AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ: ಡಿಸಿಎಂ ಡಿಕೆ ಶಿವಕುಮಾರ್

ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ದರ ಏರಿಕೆ ಬಗ್ಗೆ ನಾಗರಿಕರು, ಅಧಿಕಾರಿಗಳ ಜತೆ ಚರ್ಚಿಸಬೇಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್
Rakesh Nayak Manchi
Rakesh Nayak Manchi|

Updated on: Jun 06, 2023 | 9:55 PM

Share

ಬೆಂಗಳೂರು: ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (Bangalore Water Supply and Sewerage Board) ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ದರ ಏರಿಕೆ ಬಗ್ಗೆ ನಾಗರಿಕರು, ಅಧಿಕಾರಿಗಳ ಜತೆ ಚರ್ಚಿಸಬೇಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. 2014ರಿಂದ ನೀರಿನ ದರ ಏರಿಸಿಲ್ಲ, ಉದ್ಯೋಗಿಗಳು ಸಂಕಷ್ಟದಲ್ಲಿದ್ದಾರೆ. ನೀರಿನ ದರ ಏರಿಕೆ ಬಗ್ಗೆ ನಾಗರಿಕರು, ಅಧಿಕಾರಿಗಳ ಜೊತೆ ಚರ್ಚಿಸಬೇಕಿದೆ ಎಂದರು.

BWSSB ಸ್ಥಿತಿ ಬಹಳ ಚಿಂತಾ ಜನಕವಾಗಿದೆ. ಐದನೇ ಪೇಸ್ ಕಂಪ್ಲಿಟ್ ಆಗಬೇಕಿದೆ. ಅಕ್ರಮ ನೀರಿನ ಸಂಪರ್ಕಗಳನ್ನು 48 ರಿಂದ 28 ತಂದಿದ್ದಾರೆ. ಎಲ್ಲೆಲ್ಲಿ ಲೋಪದೋಷವಾಗಿದೆ ಎಂಬುದನ್ನು ಗುರುತಿಸಲು ಹೇಳಿದ್ದೇನೆ. ಸೀವೇಜ್ ವಾಟರ್ ಪೈಪ್​ನಲ್ಲಿ ಹೋಗುತ್ತಿದೆ. ಮುಂದೆ ಮಾರ್ಗದರ್ಶನ ನೀಡಬೇಕಿದೆ ಎಂದು ಡಿಸಿಎಂ ಹೇಳಿದರು.

ಇದನ್ನೂ ಓದಿ: ರಾಜಕೀಯ ಬಿಟ್ಟು ಬೆಂಗಳೂರು ಅಭಿವೃದ್ಧಿ ಮಾಡೋಣ: ಶಾಸಕರ ಸಭೆಯಲ್ಲಿ ಡಿಕೆ ಶಿವಕುಮಾರ್ ಕಿವಿಮಾತು

ಕುಡಿಯುವ ನೀರು ಮುಖ್ಯ. ಬೆಂಗಳೂರಿಗೆ ಶುಚಿ ನೀರು ಕೊಡಬೇಕಿದೆ. ಜನರಿಗೆ ಕ್ವಾಲಿಟಿ ನೀರು ಕೊಡಬೇಕಿದೆ. 2014 ರಲ್ಲಿ ನೀರಿನ ದರ ಏರಿಕೆ ಆಗಿದ್ದು ಇಲ್ಲಿಯವರೆಗೂ ಆಗಿಲ್ಲ. ನಾಗರೀಕರು, ಅಧಿಕಾರಿಗಳ ಜೊತೆ ಮಾತನಾಡಬೇಕಿದೆ. ಮುಂದೆ ಕುಳಿತು ಸಹಕಾರ ನೀಡುವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದಕ್ಕೂ ಮುನ್ನ ಶಾಂತಿನಗರದ ನಮ್ಮ ಮೆಟ್ರೋ ಕೇಂದ್ರ ಕಚೇರಿಯಲ್ಲಿ BMRCL ಅಧಿಕಾರಿಗಳ ಜತೆ ಸಭೆ ನಡೆಸಿದ ಡಿಕೆ ಶಿವಕುಮಾರ್, ವಾಸ್ತವಾಂಶ ಪರಿಶೀಲನೆ ನಡೆಸಿದರು. ಬೈಯ್ಯಪ್ಪನಹಳ್ಳಿ ಕೆ.ಆರ್ ಪುರಂ ಮೆಟ್ರೋ ಜುಲೈ ವೇಳೆಗೆ, ಕೆಂಗೇರಿ ಹಾಗೂ ಚಲಘಟ್ಟ ಆಗಸ್ಟ್ ಅಥವಾ ಸೆಪ್ಟೆಂಬರ್​ನಲ್ಲಿ, ನಾಗಸಂದ್ರ ಹಾಗೂ ಮಾದವಾರ ಸೆಪ್ಟೆಂಬರ್, ಅಕ್ಟೋಬರ್ ವೇಳೆಗೆ ಸಿದ್ಧವಾಗಬಹುದು ಎಂದು ಇದೇ ವೇಳೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು