
ಬೆಂಗಳೂರು, ಅಕ್ಟೋಬರ್ 15: ನಗರದ ರಸ್ತೆ ಗುಂಡಿಗಳು (Potholes) ಬೆಂಗಳೂರಿಗರ ನಿದ್ದೆಗೆಡಿಸಿವೆ. ಬೆಂಗಳೂರಿಗರು ಮಾತ್ರ ಅಲ್ಲ ವಿದೇಶಿ ಉದ್ಯಮಿಗಳು ಕೂಡ ಪಾತ್ಹೋಲ್ ಬಗ್ಗೆ ಮಾತಾಡುವಂತಾಗಿದೆ. ಈ ಬಗ್ಗೆ ಉದ್ಯಮಿ ಕಿರಣ್ ಮಜುಂದಾರ್ ಮಾಡಿದ್ದ ಟ್ವೀಟ್ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೆಲ್ಲದರ ಬೆನ್ನಲ್ಲೇ ಇದೀಗ ಉದ್ಯಮಿ ಮೋಹನ್ ದಾಸ್ ಪೈ (Mohandas Pai) ಕೂಡ ಟ್ವೀಟ್ ಮಾಡಿದ್ದು, ನಮ್ಮ ನೆರೆಯ ಆಂಧ್ರಪ್ರದೇಶ ಡೇಟಾ ಸೆಂಟರ್ ತೆರೆಯುತ್ತಿದೆ. ಆದರೆ ನಾವಿನ್ನೂ ರಸ್ತೆಗುಂಡಿ ಮುಚ್ಚಲು ಕಷ್ಟಪಡುತ್ತಿದ್ದೇವೆ ಎಂದು ಸರ್ಕಾರಕ್ಕೆ ತಿವಿದಿದ್ದಾರೆ.
ಬೆಂಗಳೂರಲ್ಲಿ ಗುಂಡಿಗಳೇ ತುಂಬಿದ ಕೆಟ್ಟ ರಸ್ತೆಯಿಂದ ಒದ್ದಾಡುತ್ತಿದ್ದೇವೆ. ಆದರೆ ನಮ್ಮ ನೆರೆಯ ಆಂಧ್ರಪ್ರದೇಶ ಗೂಗಲ್ನ 1,30,000 ಕೋಟಿ ವೆಚ್ಚದಲ್ಲಿ ಡೇಟಾ ಸೆಂಟರ್ ತೆರೆಯುತ್ತಿದೆ. ನಾವಿನ್ನೂ ರಸ್ತೆಗುಂಡಿ ಮುಚ್ಚಲು ಕಷ್ಟಪಡುತ್ತಿದ್ದೇವೆ ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿ ಮೋಹನ್ ದಾಸ್ ಪೈ ಪೋಸ್ಟ್ ಮಾಡಿದ್ದಾರೆ.
‘Why are roads so bad?’Biocon founder Kiran shares foreign visitor’s blunt critique of Bengaluru
In Bengaluru we are struggling with potholed bad https://t.co/hEp95aoLsV Andhra they are building a 130,000 cr data centre with Google. @DKShivakumar https://t.co/y56faRjFGw— Mohandas Pai (@TVMohandasPai) October 14, 2025
ಇದೇ ಗುಂಡಿ ವಿಚಾರವಾಗಿ ಇತ್ತೀಚೆಗೆ ಬ್ಲ್ಯಾಕ್ಬಕ್ ಕಂಪನಿ ಬೆಂಗಳೂರನ್ನೇ ತೊರೆಯೋ ಬಗ್ಗೆ ಮಾತನಾಡಿತ್ತು. ಇದೀಗ ಸಿಲಿಕಾನ್ ಸಿಟಿಯ ಹದಗೆಟ್ಟ ರಸ್ತೆಗಳ ಬಗ್ಗೆ ವಿದೇಶಿಗರು ಮಾತನಾಡಿರೋದು ವಾಕ್ಸ್ಸಮರಕ್ಕೆ, ಟ್ವೀಟ್ ಸಮರಕ್ಕೆ ಸಾಕ್ಷಿ ಆಗಿದೆ. ಗುಂಡಿಗಳ ಬಗ್ಗೆ, ಕಸದ ಸಮಸ್ಯೆ ಬಗ್ಗೆ ಚೀನಾ ಉದ್ಯಮಿ ಕೂಡ ಮಾತನಾಡಿರೋದನ್ನ ಬಯೋಕಾಲ್ ಮುಖ್ಯಸ್ಥೆ ಕಿರಣ್ ಮಜಂದಾರ್ ರಿವೀಲ್ ಮಾಡಿದ್ದರು. ಚೀನಾ ಉದ್ಯಮಿ ಮಾತನ್ನ ಟ್ವೀಟ್ನಲ್ಲೇ ಹಂಚಿಕೊಂಡಿದ್ದರು.
ಇದನ್ನೂ ಓದಿ: ರಸ್ತೆ ಗುಂಡಿ ಸಮಸ್ಯೆ: ನಾವು ತೆರಿಗೆ ಕಟ್ಟಲ್ಲ ಎಂದು ಸಿಎಂ, ಡಿಸಿಎಂಗೆ ಪತ್ರ ಬರೆದ ಐಟಿ-ಬಿಟಿ ಮಂದಿ
ಇದಕ್ಕೆ ಟ್ವೀಟ್ ಮೂಲಕವೇ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು. ರಸ್ತೆ ಅಭಿವೃದ್ಧಿಗಾಗಿಯೇ 1,100 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ. ಈಗಾಗಲೇ 5 ಸಾವಿರ ಗುಂಡಿ ಮುಚ್ಚಿದ್ದು, ಇನ್ನೂ ಐದು ಸಾವಿರ ಗುಂಡಿ ಬಾಕಿ ಇವೆ ಎಂದು ಹೇಳಿದ್ದರು.
ಇನ್ನು ರಸ್ತೆ ಗುಂಡಿಗಳಿಂದ ಬೆಸತ್ತ ಐಟಿ-ಬಿಟಿ ನಿವಾಸಿಗಳು ನಾವು ಆಸ್ತಿ ತೆರಿಗೆ ಕಟ್ಟುವುದಿಲ್ಲ, ನಮ್ಮಿಂದ ತೆರಿಗೆ ಕೇಳಬೇಡಿ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಗೆ ವರ್ತೂರು, ಪಣತ್ತೂರು ಭಾಗದ ನಿವಾಸಿಗಳು ಪತ್ರ ಬರೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.