AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ‌ ಬಾರಿಯ ಗಣೇಶೋತ್ಸವವನ್ನ ಸನಾತನ‌ ಧರ್ಮ ಜನಜಾಗೃತಿಗೆ ಮೀಸಲು: ಹಿಂದೂ ಪರ ಸಂಘಟನೆಗಳು ಕರೆ  

ಇಂದು ಸನಾತನ ಧರ್ಮವನ್ನೇ ನಾಶ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಂದು ಗಣೇಶೋತ್ಸವ ಮಂಡಳಿಗಳು ಸನಾತನ ಧರ್ಮದ ಬಗ್ಗೆ ಜಾಗೃತಿ ಮೂಡಿಸಬೇಕು. ಜನಜಾಗೃತಿ ಜೊತೆಗೆ ಐಕ್ಯತೆಯನ್ನು ಮೂಡಿಸುವ ಕೆಲಸ ಮಾಡೋಣ ಎಂದು ಹಿಂದೂ ಜನಜಾಗೃತಿ ಅಧ್ಯಕ್ಷ ಮೋಹನ್ ಗೌಡ ಕರೆ ಕೊಟ್ಟಿದ್ದಾರೆ.

ಈ‌ ಬಾರಿಯ ಗಣೇಶೋತ್ಸವವನ್ನ ಸನಾತನ‌ ಧರ್ಮ ಜನಜಾಗೃತಿಗೆ ಮೀಸಲು: ಹಿಂದೂ ಪರ ಸಂಘಟನೆಗಳು ಕರೆ  
ಹಿಂದೂ ಜನಜಾಗೃತಿ ಅಧ್ಯಕ್ಷ ಮೋಹನ್ ಗೌಡ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Sep 12, 2023 | 11:39 AM

Share

ಬೆಂಗಳೂರು ಸೆ.12: ಸನಾತನ ಧರ್ಮದ (Sanatan Dharma) ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ಅವಹೇಳನಾಕಾರಿ ಹೇಳಿಕೆ ದೇಶದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಈ ಮಧ್ಯೆಯೇ ಗಣೇಶೋತ್ಸವದಲ್ಲಿ (Ganesh Chaturthi) ಸನಾತನ ಧರ್ಮದ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನ ಹಿಂದೂ ಪರ ಸಂಘಟನೆಗಳು ಮುಂದಾಗಿವೆ. ಈ‌ ಬಾರಿಯ ಗಣೇಶೋತ್ಸವ ಸನಾತನ‌ ಜನಜಾಗೃತಿಗೆ ಮೀಸಲು ಎಂದು ಗಣೇಶೋತ್ಸವ ಮಂಡಳಿಗಳು ಕರೆಕೊಟ್ಟಿವೆ.

ಈ ಬಗ್ಗೆ ಬೆಂಗಳೂರಿನಲ್ಲಿ ಹಿಂದೂ ಜನಜಾಗೃತಿ ಅಧ್ಯಕ್ಷ ಮೋಹನ್ ಗೌಡ ಟಿವಿ9 ಜೊತೆ ಮಾತನಾಡಿ ಸನಾತನ ಧರ್ಮದ ಉಳಿವಿಗಾಗಿ ಬಾಲಗಂಗಾಧರ ತಿಲಕರು ಸಾರ್ವಜನಿಕರ ಗಣೇಶೋತ್ಸವವನ್ನು ಶುರು ಮಾಡಿದರು. ಆದರೆ ಇಂದು ಸನಾತನ ಧರ್ಮವನ್ನೇ ನಾಶ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಂದು ಗಣೇಶೋತ್ಸವ ಮಂಡಳಿಗಳು ಸನಾತನ ಧರ್ಮದ ಬಗ್ಗೆ ಜಾಗೃತಿ ಮೂಡಿಸಬೇಕು. ಜನಜಾಗೃತಿ ಜೊತೆಗೆ ಐಕ್ಯತೆಯನ್ನು ಮೂಡಿಸುವ ಕೆಲಸ ಮಾಡೋಣ ಎಂದು ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: Bengaluru Ganesh Chaturthi: ಗಣೇಶ ಪೆಂಡಾಲ್​ಗಳಿಗೆ ಅನುಮತಿ ನೀಡಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಬಿಬಿಎಂಪಿ 

ಇನ್ನು ವಿಜಯಪುರದಲ್ಲಿನ “ಸ್ವಾಮಿ ವಿವೇಕಾನಂದ ಸೇನೆಯಿಂದ ಆಚರಿಸಲ್ಪಡುವ ಗಜಾನನ ಮಹಾಮಂಡಳದ ವೇದಿಕೆಗೆ “ಸನಾತನ ಹಿಂದೂ ವೇದಿಕೆ” ಎಂದು ನಾಮಕರಣ ಮಾಡಲಾಗುವುದು. ವಿಜಯಪುರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಗಣೇಶೋತ್ಸವ ನಡೆಯಲಿದೆ, ಯಾವ ನಿರ್ಬಂಧಗಳೂ ಇರುವುದಿಲ್ಲ. ಅಲ್ಲದೇ ವಿಜಯಪುರದ ಪ್ರತಿ ಗಜಾನನ ಮಂಡಳಿಗಳಿಗೆ ಸ್ವಾತಂತ್ರ ವೀರ ಸಾವರ್ಕರ್ ಭಾವಚಿತ್ರ ಹಾಗೂ ತಲಾ 5,000 ರೂ. ದೇಣಿಗೆ ನೀಡಲಾಗುವುದು” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಎಕ್ಸ್​ (ಟ್ವಿಟರ್​) ಖಾತೆ ಮೂಲಕ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:38 am, Tue, 12 September 23

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​