ಎಸ್ಎಸ್ಎಲ್​ಸಿ, ಪಿಯುಸಿ ಪಾಸಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJA) ಅರ್ಜಿ ಆಹ್ವಾನಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

ಎಸ್ಎಸ್ಎಲ್​ಸಿ, ಪಿಯುಸಿ ಪಾಸಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: May 09, 2024 | 8:22 PM

ಬೆಂಗಳೂರು, ಮೇ.09: ಎಸ್ಎಸ್ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJA) ಅರ್ಜಿ ಆಹ್ವಾನಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

ಜಿಲ್ಲಾ ಸಂಘಗಳಿಂದ ಆಹ್ವಾನಿಸಿದ ಅರ್ಜಿಗಳಲ್ಲಿ ಶೇ.90 ಅಂಕಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ರಾಜ್ಯ ಸಂಘಕ್ಕೆ ಕಳುಹಿಸಿಕೊಡಬೇಕು. ಸಂಘದ ಸದಸ್ಯರ ಮಕ್ಕಳಾಗಿದ್ದು, ಉತ್ತಮ ಸಾಧನೆ ಮಾಡಿದ್ದರೆ. (ಶೇ.60ಕ್ಕಿಂತ ಹೆಚ್ಚು 90ಕ್ಕಿಂತ ಕಡಿಮೆ) ಸಂಬಂಧಿಸಿದ ಆಯಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತಾಲೂಕು ಮತ್ತು ಜಿಲ್ಲಾ ಸಂಘಗಳು ಏರ್ಪಡಿಸಲಿವೆ.

ಈ ದಾಖಲಾತಿಗಳು ಅವಶ್ಯಕ

ಕೆಯುಡಬ್ಲ್ಯೂಜೆ ಸದಸ್ಯತ್ವದ ಗುರುತಿನ ಪತ್ರದ‌ (ಸದಸ್ಯರ ಮಕ್ಕಳಾಗಿರಬೇಕು) ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಆಧಾರ್ ಪ್ರತಿ, ಮಾರ್ಕ್ಸ್ ಕಾರ್ಡ್ ಪ್ರತಿ ಸಹಿತ ಪೂರ್ಣ ಮಾಹಿತಿ (ಎಲ್ಲ ಜೆರಾಕ್ಸ್ ಪ್ರತಿ ಲಗತ್ತಿಸುವುದು ಕಡ್ಡಾಯ)ಜೊತೆಗೆ ತುಂಬಿದ ಅರ್ಜಿಯನ್ನು (ನಿಗದಿತ ಫಾರಂ) ಆಯಾ ಜಿಲ್ಲಾ ಸಂಘದ ದೃಢೀಕರಣ ಸಹಿತ ರಾಜ್ಯ ಸಂಘಕ್ಕೆ ಕಳುಹಿಸಿಕೊಡಲು ಕೋರಿದೆ.

ವಿಳಾಸ ಇಂತಿದೆ

ಅಧ್ಯಕ್ಷರು/ಪ್ರಧಾನಕಾರ್ಯದರ್ಶಿ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು-9
ಇಲ್ಲಿಗೆ ಕಳುಹಿಸಿಕೊಡಲು ಕೋರಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us