AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳಿಗೆ 500 ಕೋಟಿ ಲೀಟರ್ ನೀರು ಉಳಿಸಿದ ಬೆಂಗಳೂರು ಜಲಮಂಡಳಿ; ಇದು ಸಾಧ್ಯವಾಗಿದ್ದು ಹೀಗೆ ನೋಡಿ!

ಅನಧಿಕೃತ ಸಂಪರ್ಕಗಳನ್ನು ಕಾನೂನುಬದ್ಧಗೊಳಿಸುವುದರಿಂದ ತೊಡಗಿ ಪೈಪ್‌ಲೈನ್‌ಗಳನ್ನು ಬದಲಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಪೋಲಾಗುವ ಅಥವಾ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣವನ್ನು ಶೇ 20ಕ್ಕೆ ಇಳಿಕೆ ಮಾಡಲು ಜಲಮಂಡಳಿ ಉದ್ದೇಶಿಸಿದೆ ಎಂದು ವರದಿಯಾಗಿದೆ.

ತಿಂಗಳಿಗೆ 500 ಕೋಟಿ ಲೀಟರ್ ನೀರು ಉಳಿಸಿದ ಬೆಂಗಳೂರು ಜಲಮಂಡಳಿ; ಇದು ಸಾಧ್ಯವಾಗಿದ್ದು ಹೀಗೆ ನೋಡಿ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 31, 2023 | 9:25 PM

Share

ಬೆಂಗಳೂರು: ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸುವ ಅಥವಾ ಅಪ್​ಗ್ರೇಡ್ ಮಾಡುವ ಮೂಲಕ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಸಿಕ (BWSSB) ಲೆಕ್ಕಕ್ಕೆ ಸಿಗದ ಅಥವಾ ಪೋಲಾಗುವ ನೀರನ್ನು (Unaccounted for Water / UfW) ಸಾರ್ವಕಾಲಿಕ ಕನಿಷ್ಠ ಮಟ್ಟವಾದ ಶೇ 28ಕ್ಕೆ ಇಳಿಕೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ವರದಿಯಾಗಿದೆ. 2021 ರ ಜೂನ್​ನಲ್ಲಿ, ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣ ಶೇಕಡಾ 36.95 ರಷ್ಟಿತ್ತು. ಇದು 2022 ರ ಜೂನ್ ವೇಳೆಗೆ ಶೇಕಡಾ 30.05 ಕ್ಕೆ ಇಳಿದಿತ್ತು. ಇದೀಗ ತಿಂಗಳಿಗೆ ಸುಮಾರು 500 ಕೋಟಿ ಲೀಟರ್ ನೀರನ್ನು ಉಳಿಸಲು ಮಂಡಳಿಗೆ ಸಾಧ್ಯವಾಗುತ್ತಿದೆ.

ಅನಧಿಕೃತ ಸಂಪರ್ಕಗಳನ್ನು ಕಾನೂನುಬದ್ಧಗೊಳಿಸುವುದರಿಂದ ತೊಡಗಿ ಪೈಪ್‌ಲೈನ್‌ಗಳನ್ನು ಬದಲಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಪೋಲಾಗುವ ಅಥವಾ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣವನ್ನು ಶೇ 20ಕ್ಕೆ ಇಳಿಕೆ ಮಾಡಲು ಜಲಮಂಡಳಿ ಉದ್ದೇಶಿಸಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಯೋಜನೆಯ ಒಂದು ಭಾಗವಾಗಿ, ಉಪವಿಭಾಗದ ಹಂತಗಳಲ್ಲಿ ನವೀಕೃತ ಬೃಹತ್ ಮೀಟರ್‌ಗಳನ್ನು ಅಳವಡಿಸಲು ಜಲಮಂಡಳಿಯು ಮುಂದಾಗಿದೆ. ಮೇಲ್ದರ್ಜೆಗೆ ಏರಿಸಿದ ತಂತ್ರಜ್ಞಾನದ ಸಹಾಯದಿಂದ ನೂತನ ಮೀಟರ್​ಗಳನ್ನು ಅಳವಡಿಸಲು ಮುಂದಾಗಿದ್ದು, ಅವುಗಳ ಹಲವಾರು ವೈಶಿಷ್ಟ್ಯಗಳನ್ನು ಹೊಂದಿರಲಿವೆ ಎಂದು ವರದಿ ಉಲ್ಲೇಖಿಸಿದೆ.

ಈಗ ಅಸ್ತಿತ್ವದಲ್ಲಿರುವ ಮೀಟರ್​​​ಗಳನ್ನು 10 ವರ್ಷಗಳ ಹಿಂದೆ ಸ್ಥಾಪಿಸಲಾಗಿದೆ. ನವೀಕೃತ ತಂತ್ರಜ್ಞಾನದ ಮೀಟರ್​​ಗಳನ್ನು ಅಳವಡಿಸುವುದರಿಂದ ಪೋಲಾಗುವ ನೀರಿನ ಪ್ರಮಾಣವನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವಾಗಲಿದೆ ಎಂದು ಜಲಮಂಡಳಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ಮತ್ತೆ ಮರುಜೀವ; ಭೂಮಿ ಕೊಟ್ಟ ರೈತರ ಜತೆ ಡಿಸಿಎಂ ಸಭೆ, ಅಳಲು ತೋಡಿಕೊಂಡ ಮಾಜಿ ಸೈನಿಕ

ಈಗ ಹೊಸ ತಂತ್ರಜ್ಞಾನ ಲಭ್ಯವಿದ್ದು, ಇವುಗಳ ಸಹಾಯದಿಂದ ನೀರಿನ ಹರಿವಿನ ಮೇಲೆ ಹೆಚ್ಚಿನ ನಿಗಾ ಇರಿಸಬಹುದು. ಪ್ರತಿ ಗಂಟೆಗೆ ಉಪವಿಭಾಗಗಳಿಗೆ ನೀರಿನ ಹರಿವನ್ನು ಮೇಲ್ವಿಚಾರಣೆ ಮಾಡಲು ಬೃಹತ್ ಮೀಟರ್‌ಗಳು ನಮಗೆ ಸಹಾಯ ಮಾಡುತ್ತವೆ. ಇಷ್ಟೇ ಅಲ್ಲದೆ, ಇವುಗಳ ಮೂಲಕ ನಿಖರವಾಗಿ ಎಲ್ಲಿ ಸೋರಿಕೆಯಾಗುತ್ತಿದೆ ಅಥವಾ ವ್ಯರ್ಥವಾಗಿದೆ ಎಂಬುದನ್ನು ನಾವು ಕಂಡುಹಿಡಿಯಬಹುದು ಎಂದು ಮಂಡಳಿಯ ಇಂಜಿನಿಯರ್ ಇನ್ ಚೀಫ್ ಸುರೇಶ್ ಹೇಳಿರುವುದನ್ನು ವರದಿ ಉಲ್ಲೇಖಿಸಿದೆ.

ಮಂಡಳಿಯ ಅಧಿಕಾರಿಗಳು ಕಂಟ್ರೋಲ್ ರೂಂನಿಂದಲೇ ರೀಡಿಂಗ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ ಮತ್ತು ತಕ್ಷಣ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?