ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ

ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಲ ಮಂಡಳಿ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ
ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ
Follow us
| Updated By: Rakesh Nayak Manchi

Updated on: Mar 25, 2024 | 5:16 PM

ನೆಲಮಂಗಲ, ಮಾ.25: ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ(Water Crisis) ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು (Bengaluru) ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಸಾರ್ವಜನಿಕರಿಗೆ ಉಚಿತವಾಗಿ ಹಂಚಬೇಕಿದ್ದ ನೀರನ್ನು ಟಿ.ದಾಸರಹಳ್ಳಿಯಲ್ಲಿ ಖಾಸಗಿ ಅಂಗಡಿ ಹಾಗೂ ಹೋಟೆಲ್​ಗಳಿಗೆ ನೀರು ಮಾರಾಟ ಮಾಡಲಾಗುತ್ತಿದೆ. ಅಂಗಡಿ ಹಾಗೂ ಹೊಟೇಲ್​ಗಳಿಗೆ ನೀರು ಬಿಟ್ಟು 500 ರೂಪಾಯಿ ಪಡೆಯುತ್ತಿದ್ದಾರೆ ಎಂದು ಅರೋಪಿಸಲಾಗಿದೆ. ನೀರು ಮಾರಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಬೆನ್ನಲ್ಲೇ ಸಾರ್ವಜನಿಕರು BWSSB ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Bangalore Water Crisis: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ

ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ BWSSB, ಟಿ.ದಾಸರಹಳ್ಳಿಯಲ್ಲಿ ನೀರು ಮಾರಾಟ ಮಾಡಿದ್ದ ಸಿಬ್ಬಂದಿ ವಿರುದ್ಧ ಬಾಗಲಗುಂಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಿಲ್ಲದೆ ಪರದಾಡುತ್ತಿದ್ದರೂ ರೈನ್​ ವಾಟರ್​ ಡ್ಯಾನ್ಸ್

ಹೋಳಿ ಸಂಭ್ರಮದ ವೇಳೆ ಬೆಂಗಳೂರು ಜಲಮಂಡಳಿಯ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ನಗರದ ಸರ್ಜಾಪುರ ಚಿಕ್ಕನಾಯಕನಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್​ನಲ್ಲಿ ಹೋಳಿ ಆಚರಿಸಿದ್ದಾರೆ. ಮನ ಟ್ರೋಪಿಕಲ್ ಅಪಾರ್ಟ್ಮೆಂಟ್ ಅಸೋಸಿಯೇಷನ್, ಡ್ರೈ ಡೇ ಹೋಲಿ ಬಿಟ್ಟು ರೈನ್ಸ್ ಡ್ಯಾನ್ಸ್ ಆಯೋಜಿಸಿದೆ. ನಗರದಲ್ಲಿ‌ ನೀರಿಲ್ಲದ್ದರೂ ಕ್ಯಾರೇ ಎನ್ನದೆ ಹೋಲಿ ಆಚರಿಸಿದ್ದಾರೆ. ವರ್ತೂರಿನ ಖಾಸಗಿ ರೆಸಾರ್ಟ್​​ನಲ್ಲೂ ಹೋಳಿ ಆಚರಿಸಲಾಗಿದೆ.

ಹೋಳಿ ಹಬ್ಬದ ಪ್ರಯುಕ್ತ ರೈನ್ ವಾಟರ್ ಡ್ಯಾನ್ಸ್ ಮಾಡದಂತೆ ಜಲಮಂಡಳಿ ಸೂಚನೆ ನೀಡಿದೆ. ಆದರೂ ನಿಯಮವನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಪೂಲ್​ಗಳನ್ನು ಹೋಳಿ ಆಚರಣೆ ಮಾಡಲಾಗಿದೆ. ನಗರದ ಪ್ರತಿಷ್ಠಿತ ಹೋಟೆಲ್, ರೆಸಾರ್ಟ್​ಗಳಲ್ಲಿ ರೈನ್ ವಾಟರ್ ಡ್ಯಾನ್ಸ್ ಮಾಡಲಾಗಿದೆ. ಈ ಕುರಿತು ಜಲಮಂಡಳಿ ಮಾಹಿತಿ ಪಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ