AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಶಾಸಕ ಭೈರತಿ ಬಸವರಾಜ್‌ಗೆ ಹೃದಯ ಸಮಸ್ಯೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ನ್ಯಾಯಾಲಯವು ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆಗೆ ಒಳಪಡಿಸಲು ಸಿಐಡಿಗೆ ನಿರ್ದೇಶನ ನೀಡಿದೆ. ವೈದ್ಯಕೀಯ ವರದಿಯ ಆಧಾರದ ಮೇಲೆ, ಆರೋಪಿಗೆ ಜೈಲು ಶಿಕ್ಷೆ ಅಥವಾ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿ ಮುಂದುವರಿಸುವ ಬಗ್ಗೆ ನಾಳೆ ತೀರ್ಮಾನವಾಗಲಿದೆ.

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ
ಶಾಸಕ ಭೈರತಿ ಬಸವರಾಜ್‌
ಅಕ್ಷಯ್​ ಪಲ್ಲಮಜಲು​​
|

Updated on: Feb 13, 2026 | 5:26 PM

Share

ಬೆಂಗಳೂರು, ಫೆ.13: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ (Byrathi Basavaraj)​​​​​ ಅವರಿಗೆ ಚಿಕಿತ್ಸೆ ಕೊಡಿಸಲು ಕೋರ್ಟ್ ಸೂಚನೆ ನೀಡಿದೆ. ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿಐಡಿಗೆ ಸೂಚಿಸಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಭೈರತಿ ಬಸವರಾಜ್ ಅವರನ್ನು ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಯ ಅಗತ್ಯವಿದ್ದುದರಿಂದ, ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಅವರಿಗೆ ನ್ಯಾಯಾಲಯವು ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ

ಅವರನ್ನು ಹಿರಿಯ ವೈದ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಸಬೇಕು. ಸದ್ಯ ಭೈರತಿ ಬಸವರಾಜ್ ಸಿಐಡಿ ವಶದಲ್ಲಿರುವುದರಿಂದ, ಅವರ ಸುಪರ್ದಿಯಲ್ಲೇ ಮೆಡಿಕಲ್ ಟೆಸ್ಟ್ ನಡೆಯಲಿದೆ. ವೈದ್ಯಕೀಯ ವರದಿಯೊಂದಿಗೆ ನಾಳೆ (ಶನಿವಾರ) ನ್ಯಾಯಾಧೀಶರ ನಿವಾಸದಲ್ಲಿ ಆರೋಪಿಯನ್ನು ಹಾಜರುಪಡಿಸಬೇಕು ಎಂದು ಕೂಡ ಸೂಚನೆ ನೀಡಿದೆ. ಬೌರಿಂಗ್ ಮತ್ತು ಜಯದೇವ ಆಸ್ಪತ್ರೆಯ ವೈದ್ಯಕೀಯ ವರದಿಗಳನ್ನು ಆಧರಿಸಿ ಭೈರತಿ ಬಸವರಾಜ್ ಅವರಿಗೆ ಜೈಲು ಶಿಕ್ಷೆ ಆಗಲಿದೆಯೇ ಅಥವಾ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿಗೆ ನೀಡಲಾಗುವುದೇ ಎಂಬುದು ನಾಳೆ ತೀರ್ಮಾನವಾಗಲಿದೆ.

ವರದಿ: ವಿಕಾಸ್​​​ ಕ್ರೈಂ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ