AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ

ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಲ ಮಂಡಳಿ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ
ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ
ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on: Mar 25, 2024 | 5:16 PM

Share

ನೆಲಮಂಗಲ, ಮಾ.25: ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ(Water Crisis) ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು (Bengaluru) ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಸಾರ್ವಜನಿಕರಿಗೆ ಉಚಿತವಾಗಿ ಹಂಚಬೇಕಿದ್ದ ನೀರನ್ನು ಟಿ.ದಾಸರಹಳ್ಳಿಯಲ್ಲಿ ಖಾಸಗಿ ಅಂಗಡಿ ಹಾಗೂ ಹೋಟೆಲ್​ಗಳಿಗೆ ನೀರು ಮಾರಾಟ ಮಾಡಲಾಗುತ್ತಿದೆ. ಅಂಗಡಿ ಹಾಗೂ ಹೊಟೇಲ್​ಗಳಿಗೆ ನೀರು ಬಿಟ್ಟು 500 ರೂಪಾಯಿ ಪಡೆಯುತ್ತಿದ್ದಾರೆ ಎಂದು ಅರೋಪಿಸಲಾಗಿದೆ. ನೀರು ಮಾರಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಬೆನ್ನಲ್ಲೇ ಸಾರ್ವಜನಿಕರು BWSSB ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Bangalore Water Crisis: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ

ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ BWSSB, ಟಿ.ದಾಸರಹಳ್ಳಿಯಲ್ಲಿ ನೀರು ಮಾರಾಟ ಮಾಡಿದ್ದ ಸಿಬ್ಬಂದಿ ವಿರುದ್ಧ ಬಾಗಲಗುಂಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಿಲ್ಲದೆ ಪರದಾಡುತ್ತಿದ್ದರೂ ರೈನ್​ ವಾಟರ್​ ಡ್ಯಾನ್ಸ್

ಹೋಳಿ ಸಂಭ್ರಮದ ವೇಳೆ ಬೆಂಗಳೂರು ಜಲಮಂಡಳಿಯ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ನಗರದ ಸರ್ಜಾಪುರ ಚಿಕ್ಕನಾಯಕನಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್​ನಲ್ಲಿ ಹೋಳಿ ಆಚರಿಸಿದ್ದಾರೆ. ಮನ ಟ್ರೋಪಿಕಲ್ ಅಪಾರ್ಟ್ಮೆಂಟ್ ಅಸೋಸಿಯೇಷನ್, ಡ್ರೈ ಡೇ ಹೋಲಿ ಬಿಟ್ಟು ರೈನ್ಸ್ ಡ್ಯಾನ್ಸ್ ಆಯೋಜಿಸಿದೆ. ನಗರದಲ್ಲಿ‌ ನೀರಿಲ್ಲದ್ದರೂ ಕ್ಯಾರೇ ಎನ್ನದೆ ಹೋಲಿ ಆಚರಿಸಿದ್ದಾರೆ. ವರ್ತೂರಿನ ಖಾಸಗಿ ರೆಸಾರ್ಟ್​​ನಲ್ಲೂ ಹೋಳಿ ಆಚರಿಸಲಾಗಿದೆ.

ಹೋಳಿ ಹಬ್ಬದ ಪ್ರಯುಕ್ತ ರೈನ್ ವಾಟರ್ ಡ್ಯಾನ್ಸ್ ಮಾಡದಂತೆ ಜಲಮಂಡಳಿ ಸೂಚನೆ ನೀಡಿದೆ. ಆದರೂ ನಿಯಮವನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಪೂಲ್​ಗಳನ್ನು ಹೋಳಿ ಆಚರಣೆ ಮಾಡಲಾಗಿದೆ. ನಗರದ ಪ್ರತಿಷ್ಠಿತ ಹೋಟೆಲ್, ರೆಸಾರ್ಟ್​ಗಳಲ್ಲಿ ರೈನ್ ವಾಟರ್ ಡ್ಯಾನ್ಸ್ ಮಾಡಲಾಗಿದೆ. ಈ ಕುರಿತು ಜಲಮಂಡಳಿ ಮಾಹಿತಿ ಪಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ