AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ದರ ಹೆಚ್ಚಳ ಸುಳಿವು ನೀಡಿದ ಬೆಂಗಳೂರು ಜಲಮಂಡಳಿ: ಡಿಕೆಶಿ ನೇತೃತ್ವದ ಮುಂದಿನ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು ಜನತೆ ಮತ್ತೊಂದು ದರ ಏರಿಕೆಗೆ ಸಿದ್ಧರಾಗಬೇಕಾದ ಸಮಯ ಸನ್ನಿಹಿತವಾಗಿದೆ. ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಲು ಬೆಂಗಳೂರು ಜಲಮಂಡಳಿ ಸಿದ್ಧವಾಗುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಮುಂದಿನ ಸಭೆಯಲ್ಲಿ ಅಂತಿಮ ತೀರ್ಮಾನವಾಗುವ ಸಾಧ್ಯತೆ ಇದೆ.

ನೀರಿನ ದರ ಹೆಚ್ಚಳ ಸುಳಿವು ನೀಡಿದ ಬೆಂಗಳೂರು ಜಲಮಂಡಳಿ: ಡಿಕೆಶಿ ನೇತೃತ್ವದ ಮುಂದಿನ ಸಭೆಯಲ್ಲಿ ತೀರ್ಮಾನ ಸಾಧ್ಯತೆ
ಬೆಂಗಳೂರು ಜಲಮಂಡಳಿ
ಗಣಪತಿ ಶರ್ಮಾ
|

Updated on: Dec 04, 2024 | 10:29 AM

Share

ಬೆಂಗಳೂರು, ಡಿಸೆಂಬರ್ 4: ತೀವ್ರ ನಷ್ಟ ಅನುಭವಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇದೀಗ ನೀರಿನ ದರ ಏರಿಕೆಗೆ ಚಿಂತನೆ ಮಾಡಿದೆ. ಈ ವಿಚಾರದಲ್ಲಿ ಬೆಂಬಲ ನೀಡುವಂತೆ ಬೆಂಗಳೂರು ನಗರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ 27 ಮಂದಿ ಶಾಸಕರಿಗೆ ಮನವಿ ಮಾಡಿದೆ. ಎಲ್ಲ ಶಾಸಕರಿಗೆ ಜಲಮಂಡಳಿಯ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಪತ್ರ ಬರೆದಿದ್ದಾರೆ. ಮುಂಬರುವ ವಿಧಾನಸಭೆ ಅಧಿವೇಶನಕ್ಕೆ ಮುಂಚಿತವಾಗಿ ಜಲ ಮಂಡಳಿಯ ಆರ್ಥಿಕ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಶಾಸಕರ ಗಮನ ಸೆಳೆಯುವುದು ಅವರ ಉದ್ದೇಶ ಎನ್ನಲಾಗಿದೆ.

2014 ರ ನವೆಂಬರ್​​ನಲ್ಲಿ ಈ ಹಿಂದೆ ನೀರಿನ ದರ ಪರಿಷ್ಕರಣೆ ಮಾಡಲಾಗಿತ್ತು. ಅದೇ ಕೊನೆಯ ದರ ಪರಿಷ್ಕರಣೆ. ಹೀಗಾಗಿ ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಖಾತೆ ಹೊಂದಿರುವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಶೀಘ್ರದಲ್ಲೇ ನಡೆಯಲಿರುವ ಸಭೆಯಲ್ಲಿ ದರ ಏರಿಕೆ ಪ್ರಸ್ತಾಪ ಬೆಂಬಲಿಸಬೇಕು ಎಂದು ಶಾಸಕರಿಗೆ ಬರೆದ ಪತ್ರದಲ್ಲಿ ರಾಮ್ ಪ್ರಸಾತ್ ಮನೋಹರ್ ಮನವಿ ಮಾಡಿದ್ದಾರೆ.

ಎಷ್ಟು ಹೆಚ್ಚಾಗಲಿದೆ ದರ?

ಎಷ್ಟು ಪ್ರಮಾಣದಲ್ಲಿ ದರ ಏರಿಕೆ ಮಾಡಬೇಕು, ಯಾವಾಗಿನಿಂದ ಜಾರಿಗೆ ತರಬೇಕು ಎಂಬ ವಿಚಾರಗಳ ಬಗ್ಗೆ ರಾಮ್ ಪ್ರಸಾತ್ ಮನೋಹರ್ ಶಾಸಕರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿಲ್ಲ. ಮುಂದಿನ ಸಭೆಯಲ್ಲಿ ಈ ಕುರಿತು ಚರ್ಚೆಯಾಗುವ ನಿರೀಕ್ಷೆ ಇದೆ.

ವೆಚ್ಚದಲ್ಲಿ ಗಮನಾರ್ಹ ಏರಿಕೆ

ಕಳೆದ ದಶಕದಲ್ಲಿ ವಿದ್ಯುತ್‌ ಸೇರಿದಂತೆ ಇತರ ಅಗತ್ಯ ಸೇವೆ, ಸೌಕರ್ಯಗಳಿಗಾಗಿ ಜಲಮಂಡಳಿ ಮಾಡುತ್ತಿರುವ ವೆಚ್ಚದ ಗಮನಾರ್ಹ ಹೆಚ್ಚಳದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವೆಚ್ಚದಲ್ಲಿ ಶೇಕಡಾ 107.3 ರಷ್ಟು ಹೆಚ್ಚಾಗಿದೆ ಎಂದು ತಿಳಿಸಲಾಗಿದೆ. ನಿರ್ವಹಣೆ ವೆಚ್ಚ ಶೇ 122.5ರಷ್ಟು ಹೆಚ್ಚಿದ್ದರೆ, ವೇತನ ಮತ್ತು ಪಿಂಚಣಿ ಶೇ 61.3ರಷ್ಟು ಹೆಚ್ಚಿದೆ ಎಂದು ಉಲ್ಲೇಖಿಸಲಾಗಿದೆ.

ನಷ್ಟದಲ್ಲಿ ಜಲಮಂಡಳಿ

ಜಲ ಮಂಡಳಿಯ ಮಾಸಿಕ ವೆಚ್ಚವು 170 ಕೋಟಿ ರೂಪಾಯಿಗಳಾಗಿದ್ದು, ನೀರಿನ ಬಿಲ್‌ಗಳಿಂದ ಬರುವ ಆದಾಯ ಕೇವಲ 129 ಕೋಟಿ ರೂಪಾಯಿ ಆಗಿದೆ. ಇದು ಜಲಮಂಡಳಿಗೆ 41 ಕೋಟಿ ರೂಪಾಯಿಗಳ ಕೊರತೆ ಉಂಟುಮಾಡಿದೆ. ಹೊಸ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು, ಒಳಚರಂಡಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮತ್ತು ಹೊಸ ನೀರಿನ ಸಂಪರ್ಕಗಳಿಗಾಗಿ ಉದ್ದೇಶಿಸಲಾದ ಹಣವನ್ನು ಬಳಸಿಕೊಂಡು ಈ ಕೊರತೆಯನ್ನು ತಾತ್ಕಾಲಿಕವಾಗಿ ಸರಿದೂಗಿಸಲಾಗುತ್ತದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್​ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್

ನೀರಿನ ದರ ಪರಿಷ್ಕರಣೆ ಮಾಡದಿದ್ದರೆ ಮುಂದಿನ ಐದು ವರ್ಷಗಳಲ್ಲಿ 4,860 ಕೋಟಿ ರೂ.ನಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಮನೋಹರ್ ತಿಳಿಸಿದ್ದಾರೆ.

ಆದರೆ, ಎಷ್ಟು ಪ್ರಮಾಣದಲ್ಲಿ ದರ ಹೆಚ್ಚಳ ಮಾಡಬೇಕು ಎಂಬುದನ್ನು ಪತ್ರದಲ್ಲಿ ಅವರು ನಮೂದಿಸಿಲ್ಲ. ಮುಂದಿನ ದಿನಗಳಲ್ಲಿ ಈ ವಿಷಯದ ಕುರಿತು ಚರ್ಚೆಯಾಗುವ ನಿರೀಕ್ಷೆ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ