AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥ; ಟಿವಿ9ನಲ್ಲಿ ಸುದ್ದಿ ಪ್ರಸಾರವಾದ ಬಳಿಕ ಎಚ್ಚೆತ್ತ ಅಧಿಕಾರಿಗಳು

ನೊಂದ ಸದಸ್ಯರೊಂದಿಗೆ ಮಾತನಾಡಿದ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆಗಿರುವ ಘಟನೆಯ ಬಗ್ಗೆ ಹೇಗೆ ಆಯಿತು? ನಿಮಗೆ ಆಸ್ಪತ್ರೆಯಲ್ಲಿ ಬಿಲ್ ಎಷ್ಟಾಗಿದೆ? ಇದಕ್ಕೆ ಕಾರಣ ಏನು? ಎಂದು ಎಲ್ಲಾ ವಿಷಯಗಳ ಮಾಹಿತಿಯನ್ನು ಪಡೆದಿದ್ದಾರೆ.

ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥ; ಟಿವಿ9ನಲ್ಲಿ ಸುದ್ದಿ ಪ್ರಸಾರವಾದ ಬಳಿಕ ಎಚ್ಚೆತ್ತ ಅಧಿಕಾರಿಗಳು
ಹೆಚ್‌ಬಿಆರ್ ಲೇಔಟ್‌ನ ಟೆಲಿಕಾಂ ಲೇಔಟ್‌ಗೆ ಭೇಟಿ ನೀಡಿದ ಅಧಿಕಾರಿಗಳು
TV9 Web
| Edited By: |

Updated on: Nov 17, 2021 | 1:45 PM

Share

ಬೆಂಗಳೂರು: ಕಾವೇರಿ ನೀರಿನೊಳಗೆ ಕಲುಷಿತ ನೀರು ಮಿಶ್ರಣವಾಗಿ, ನೀರು ಸೇವಿಸಿದ 20ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಸಿದಂತೆ ಟಿವಿ9 ಡಿಜಿಟಲ್​ನಲ್ಲಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಬಿಡಬ್ಲೂಎಸ್​ಎಸ್​ಬಿ (BWSSB) ಅಧಿಕಾರಿಗಳು, ಇಂದು (ನವೆಂಬರ್​ 17) ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನ ಟೆಲಿಕಾಂ ಲೇಔಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲದೇ ಸ್ಥಳೀಯರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ನಿನ್ನೆ (ನವೆಂಬರ್ 16) ಆರೋಗ್ಯ ಸಿಬ್ಬಂದಿ ಮತ್ತು ಲೋಕಯುಕ್ತ ಸಿಬ್ಬಂದಿ ಕೂಡ ಸ್ಥಳಕ್ಕೆ ಭೇಟಿದ್ದು, ಪರಿಶೀಲನೆ ನಡೆಸಿದ್ದರು. ಜೊತೆಗೆ ಸಂಜೆ ಸೋಶಿಯಲ್ ವೆಲ್ಫೇರ್ ಮತ್ತು ಎಂಪವರ್ ಆಫ್ ಇಂಡಿಯಾ ಟೀಮ್ ಕೂಡ ಸ್ಥಳಕ್ಕೆ ಭೇಟಿ ಮಾಡಿದ್ದಾರೆ. ನೊಂದ ಸದಸ್ಯರೊಂದಿಗೆ ಮಾತನಾಡಿದ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆಗಿರುವ ಘಟನೆಯ ಬಗ್ಗೆ ಹೇಗೆ ಆಯಿತು? ನಿಮಗೆ ಆಸ್ಪತ್ರೆಯಲ್ಲಿ ಬಿಲ್ ಎಷ್ಟಾಗಿದೆ? ಇದಕ್ಕೆ ಕಾರಣ ಏನು? ಎಂದು ಎಲ್ಲಾ ವಿಷಯಗಳ ಮಾಹಿತಿಯನ್ನು ಅಧಿಕಾರಿಗಳು ಪಡೆದಿದ್ದಾರೆ.

ಕಾವೇರಿ ನೀರಿಗೆ ಒಳಚರಂಡಿ ನೀರು ಮಿಶ್ರಣ ಒಳಚರಂಡಿ ಮಿಶ್ರಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ಬೆಂಗಳೂರಿನ ಹೆಚ್‌ಬಿಆರ್ ಲೇಔಟ್‌ನ ಟೆಲಿಕಾಂ ಬಡಾವಣೆಯಲ್ಲಿ ನಡೆದಿದೆ. ಕಾವೇರಿ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿದ್ದು, ಇದನ್ನು ತಿಳಿಯದೇ ನೀರು ಸೇವನೆ ಮಾಡಿದ ಜನರು ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದಾರೆ. ಸದ್ಯ 20ಕ್ಕೂ ಹೆಚ್ಚು ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನು ಆಸ್ಪತ್ರೆಯಲ್ಲಿ ಒಬ್ಬರಿಗೆ ಚಿಕಿತ್ಸೆಗಾಗಿ 5 ದಿನಕ್ಕೆ 50 ಸಾವಿರ ಬಿಲ್ ಮಾಡಿದ್ದಾರೆ. ಅಸ್ವಸ್ಥವಾಗಿರುವವರು ಕಲುಷಿತ ನೀರು ಸೇವಿಸಿರುವುದು ದೃಢವಾಗಿದೆ. ಪ್ರಾಣಾಪಾಯದಿಂದ ಪಾರಾದವರ ಕುಟುಂಬಸ್ಥರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲಾ ಆದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಭೇಟಿಯೇ ನೀಡಿಲ್ಲ. ನಮ್ಮ ಮನೆಗೆ ಸರಬರಾಜು ಮಾಡಿದ್ದ ನೀರು ಸಂಗ್ರಹಿಸಿಟ್ಟಿದ್ದೇವೆ. ಆ ನೀರು ಲ್ಯಾಬ್‌ಗೆ ಕಳಿಸುತ್ತೇವೆ ಎಂದು ರೋಗಿಯೊರ್ವರ ಪುತ್ರಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕುಡಿಯುವ ನೀರಿಗೆ ಒಳಚರಂಡಿಯ ನೀರು ಮಿಶ್ರಣ; ಕಲುಷಿತ ನೀರು ಕುಡಿದ ಮಕ್ಕಳು, ಮಹಿಳೆಯರಿಗೆ ವಾಂತಿ-ಭೇದಿ

ಬೆಂಗಳೂರು: ಕಾವೇರಿ ನೀರಿಗೆ ಒಳಚರಂಡಿ ನೀರು ಮಿಶ್ರಣ; 20ಕ್ಕೂ ಹೆಚ್ಚು ಜನರು ಅಸ್ವಸ್ಥ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ