AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಯಾವತ್ತಿದ್ದರೂ ವಲಸಿಗರೇ, ನಮ್ಮನ್ನು ವಲಸಿಗರು ಅಂತಾನೇ ಕರೆಯುತ್ತಾರೆ: ಸಚಿವ ಸಂಪುಟ ಸಭೆಯಲ್ಲಿ ಮುನಿರತ್ನ ಖೇದ

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಲಸಿಗ ಸಚಿವರ ಕಾಂಗ್ರೆಸ್ ವಾಪಸಾತಿ ವಿಚಾರವೇ ಹೆಚ್ಚು ಸದ್ದು ಮಾಡಿತು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯಲ್ಲಿ ವಲಸಿಗ ಸಚಿವರು ಸುದೀರ್ಘ ಸ್ಪಷ್ಟೀಕರಣ ನೀಡಿದ್ರು.

ನಾವು ಯಾವತ್ತಿದ್ದರೂ ವಲಸಿಗರೇ, ನಮ್ಮನ್ನು ವಲಸಿಗರು ಅಂತಾನೇ ಕರೆಯುತ್ತಾರೆ: ಸಚಿವ ಸಂಪುಟ ಸಭೆಯಲ್ಲಿ ಮುನಿರತ್ನ ಖೇದ
ಸಚಿವ ಮುನಿರತ್ನ
TV9 Web
| Edited By: |

Updated on:Jan 28, 2022 | 7:52 AM

Share

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ನಿನ್ನೆ(ಜ.27) ವಲಸಿಗ ಸಚಿವರ ವಿಚಾರವೇ ಬಹುಪಾಲು ಚರ್ಚೆ ನಡೆದಿದೆ. ಕಾಂಗ್ರೆಸ್ ಗೆ ವಾಪಾಸಾಗುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಜಿಲ್ಲಾ ಉಸ್ತುವಾರಿ ಹಂಚಿಕೆ ವಿಚಾರ ಪ್ರಸ್ತಾಪವಾಯಿತಾದರೂ ಹೈಕಮಾಂಡ್ ಕಡೆ ಕೈ ತೋರಿಸಿ ಸಿಎಂ ಸಚಿವರ ಬಾಯಿ ಮುಚ್ಚಿಸಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಲಸಿಗ ಸಚಿವರ ಕಾಂಗ್ರೆಸ್ ವಾಪಸಾತಿ ವಿಚಾರವೇ ಹೆಚ್ಚು ಸದ್ದು ಮಾಡಿತು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯಲ್ಲಿ ವಲಸಿಗ ಸಚಿವರು ಸುದೀರ್ಘ ಸ್ಪಷ್ಟೀಕರಣ ನೀಡಿದ್ರು. ಸಚಿವರಾದ ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ, ಎಂಟಿಬಿ ನಾಗರಾಜ್, ನಾರಾಯಣ ಗೌಡ, ಡಾ. ಸುಧಾಕರ್ ಸೇರಿದಂತೆ ವಲಸಿಗ ಸಚಿವರು ಸಂಪುಟ ಸಭೆಯಲ್ಲಿ ಸ್ಪಷ್ಟೀಕರಣ ಕೊಟ್ರು. ನಾವು ಮತ್ತೆ ಕಾಂಗ್ರೆಸ್‌ಗೆ ಹೋಗುತ್ತೇವೆ ಎಂಬ ಮಾತುಗಳೇ ಜೋರಾಗಿ ಬರುತ್ತಿವೆ. ನಾವು ಎಲ್ಲೂ ಹೋಗುವುದಿಲ್ಲ, ಪಕ್ಷದಲ್ಲೇ ಇರುತ್ತೇವೆ ಅಂದ್ರು.

ಈ ಮಧ್ಯೆ ಸಚಿವ ಎಂಟಿಬಿ ನಾಗರಾಜ್, ಬಿಜೆಪಿ ಸೇರ್ಪಡೆ ಸಮಯದಲ್ಲಿ ನಡೆದ ಬೆಳವಣಿಗೆಗಳನ್ನು, ತಮ್ಮ ನಿವಾಸಕ್ಕೆ ಬಿಜೆಪಿ ನಾಯಕರು ಬಂದಿದ್ದನ್ನು ಎಲ್ಲವನ್ನೂ ವಿವರವಾಗಿ ಹೇಳ್ತಾಯಿದ್ರು. ಆಗ ಮಧ್ಯ ಪ್ರವೇಶಿದ ಸಚಿವ ಅಶೋಕ್ ಹಾಗೂ ಆನಂದ್ ಸಿಂಗ್ ಎಂಟಿಬಿಯವರನ್ನ ಸುಮ್ಮನಿರಿಸಿದ್ರು. ಇನ್ನು ಸಚಿವ ಮುನಿರತ್ನ, ನಾವು ಯಾವತ್ತಿದ್ದರೂ ವಲಸಿಗರೇ, ಈ ಸರ್ಕಾರದ ಅವಧಿ ಮುಗಿದು ಮುಂದಿನ ಬಾರಿಯ ಸರ್ಕಾರ ಬಂದರು ಕೂಡಾ ನಮ್ಮನ್ನು ವಲಸಿಗರು ಅಂತಾನೇ ಕರೆಯುತ್ತಾರೆ ಅಂತಾ ಹೇಳಿದ್ರು.

ನೀವು ನಮ್ಮನ್ನು ಶಿವಮೊಗ್ಗಕ್ಕೆ ಕಳುಹಿಸಿದ್ರಿ, ಮೀಡಿಯಾದವರು ಕೂಡಾ ತುಂಬಾ ಕೇಳಿದರು, ನಾವು ಎಲ್ಲೂ ಪಕ್ಷ ಬಿಡಲ್ಲ ಎಂದು ಸಚಿವ ನಾರಾಯಣ ಗೌಡ ಹೇಳೀದ್ರು. ಕೊನೆಯಲ್ಲಿ ನಾವು ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಎಂದು ಸಚಿವ ಡಾ. ಸುಧಾಕರ್ ಚರ್ಚೆಗೆ ಅಂತ್ಯ ಹಾಡಿದ್ರು. ನಿಮಗೆ ನಮ್ಮ ಸಪೋರ್ಟ್ ಯಾವಾಗಲೂ ಇರುತ್ತದೆ, ಯಾವುದೇ ಸಮಸ್ಯೆ ಇಲ್ಲ, ಆತಂಕ ಬೇಡ, ನಿಮ್ಮ ಕೆಲಸದ ಬಗ್ಗೆ ಹೈಕಮಾಂಡ್ ಕೂಡಾ ಮೆಚ್ಚುಗೆ ಹೊಂದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ವಲಸಿಗ ಸಚಿವರಿಗೆ ಸಮಾಧಾನವಾಗುವಂತೆ ಮಾತನಾಡುದ್ರು.

ಇದನ್ನೂ ಓದಿ: Karnataka Cabinet Meeting: ಸಂಪುಟ ಸಭೆಯಲ್ಲಿ ವಲಸಿಗ ಸಚಿವರ ವಾಪಸಾತಿ ವಿಚಾರದ ಬಗ್ಗೆ ದೀರ್ಘ ಚರ್ಚೆ

Published On - 7:44 am, Fri, 28 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?