AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಲಿಕೆ ಮಾಡುತ್ತಾ ರಾಜ್ಯದಲ್ಲಿ ಇಂದು ರಜೆ ನೀಡದಿರುವುದನ್ನ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ರಜೆ ನೀಡದ ವಿಚಾರಕ್ಕೆ ಬಿಜೆಪಿ‌ ಆಕ್ಷೇಪ ವಿಚಾರಕ್ಕೆ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅಯೋಧ್ಯೆಯಲ್ಲಿ ಶತಮಾನಗಳ ಬಳಿಕ ಶ್ರೀರಾಮನ ಪ್ರತಿಷ್ಠಾಪನೆ ಆಗುತ್ತಿರುವಾಗ ಕರ್ನಾಟಕದಲ್ಲಿ ತಾವು ಸರ್ಕಾರಿ ರಜೆ ನೀಡದಿರುವುದನ್ನ ಸಮರ್ಥಿಸಿಕೊಂಡರು.

ಹೋಲಿಕೆ ಮಾಡುತ್ತಾ ರಾಜ್ಯದಲ್ಲಿ ಇಂದು ರಜೆ ನೀಡದಿರುವುದನ್ನ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಹೋಲಿಕೆ ಮಾಡುತ್ತಾ ಇಂದು ರಜೆ ನೀಡದಿರುವುದನ್ನ ಸಮರ್ಥಿಸಿಕೊಂಡ ಸಿದ್ದರಾಮಯ್ಯ
Anil Kalkere
| Edited By: |

Updated on:Jan 22, 2024 | 4:45 PM

Share

ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಗಳ್ಳಿ ಹೋಬಳಿಯಲ್ಲಿರುವ ಹಿರಂಡಹಳ್ಳಿ ಗ್ರಾಮದಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ಮಂದಿರವನ್ನು ಉದ್ಘಾಟಿಸಿದ್ರು. ಶ್ರೀ ರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿರುವ ದೇವಾಲಯದಲ್ಲಿ ಸೀತಾ-ರಾಮ, ಲಕ್ಷ್ಮಣ ಹಾಗೂ 33 ಅಡಿ ಆಂಜನೇಯ ದೇವರ ಪ್ರತಿಷ್ಠಾಪನೆ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಉಪಸ್ಥಿತಿಯಲ್ಲಿ ಕಳೆದ 3 ದಿನಗಳಿಂದ ಪೂಜೆ ಪುನಸ್ಕಾರಗಳನ್ನ ನಡೆಸಲಾಗಿದೆ.

ರಾಮ ಮಂದಿರ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಯೋಧ್ಯೆಯಲ್ಲಿ ಶತಮಾನಗಳ ಬಳಿಕ ಶ್ರೀರಾಮನ ಪ್ರತಿಷ್ಠಾಪನೆ ಆಗುತ್ತಿರುವಾಗ ಕರ್ನಾಟಕದಲ್ಲಿ ತಾವು ಸರ್ಕಾರಿ ರಜೆ ನೀಡದಿರುವುದನ್ನ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರಜೆ ನೀಡಿದ್ಯಾ? ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ಆದರೆ ಕೇರಳ, ದೆಹಲಿ (ಜನವರಿ 22 ರಂದು ದೆಹಲಿ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ), ಪಶ್ಚಿಮ ಬಂಗಾಳದಲ್ಲಿ ರಜೆ ಇದ್ಯಾ? ಎಂದು ರಜೆ ನೀಡದ ವಿಚಾರಕ್ಕೆ ಬಿಜೆಪಿ‌ ಆಕ್ಷೇಪ ವಿಚಾರಕ್ಕೆ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: ಮಂತ್ರಾಲಯದಲ್ಲಿ ಕೇಸರಿ ಧ್ವಜ ಹಾರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದ ಮುಸ್ಲಿಮರು

ಮುಂದುವರಿದು ಮಾತನಾಡಿದ ಸಿದ್ದರಾಮಯ್ಯ ಅವರು ಇದು ರಾಜಕೀಯ ಕಾರ್ಯಕ್ರಮ ಅಲ್ಲ. ಇಲ್ಲಿರುವ ರಾಮನಲ್ಲಿಯೇ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒಂದೇ ಅಲ್ವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ನಾನು ಅಯೋಧ್ಯೆಗೆ ಹೋಗುತ್ತೇನೆ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ ಅವರು ಗಾಂಧೀಜಿ ಕೂಡ ರಾಮನ ಭಕ್ತ ಎಂದರು. ಕಾರ್ಯಕ್ರಮದಲ್ಲಿ ದೇವಸ್ಥಾನ ನಿರ್ಮಿಸಿರುವ ಶ್ರೀರಾಮ ಟ್ರಸ್ಟ್ ವತಿಯಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನ ಮಾಡಲಾಯಿತು. ಶ್ರೀರಾಮ ಟ್ರಸ್ಟ್ ವತಿಯಿಂದ ಸಿಎಂ ಸಿದ್ದರಾಮಯ್ಯಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಹಾಗೂ ಬಿಲ್ಲು ಬಾಣ ನೀಡಲಾಯಿತು.

ನಾನು‌ ನಾಸ್ತಿಕನಲ್ಲ, ಯಾವತ್ತೂ ದೇವರ ಅಸ್ತಿತ್ವವನ್ನು ನಾನು ವಿರೋಧ ಮಾಡಿಲ್ಲ- ಸಿದ್ದರಾಮಯ್ಯ

ದೇಗುಲ ಉದ್ಘಾಟನೆ ಬಳಿಕ ವೇದಿಕೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಶ್ರೀರಾಮ ಚಂದ್ರ, ಸೀತಾದೇವಿ, ಲಕ್ಷ್ಮಣ, ಆಂಜನೇಯ ಇವರು ಮೂರ್ತಿಗಳುಳ್ಳ ಮೂರ್ತಿ ಪ್ರತಿಷ್ಠಾನೆಯಲ್ಲಿ ಸಂತೋಷದಿಂದ ಭಾಗವಹಿಸಿದ್ದೀವಿ. ನಾನು‌ ನಾಸ್ತಿಕನಲ್ಲ, ನಾನು ಕೂಡ ಆಸ್ತಿಕನೇ. ಶ್ರೀರಾಮಚಂದ್ರನ್ನ ಇಡೀ‌ ದೇಶ ಪ್ರೀತಿಸುತ್ತಾರೆ. 143 ಕೋಟಿ ಜನ‌ ಪೂಜಿಸುತ್ತಾರೆ. ರಾಜ್ಯದ ಹಳ್ಳಿಹಳ್ಳಿಗಳಲ್ಲಿ‌ ರಾಮನ ದೇವಸ್ಥಾನ ಇದೆ. ನಮ್ಮೂರಿನಲ್ಲಿ ನಾನೂ ಶ್ರೀರಾಮ ದೇವಸ್ಥಾನ ಕಟ್ಟಿಸಿದ್ದೀನಿ. ನಾವು ರಾಮ, ಆಂಜನೇಯನ ಪರಮ ಭಕ್ತರು. ಯಾವತ್ತೂ ಕೂಡ ನಾನು ದೇವರ ಅಸ್ತಿತ್ವವನ್ನು ವಿರೋಧ ಮಾಡಿಲ್ಲ ಎಂದರು.

ದೇವನೊಬ್ಬ, ನಾಮ ಹಲವು ಅಂತ ಹೇಳ್ತಾರೆ. ಕೆಲವರು ಈಶ್ವರ, ಆಂಜನೇಯ, ಕೃಷ್ಣಾ, ಚಾಂಮುಂಡಿ, ತಿಮ್ಮಪ್ಪ ರಾಮನನ್ನ ಪೂಜಿಸುತ್ತಾರೆ. ಹೀಗೆ ಬೇರೆಬೇರೆ ಹೆಸರುಗಳನ್ನ ದೇವರನ್ನ ಕರೆದು ಪೂಜಿಸುತ್ತಿರುವುದು ಅನಾದಿ ಕಾಲದಿಂದಲೂ ಬಂದಿದೆ. ಹೊಸದಾಗಿ ಶ್ರೀರಾಮ ಟೆಂಪಲ್ ಕಟ್ತಿಲ್ಲ. ಹಿಂದೆಯೂ ಕಟ್ಟಿದ್ದಿವಿ, ಈಗಲೂ ಕಟ್ಟಿದ್ದೀವಿ, ಮುಂದೆಯೂ ಕಟ್ಟುತ್ತಲೇ ಇರುತ್ತೇವೆ. ಬದುಕಿರುವವರೆಗೂ ಕಟ್ಟುತ್ತಿರುತ್ತೇವೆ. ರಾಮಾಯಣ ಆದರ್ಶ ಕೊಟ್ಟಿದೆ. ಮರ್ಯಾದಾ ಪುರುಷ, ಆದರ್ಶ ಪುರುಷ ಅಂತ ರಾಮನನ್ನ ಕರೆಯುತ್ತೇವೆ. ರಾಮರಾಜ್ಯ ಆಗ್ಬೇಕು ಅಂತ ಗಾಂಧೀಜಿಯವರು ಸಹ ಆಶಿಸಿದ್ದರು. ರಾಮರಾಜ್ಯ ಅಂದ್ರೆ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟ ಆಗ್ಬೇಕು. ದೇಶದ ಇಡೀ ದೈವ ಎಲ್ಲರಿಗೂ ಸೇರಿದ್ದು. ಎಲ್ಲ ಧರ್ಮಗಳು ಮನುಷ್ಯನ ಒಳಿತನ್ನ ಬಯಸುತ್ತದೆ. ಸಹಿಷ್ಣತೆ, ಸಹಬಾಳ್ವೆ ಅಂತ ಸಂವಿಧಾನದಲ್ಲಿ ಸ್ಪಷ್ಟವಾಗಿ ಬರೆದುಕೊಂಡಿದ್ದೇವೆ. ಎಲ್ಲರೂ ಮನುಷ್ಯರಾಗಿ ಬಾಳಬೇಕು. ಪ್ರೀತಿ, ವಿಶ್ವಾಸದಿಂದ ಬದುಕಬೇಕು, ಯಾರನ್ನೂ ದ್ವೇಷಿಸಬಾರದು. ಇದೇ ಅಂಶಗಳನ್ನ‌ ರಾಮಾಯಣ ಮತ್ತು ಮಹಾಭಾರತದಲ್ಲಿ ಹೇಳಿರೋದು ಎಂದು ಸಿ ಎಂ ಸಿದ್ದರಾಮಯ್ಯ ವ್ಯಾಖ್ಯಾನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:33 pm, Mon, 22 January 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ