-1000 ರೂ. ಇತ್ತು. 1800-2300 ರೂ ಇದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್