ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ

ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಲ ಮಂಡಳಿ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ
ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ
Edited By: Rakesh Nayak Manchi

Updated on: Mar 25, 2024 | 5:16 PM

ನೆಲಮಂಗಲ, ಮಾ.25: ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ(Water Crisis) ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು (Bengaluru) ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಸಾರ್ವಜನಿಕರಿಗೆ ಉಚಿತವಾಗಿ ಹಂಚಬೇಕಿದ್ದ ನೀರನ್ನು ಟಿ.ದಾಸರಹಳ್ಳಿಯಲ್ಲಿ ಖಾಸಗಿ ಅಂಗಡಿ ಹಾಗೂ ಹೋಟೆಲ್​ಗಳಿಗೆ ನೀರು ಮಾರಾಟ ಮಾಡಲಾಗುತ್ತಿದೆ. ಅಂಗಡಿ ಹಾಗೂ ಹೊಟೇಲ್​ಗಳಿಗೆ ನೀರು ಬಿಟ್ಟು 500 ರೂಪಾಯಿ ಪಡೆಯುತ್ತಿದ್ದಾರೆ ಎಂದು ಅರೋಪಿಸಲಾಗಿದೆ. ನೀರು ಮಾರಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಬೆನ್ನಲ್ಲೇ ಸಾರ್ವಜನಿಕರು BWSSB ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Bangalore Water Crisis: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ

ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ BWSSB, ಟಿ.ದಾಸರಹಳ್ಳಿಯಲ್ಲಿ ನೀರು ಮಾರಾಟ ಮಾಡಿದ್ದ ಸಿಬ್ಬಂದಿ ವಿರುದ್ಧ ಬಾಗಲಗುಂಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಿಲ್ಲದೆ ಪರದಾಡುತ್ತಿದ್ದರೂ ರೈನ್​ ವಾಟರ್​ ಡ್ಯಾನ್ಸ್

ಹೋಳಿ ಸಂಭ್ರಮದ ವೇಳೆ ಬೆಂಗಳೂರು ಜಲಮಂಡಳಿಯ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ನಗರದ ಸರ್ಜಾಪುರ ಚಿಕ್ಕನಾಯಕನಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್​ನಲ್ಲಿ ಹೋಳಿ ಆಚರಿಸಿದ್ದಾರೆ. ಮನ ಟ್ರೋಪಿಕಲ್ ಅಪಾರ್ಟ್ಮೆಂಟ್ ಅಸೋಸಿಯೇಷನ್, ಡ್ರೈ ಡೇ ಹೋಲಿ ಬಿಟ್ಟು ರೈನ್ಸ್ ಡ್ಯಾನ್ಸ್ ಆಯೋಜಿಸಿದೆ. ನಗರದಲ್ಲಿ‌ ನೀರಿಲ್ಲದ್ದರೂ ಕ್ಯಾರೇ ಎನ್ನದೆ ಹೋಲಿ ಆಚರಿಸಿದ್ದಾರೆ. ವರ್ತೂರಿನ ಖಾಸಗಿ ರೆಸಾರ್ಟ್​​ನಲ್ಲೂ ಹೋಳಿ ಆಚರಿಸಲಾಗಿದೆ.

ಹೋಳಿ ಹಬ್ಬದ ಪ್ರಯುಕ್ತ ರೈನ್ ವಾಟರ್ ಡ್ಯಾನ್ಸ್ ಮಾಡದಂತೆ ಜಲಮಂಡಳಿ ಸೂಚನೆ ನೀಡಿದೆ. ಆದರೂ ನಿಯಮವನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಪೂಲ್​ಗಳನ್ನು ಹೋಳಿ ಆಚರಣೆ ಮಾಡಲಾಗಿದೆ. ನಗರದ ಪ್ರತಿಷ್ಠಿತ ಹೋಟೆಲ್, ರೆಸಾರ್ಟ್​ಗಳಲ್ಲಿ ರೈನ್ ವಾಟರ್ ಡ್ಯಾನ್ಸ್ ಮಾಡಲಾಗಿದೆ. ಈ ಕುರಿತು ಜಲಮಂಡಳಿ ಮಾಹಿತಿ ಪಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us