AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Startup Policy: ಸ್ಟಾರ್ಟಪ್​ಗಳ ಉತ್ತೇಜನಕ್ಕೆ ಮಾಸ್ಟರ್ ಪ್ಲ್ಯಾನ್; 100 ಕೋಟಿ ರೂ. ನಿಧಿಗೆ ಸಚಿವ ಸಂಪುಟ ಅಸ್ತು

Karnataka Startup Policy 2022; ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Karnataka Startup Policy: ಸ್ಟಾರ್ಟಪ್​ಗಳ ಉತ್ತೇಜನಕ್ಕೆ ಮಾಸ್ಟರ್ ಪ್ಲ್ಯಾನ್; 100 ಕೋಟಿ ರೂ. ನಿಧಿಗೆ ಸಚಿವ ಸಂಪುಟ ಅಸ್ತು
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on:Dec 23, 2022 | 11:43 AM

Share

ಬೆಳಗಾವಿ: ಸ್ಟಾರ್ಟಪ್​ (Startup) ಉದ್ಯಮ ಕ್ಷೇತ್ರದಲ್ಲಿ ದೇಶಕ್ಕೆ ಗಣನೀಯ ಕೊಡುಗೆ ನೀಡುತ್ತಿರುವ ಕರ್ನಾಟಕ (Karnataka) ಇದೀಗ ನವೋದ್ಯಮಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ನೆರವಾಗುವ ಗುರಿಯೊಂದಿಗೆ ಹೊಸ ನೀತಿಯನ್ನು ರೂಪಿಸಲಾಗಿದ್ದು, ಇದಕ್ಕೆ ಸಚಿವ ಸಂಪುಟ (Karnataka cabinet) ಅನುಮೋದನೆ ನೀಡಿದೆ. ‘ಕರ್ನಾಟಕ ಸ್ಟಾರ್ಟಪ್ ನೀತಿ 2022’ರ ಅಡಿಯಲ್ಲಿ 100 ಕೋಟಿ ರೂ. ಮೊತ್ತದ ಸಾಹಸೋದ್ಯಮ ಬಂಡವಾಳ ನಿಧಿ (Venture Capital Fund) ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹೊಸದಾಗಿ ಅಭಿವೃದ್ಧಿಹೊಂದುತ್ತಿರುವ ಟೆಕ್, ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್, ಎಲೆಕ್ಟ್ರಿಕ್ ವಾಹನಗಳು, ರೋಬಾಟಿಕ್ಸ್, ಡ್ರೋನ್​ ಸೇರಿದಂತೆ ತಂತ್ರಜ್ಞಾನ ಮತ್ತು ಇತರ ಎಲ್ಲ ಕ್ಷೇತ್ರಗಳ ಸ್ಟಾರ್ಟಪ್​ಗಳ ಉತ್ತೇಜನಕ್ಕೆ ಸಾಹಸೋದ್ಯಮ ಬಂಡವಾಳ ನಿಧಿಯನ್ನು ಉಪಯೋಗಿಸಲಾಗುತ್ತದೆ.

ಇದನ್ನೂ ಓದಿ: Good News: ಜಾಗತಿಕ ಕಂಪನಿಗಳಲ್ಲಿ ಉದ್ಯೋಗ ಕಡಿತದ ನಡುವೆ ಭಾರತದ ಸ್ಟಾರ್ಟಪ್​ಗಳಲ್ಲಿ 2.3 ಲಕ್ಷ ಉದ್ಯೋಗ ಸೃಷ್ಟಿ

ಕರ್ನಾಟಕ ಸ್ಟಾರ್ಟಪ್ ನೀತಿ 2022ರ ಪ್ರಯೋಜನಗಳೇನು?

ಒಂದು ಬಾರಿಯ ಸಹಾಯಧನವಾಗಿ ಸ್ಟಾರ್ಟಪ್​ಗಳಿಗೆ 50 ಲಕ್ಷ ರೂ. ನೀಡಲು ಹೊಸ ನೀತಿಯಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಹೊಸದಾಗಿ ಉದ್ಯಮ ಆರಂಭಿಸುವವರಿಗೆ ತುಸು ಹಣಕಾಸು ನೆರವು ದೊರೆಯಲಿದ್ದು, ಪ್ರಯೋಜನವಾಗಲಿದೆ. ಇಷ್ಟೇ ಅಲ್ಲದೆ, ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಸ್ಟಾರ್ಟಪ್​ಗಳಿಗೆ ಉತ್ತೇಜನ ನೀಡುವ ಗುರಿಯನ್ನೂ ಹೊಸ ನೀತಿ ಒಳಗೊಂಡಿದೆ. ಬೆಂಗಳೂರು ನಗರ ಜಿಲ್ಲೆಯಿಂದ ಹೊರಭಾಗದಲ್ಲಿರುವ ತಂತ್ರಜ್ಞಾನ ಸಂಸ್ಥೆಗಳಲ್ಲಿ 50 ನ್ಯೂ ಏಜ್ ಇನ್ನೋವೇಷನ್ ನೆಟ್​​ವರ್ಕ್​ಗಳನ್ನು ಸ್ಥಾಪಿಸುವ ಗುರಿಯನ್ನೂ ಹೊಂದಿದೆ. ಪ್ರತಿಯೊಂದು ನ್ಯೂ ಏಜ್ ಇನ್ನೋವೇಷನ್ ನೆಟ್​​ವರ್ಕ್​ಗೂ ವಿದ್ಯಾರ್ಥಿ ಯೋಜನೆಗಳಿಗಾಗಿ 3 ವರ್ಷಗಳಿಗೆ 5 ಲಕ್ಷ ರೂ. ಮತ್ತು ಕಾರ್ಯಾಚರಣೆ ವೆಚ್ಚವಾಗಿ ಪ್ರತಿ ವರ್ಷ 12 ಲಕ್ಷ ರೂ. ನೀಡಲು ಹೊಸ ನೀತಿ ಉದ್ದೇಶಿಸಿದೆ.

ಮೂರು ವರ್ಷಗಳ ಅವಧಿಗೆ ಒಟ್ಟು ವೆಚ್ಚದ ಶೇಕಡಾ 25ರಷ್ಟು, ಗರಿಷ್ಠ 45 ಲಕ್ಷ ರೂ.ವರೆಗೆ ನೀಡಲು ಸರ್ಕಾರ ಉದ್ದೇಶಿಸಿದೆ. ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 10 ಲಕ್ಷ ರೂ. ನೇರ ನಿಧಿ ನೀಡಲು ನೀತಿಯಡಿ ಅವಕಾಶವಿದೆ. 100 ಕೋಟಿ ರೂ. ಮೊತ್ತದ ಸಾಹಸೋದ್ಯಮ ಬಂಡವಾಳ ನಿಧಿಯಲ್ಲಿ ಮಹಿಳೆಯರಿಗೆ ಶೇಕಡಾ 25ರ ಮೀಸಲಾತಿ ನೀಡುವ ಬಗ್ಗೆಯೂ ಉಲ್ಲೇಖಿಸಿದೆ.

ದೇಶದ ಆರ್ಥಿಕತೆಯಲ್ಲಿ ಕರ್ನಾಟಕದ ಕೊಡುಗೆ ಸಾಕಷ್ಟಿದೆ. ಸ್ಟಾರ್ಟಪ್ ಕ್ಷೇತ್ರದಲ್ಲಿ ಬೆಂಗಳೂರು ಗಣನೀಯ ಕೊಡುಗೆ ಸಲ್ಲಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಂದರ್ಭದಲ್ಲಿ ಹೇಳಿದ್ದರು. ಕರ್ನಾಟಕವು ಸಂಪ್ರದಾಯ ಮತ್ತು ತಂತ್ರಜ್ಞಾನ ಒಳಗೊಂಡ ಪ್ರದೇಶ. ಇದು ಪ್ರಕೃತಿ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮವಿರುವ ಸ್ಥಳವಾಗಿದೆ. ಪ್ರತಿಭೆ ಮತ್ತು ತಂತ್ರಜ್ಞಾನದ ಬಗ್ಗೆ ಯೋಚನೆ ಮಾಡಿದರೆ ನಮ್ಮ ಮನಸಿನಲ್ಲಿ ಬರುವ ಮೊದಲ ಚಿತ್ರಣ ಬೆಂಗಳೂರಿನದ್ದಾಗಿದೆ ಎಂದು ಮೋದಿ ಬಣ್ಣಿಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 am, Fri, 23 December 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ