AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​ 11ರಂದು ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಬಂದ್​ಗೆ ಕರೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಸಗಿ ವಾಹನ ಸಂಘಗಳ ಒಕ್ಕೂಟದಿಂದ ಸೆಪ್ಟೆಂಬರ್​ 11 ರಂದು ಬೆಂಗಳೂರಿನಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನಲೆ ಇಂದು(ಸೆ.05) ಬೆಂಗಳೂರು ಬಂದ್ ಪೋಸ್ಟರ್​ನ್ನು ಸಂಘಟನೆಗಳು ಬಿಡುಗಡೆ ಮಾಡಿ ಸಕಲ ಸಿದ್ಧತೆ ನಡೆಸಿದೆ. ಇನ್ನು ಯಾವ್ಯಾವ ವಾಹನಗಳು ಬಂದ್​ ಆಗಲಿವೆ?, ಸಂಘಗಳ ಬೇಡಿಕೆಯೇನು? ಇಲ್ಲಿದೆ ಮಾಹಿತಿ.

ಸೆಪ್ಟೆಂಬರ್​ 11ರಂದು ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಬಂದ್​ಗೆ ಕರೆ; ಇಲ್ಲಿದೆ ಸಂಪೂರ್ಣ ಮಾಹಿತಿ
ಸೆ.11 ರಂದು ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಬಂದ್​ಗೆ ಕರೆ
Follow us
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 05, 2023 | 3:24 PM

ಬೆಂಗಳೂರು, ಸೆ.05: ಕಾಂಗ್ರೆಸ್​ ಸರ್ಕಾರ ನೀಡಿದ ಐದು ಗ್ಯಾರೆಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ (Shakti Scheme) ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ನೀಡಲಾಗಿದೆ. ಇದರಿಂದ ಖಾಸಗಿ ವಾಹನ ಸಂಘಗಳ ಒಕ್ಕೂಟದಿಂದ ಸೆಪ್ಟೆಂಬರ್​ 11 ರಂದು ಬೆಂಗಳೂರಿನಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನಲೆ ಇಂದು(ಸೆ.05) ಬೆಂಗಳೂರು ಬಂದ್ ಪೋಸ್ಟರ್​ನ್ನು ಸಂಘಟನೆಗಳು ಬಿಡುಗಡೆ ಮಾಡಿ ಸಕಲ ಸಿದ್ಧತೆ ನಡೆಸಿದೆ. ಅಷ್ಟೇ ಅಲ್ಲ, ಆಟೋ, ಟ್ಯಾಕ್ಸಿ ಹಾಗೂ ಕ್ಯಾಬ್​ಗಳಿಗೆ ಕಪ್ಪು ಬಾವುಟ ಕಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಯಾವ್ಯಾವ ವಾಹನಗಳು ಬಂದ್​ ಆಗಲಿವೆ?

ಈಗಾಗಲೇ ಜಯನಗರದ ಶಾಲಿನಿ ಆಟದ ಮೈದಾನದಲ್ಲಿ ಸೆ.11ರಂದು ಬೆಂಗಳೂರು ಬಂದ್​ಗೆ ಕರೆ ಪೋಸ್ಟರ್​ ಬಿಡುಗಡೆ ಮಾಡಿ, ಬಾವುಟ ಹಂಚಿಕೆ ಆಗಿದೆ. ಬಂದ್ ಸಂಬಂಧ 32 ಒಕ್ಕೂಟಗಳ ಅಧ್ಯಕ್ಷರು ಮತ್ತು ಸದಸ್ಯರು ಭಾಗಿಯಾಗಿದ್ದು, ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಇನ್ನು ಸೆ.11 ರಂದು ಆಟೋ, ಟ್ಯಾಕ್ಸಿ, ಮಿನಿ ಟ್ರಕ್, ಖಾಸಗಿ ಬಸ್​ಗಳ ಸಂಚಾರ ಬಂದ್ ಆಗಲಿದೆ ಎಂದಿದ್ದಾರೆ.

ಇದನ್ನೂ ಓದಿ:ಇಂದು ಕೊಲ್ಹಾಪುರ ಬಂದ್​​: ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಸ್ಥಗಿತ

ಖಾಸಗಿ ವಾಹನ ಒಕ್ಕೂಟದ ಬೇಡಿಕೆಗಳೇನು?

ಇನ್ನು ಖಾಸಗಿ ವಾಹನಗಳ ಬೇಡಿಕೆಗಳು ಈ ಕೆಳಗಿನಂತಿದೆ.

1) ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ 2) ರ್ಯಾಪಿಡ್ ಬೈಕ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ 3) ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಬೇಕು 4)ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡೋದಕ್ಕೆ ಬ್ರೇಕ್ 5) ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ 6) ಓಲಾ, ಊಬರ್ ಆಪ್ ಆಧಾರಿತ ಸೇವೆಗಳ ನಿರ್ಬಂಧ 7) ಖಾಸಗಿ ಬಸ್​ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ 8) ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು 9) ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಇನ್ನಿತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ಸೆಪ್ಟೆಂಬರ್ 10 ರ ಮಧ್ಯರಾತ್ರಿಯಿಂದಲೇ ಬಂದ್ ಶುರುವಾಗಲಿದೆ. ಈ ಹಿನ್ನಲೆ ಇಂದು ಬಂದ್​ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ