AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ

ರಾಜಧಾನಿ ಬೆಂಗಳೂರಲ್ಲಿ ರೋಡ್ ರೇಜ್‌ ಪ್ರಕರಣವು ಮುಂದುವರಿದಿದೆ. ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದು, ಇದೀಗ ಕ್ಯಾಬ್ ಲಾಕನ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ
TV9 Web
| Edited By: |

Updated on: Feb 10, 2024 | 3:28 PM

Share

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru)  ರೋಡ್ ರೇಜ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ( ಫೆಬ್ರುವರಿ 9ರ) ರಾತ್ರಿ  ಹೆಬ್ಬಾಳ ಫ್ಲೈಓವರ್ ( hebbal flyover) ಮೇಲೆ ಮತ್ತೊಂದು ರೋಡ್ ರೇಜ್‌ ಪ್ರಕರಣ ನಡೆದಿದೆ. ಹೌದು..ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿಲು ಮುಂದಾಗಿದ್ದಾನೆ. ಕ್ಯಾಬ್​ ಚಾಲಕನ ಈ ಅಸಭ್ಯ ವರ್ತನೆಗೆ ಇತರೆ ವಾಹನ ಸವಾರರು ರೊಚ್ಚಿಗೆದಿದ್ದಾರೆ. ಇದರಿಂದ ಗಲಾಟೆ ಮತ್ತೊಷ್ಟು ಹೆಚ್ಚಾಗಿದೆ.  ಪ್ಯಾಂಟ್​ ಬಿಚ್ಚಿಲು ಮುಂದಾಗಿದ್ದ ಕ್ಯಾಬ್​ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಹೋಗುವಾಗ ಕ್ಯಾಬ್‌ಗೆ ಮತ್ತೊಂದು ಕಾರು ಟಚ್‌ ಆಗಿತ್ತು. ಇದರಿಂದ ಸಿಟ್ಟಿಗೆದ್ದು ಕ್ಯಾಬ್ ಚಾಲಕ ಹಾಗೂ ಕಾರಿನ ಡ್ರೈವರ್ ಮಧ್ಯೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕೋಪಗೊಂಡ ಕ್ಯಾಬ್‌ ಚಾಲಕ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಚಾಲಕನ ವಿಕೃತಿಗೆ ಗಲಾಟೆ ಮತ್ತಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Hit And Run: ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿ

ಕ್ಯಾಬ್‌ ಚಾಲಕನ ವರ್ತನೆಗೆ ಇತರೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಕಾರಲ್ಲಿ ಮಹಿಳೆಯರು ಮಕ್ಕಳು ಇದ್ದರೂ, ಅವರ ಮುಂದೆ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಿಡಿಕಾರಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ