AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ

ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಲ ಮಂಡಳಿ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ
ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Mar 25, 2024 | 5:16 PM

Share

ನೆಲಮಂಗಲ, ಮಾ.25: ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ(Water Crisis) ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು (Bengaluru) ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಸಾರ್ವಜನಿಕರಿಗೆ ಉಚಿತವಾಗಿ ಹಂಚಬೇಕಿದ್ದ ನೀರನ್ನು ಟಿ.ದಾಸರಹಳ್ಳಿಯಲ್ಲಿ ಖಾಸಗಿ ಅಂಗಡಿ ಹಾಗೂ ಹೋಟೆಲ್​ಗಳಿಗೆ ನೀರು ಮಾರಾಟ ಮಾಡಲಾಗುತ್ತಿದೆ. ಅಂಗಡಿ ಹಾಗೂ ಹೊಟೇಲ್​ಗಳಿಗೆ ನೀರು ಬಿಟ್ಟು 500 ರೂಪಾಯಿ ಪಡೆಯುತ್ತಿದ್ದಾರೆ ಎಂದು ಅರೋಪಿಸಲಾಗಿದೆ. ನೀರು ಮಾರಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಬೆನ್ನಲ್ಲೇ ಸಾರ್ವಜನಿಕರು BWSSB ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Bangalore Water Crisis: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ

ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ BWSSB, ಟಿ.ದಾಸರಹಳ್ಳಿಯಲ್ಲಿ ನೀರು ಮಾರಾಟ ಮಾಡಿದ್ದ ಸಿಬ್ಬಂದಿ ವಿರುದ್ಧ ಬಾಗಲಗುಂಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಿಲ್ಲದೆ ಪರದಾಡುತ್ತಿದ್ದರೂ ರೈನ್​ ವಾಟರ್​ ಡ್ಯಾನ್ಸ್

ಹೋಳಿ ಸಂಭ್ರಮದ ವೇಳೆ ಬೆಂಗಳೂರು ಜಲಮಂಡಳಿಯ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ನಗರದ ಸರ್ಜಾಪುರ ಚಿಕ್ಕನಾಯಕನಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್​ನಲ್ಲಿ ಹೋಳಿ ಆಚರಿಸಿದ್ದಾರೆ. ಮನ ಟ್ರೋಪಿಕಲ್ ಅಪಾರ್ಟ್ಮೆಂಟ್ ಅಸೋಸಿಯೇಷನ್, ಡ್ರೈ ಡೇ ಹೋಲಿ ಬಿಟ್ಟು ರೈನ್ಸ್ ಡ್ಯಾನ್ಸ್ ಆಯೋಜಿಸಿದೆ. ನಗರದಲ್ಲಿ‌ ನೀರಿಲ್ಲದ್ದರೂ ಕ್ಯಾರೇ ಎನ್ನದೆ ಹೋಲಿ ಆಚರಿಸಿದ್ದಾರೆ. ವರ್ತೂರಿನ ಖಾಸಗಿ ರೆಸಾರ್ಟ್​​ನಲ್ಲೂ ಹೋಳಿ ಆಚರಿಸಲಾಗಿದೆ.

ಹೋಳಿ ಹಬ್ಬದ ಪ್ರಯುಕ್ತ ರೈನ್ ವಾಟರ್ ಡ್ಯಾನ್ಸ್ ಮಾಡದಂತೆ ಜಲಮಂಡಳಿ ಸೂಚನೆ ನೀಡಿದೆ. ಆದರೂ ನಿಯಮವನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಪೂಲ್​ಗಳನ್ನು ಹೋಳಿ ಆಚರಣೆ ಮಾಡಲಾಗಿದೆ. ನಗರದ ಪ್ರತಿಷ್ಠಿತ ಹೋಟೆಲ್, ರೆಸಾರ್ಟ್​ಗಳಲ್ಲಿ ರೈನ್ ವಾಟರ್ ಡ್ಯಾನ್ಸ್ ಮಾಡಲಾಗಿದೆ. ಈ ಕುರಿತು ಜಲಮಂಡಳಿ ಮಾಹಿತಿ ಪಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ