Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ

ರಾಜಧಾನಿ ಬೆಂಗಳೂರಲ್ಲಿ ರೋಡ್ ರೇಜ್‌ ಪ್ರಕರಣವು ಮುಂದುವರಿದಿದೆ. ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದು, ಇದೀಗ ಕ್ಯಾಬ್ ಲಾಕನ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 10, 2024 | 3:28 PM

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru)  ರೋಡ್ ರೇಜ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ( ಫೆಬ್ರುವರಿ 9ರ) ರಾತ್ರಿ  ಹೆಬ್ಬಾಳ ಫ್ಲೈಓವರ್ ( hebbal flyover) ಮೇಲೆ ಮತ್ತೊಂದು ರೋಡ್ ರೇಜ್‌ ಪ್ರಕರಣ ನಡೆದಿದೆ. ಹೌದು..ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿಲು ಮುಂದಾಗಿದ್ದಾನೆ. ಕ್ಯಾಬ್​ ಚಾಲಕನ ಈ ಅಸಭ್ಯ ವರ್ತನೆಗೆ ಇತರೆ ವಾಹನ ಸವಾರರು ರೊಚ್ಚಿಗೆದಿದ್ದಾರೆ. ಇದರಿಂದ ಗಲಾಟೆ ಮತ್ತೊಷ್ಟು ಹೆಚ್ಚಾಗಿದೆ.  ಪ್ಯಾಂಟ್​ ಬಿಚ್ಚಿಲು ಮುಂದಾಗಿದ್ದ ಕ್ಯಾಬ್​ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಹೋಗುವಾಗ ಕ್ಯಾಬ್‌ಗೆ ಮತ್ತೊಂದು ಕಾರು ಟಚ್‌ ಆಗಿತ್ತು. ಇದರಿಂದ ಸಿಟ್ಟಿಗೆದ್ದು ಕ್ಯಾಬ್ ಚಾಲಕ ಹಾಗೂ ಕಾರಿನ ಡ್ರೈವರ್ ಮಧ್ಯೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕೋಪಗೊಂಡ ಕ್ಯಾಬ್‌ ಚಾಲಕ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಚಾಲಕನ ವಿಕೃತಿಗೆ ಗಲಾಟೆ ಮತ್ತಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Hit And Run: ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿ

ಕ್ಯಾಬ್‌ ಚಾಲಕನ ವರ್ತನೆಗೆ ಇತರೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಕಾರಲ್ಲಿ ಮಹಿಳೆಯರು ಮಕ್ಕಳು ಇದ್ದರೂ, ಅವರ ಮುಂದೆ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಿಡಿಕಾರಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್