AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲಕ್ಷಾಮದ ಭೀತಿ.! ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ ಕುಸಿತ‌‌

ನೀರಿನ ಹಾಹಾಕಾರ ಬೆಂಗಳೂರಲ್ಲೂ ಉಂಟಾಗುವ ಸಾಧ್ಯತೆ ಇದೆ. ಹೌದು ಕೆಆರ್​ಎಸ್​ ಡ್ಯಾಂನಲ್ಲಿ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾವೇರಿ ನೀರಾವರಿ ನಿಗಮಕ್ಕೆ ಪತ್ರ ಬರೆದಿದೆ.

ಬೆಂಗಳೂರಿಗೆ ಜಲಕ್ಷಾಮದ ಭೀತಿ.! ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ ಕುಸಿತ‌‌
ಬೆಂಗಳೂರು ಜಲಮಂಡಳಿ
ವಿವೇಕ ಬಿರಾದಾರ
|

Updated on: Jun 16, 2023 | 5:43 PM

Share

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು (Karnataka Monsoon) ಪ್ರವೇಶ ವಿಳಂಬವಾದ ಹಿನ್ನೆಲೆ ಜಲಾಶಯಗಳ (Dam) ನೀರಿನ ಮಟ್ಟ ಕ್ಷೀಣಿಸುತ್ತಿದೆ. ರಾಜ್ಯದ ಪ್ರಮುಖ ಡ್ಯಾಂಗಳು ಬರಿದಾಗುತ್ತಿವೆ. ಇದರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ (Drinking Water) ತೊಂದರೆ ಉಂಟಾಗಿದೆ. ಜನರು ನೀರಿಲ್ಲದೆ ಹಪಹಪಿಸುವಂತಹ ಪರಿಸ್ಥಿತಿ ಉದ್ಭವವಾಗುತ್ತಿದೆ. ಇದೀಗ ನೀರಿನ ಹಾಹಾಕಾರ ಬೆಂಗಳೂರಲ್ಲೂ (Bengaluru) ಉಂಟಾಗುವ ಸಾಧ್ಯತೆ ಇದೆ. ಹೌದು ಕೆಆರ್​ಎಸ್​ (KRS) ಡ್ಯಾಂನಲ್ಲಿ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಾವೇರಿ ನೀರಾವರಿ ನಿಗಮಕ್ಕೆ ಪತ್ರ ಬರೆದಿದೆ.

KRS ಜಲಾಶಯದಲ್ಲಿ ಕೇವಲ 11 TMC ನೀರು ಮಾತ್ರ ಲಭ್ಯವಿದ್ದು, ಇದರಿಂದ ನಗರಕ್ಕೆ ಕಾವೇರಿ ನೀರಿನ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗುವ ಆತಂಕ ಎದುರಾಗಿದೆ. ಹೀಗಾಗಿ ಕಾವೇರಿ ನೀರನ್ನು ಜೂನ್, ಜುಲೈ ,ಆಗಸ್ಟ್​​ವರೆಗೆ ಅಗತ್ಯ ಇರುವ ಕನಿಷ್ಠ 4.8 ಟಿಎಂಸಿ ಕಾಯ್ದಿರಿಸಿ ಎಂದು ಕಾವೇರಿ ನೀರಾವರಿ ನಿಗಮ ಮಂಡಳಿ (CNNL)ಗೆ ಬೆಂಗಳೂರು ಜಲಮಂಡಳೊಯ ಮುಖ್ಯ ಇಂಜಿನಿಯರ್​ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಸಂಚಾರಿ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ನೀಡಲು ಬಂದಿದೆ ಹೊಸ ಆ್ಯಪ್​; ಇಲ್ಲಿದೆ ಅದರ ವಿಶೇಷತೆ 

ಬೆಂಗಳೂರು ನಗರಕ್ಕೆ ಪ್ರತಿನಿತ್ಯ 1,450 ಮಿಲಿಯನ್ ಲೀಟರ್ ನೀರು ಅಗತ್ಯವಿದ್ದು, ಇದನ್ನು ಕಾವೇರಿ ನದಿಯಿಂದ ವಿವಿಧ ಹಂತಗಳಿಂದ ನೀಡಲಾಗುತ್ತಿದೆ. ಶಿವನ ಅಣೆಕಟ್ಟಿನಿಂದ ಇಷ್ಟು ಪ್ರಮಾಣದ ನೀರು ಪೂರೈಕೆಯಾಗುತ್ತಿದೆ. ಬೆಂಗಳೂರು ನಗರಕ್ಕೆ ನಿರಂತರ ನೀರು ಪೂರೈಕೆಗೆ ತಿಂಗಳಿಗೆ 1.6 ಟಿಎಂಸಿ ನೀರು ಬೇಕು. ಜೂನ್‌ನಿಂದ ಆಗಸ್ಟ್‌ವರೆಗೆ ಬೆಂಗಳೂರು ನಗರಕ್ಕೆ 4.8 ಟಿಎಂಸಿ ನೀರು ಬೇಕಾಗುತ್ತದೆ. ಬೆಂಗಳೂರಿನ ಜನರಿಗೆ ನೀರು ಪೂರೈಸಲು, ಅಣೆಕಟ್ಟಿನಲ್ಲಿ ನಗರಕ್ಕೆ ನೀರು ಕಾಯ್ದಿರಿಸುವಂತೆ ನಾವು ವಿನಂತಿಸುತ್ತೇವೆ ಎಂದಿದ್ದಾರೆ.

ಬಿಪರ್‌ಜೋಯ್ ಚಂಡಮಾರುತದಿಂದಾಗಿ ಕಳೆದ ವಾರ ಆರಂಭವಾಗುವ ನಿರೀಕ್ಷೆಯಿದ್ದ ಮುಂಗಾರು ವಿಳಂಬವಾಗಿದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್