AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಲಾಠಿಚಾರ್ಜ್ ವೇಳೆ ಇಬ್ಬರಿಗೆ ಗಾಯ

NEP: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಲಾಠಿಚಾರ್ಜ್​ ವೇಳೆ ಮುಖ್ತಾರ್ ಹಾಗೂ ಅರ್ಮಾನ್ ಎಂಬವರಿ​​ಗೆ ಗಾಯವಾಗಿದೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಲಾಠಿಚಾರ್ಜ್ ವೇಳೆ ಇಬ್ಬರಿಗೆ ಗಾಯ
ಪೊಲೀಸರ ಲಾಠಿಚಾರ್ಜ್ ವೇಳೆ ಇಬ್ಬರಿಗೆ ಗಾಯ
TV9 Web
| Edited By: |

Updated on:Sep 14, 2021 | 7:00 PM

Share

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳು ಇಂದು (ಸೆಪ್ಟೆಂಬರ್ 14) ಪ್ರತಿಭಟನೆ ನಡೆಸಿದ್ದಾರೆ. ನೂತನ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್‌ ಆಫ್ ಇಂಡಿಯಾದಿಂದ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ. ಮೈಸೂರು ಬ್ಯಾಂಕ್ ಸರ್ಕಲ್‌ ಬಳಿ ಲಾಠಿಚಾರ್ಜ್ ನಡೆದಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ.

ಪೊಲೀಸರ ಲಾಠಿಚಾರ್ಜ್​ ವೇಳೆ ವಿದ್ಯಾರ್ಥಿಗಳಿಬ್ಬರಿಗೆ ಗಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ವೇಳೆ ಘಟನೆ ನಡೆದಿದೆ. ಮೈಸೂರು ಬ್ಯಾಂಕ್ ಸರ್ಕಲ್‌ ಬಳಿ ಲಾಠಿಚಾರ್ಜ್ ಸಂದರ್ಭ ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಲಾಠಿಚಾರ್ಜ್​ ವೇಳೆ ಮುಖ್ತಾರ್ ಹಾಗೂ ಅರ್ಮಾನ್ ಎಂಬವರಿ​​ಗೆ ಗಾಯವಾಗಿದೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಮೊದಲು, ಎನ್​ಇಪಿ ಅಂದ್ರೆ ನಾಗ್ಪುರ್ ಶಿಕ್ಷಣ ನೀತಿ ಎಂದಿದ್ದ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್‌ ನಾರಾಯಣ ತಿರುಗೇಟು ನೀಡಿದ್ದರು. ಹೊಸ ಶಿಕ್ಷಣ ನೀತಿಯ (NEP) ಬಗ್ಗೆ ಗೊತ್ತಿಲ್ಲದಿದ್ರೆ ಬೇರೆಯವರ ಬಳಿ ಕೇಳಿ ತಿಳಿಯಲಿ. ಇಲ್ಲದಿದ್ರೆ ಪರಿಷತ್‌ನಲ್ಲಿ ನಾನೇ ಅವರಿಗೆ ತಿಳಿಸುತ್ತೇನೆ. ಡಿ.ಕೆ. ಶಿವಕುಮಾರ್‌ ಹೇಳಿಕೆ ಅವರಿಗೇ ತಿರುಗುಬಾಣವಾಗುತ್ತೆ. ಎನ್‌ಇಪಿ ಬಗ್ಗೆ ಡಿಕೆಶಿ ನ್ಯಾಯಬದ್ಧವಾಗಿ ವಿರೋಧಿಸುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶಿಕ್ಷಕರಿಗೆ ಅಪಮಾನ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಭಾನುವಾರ ಹೇಳಿಕೆ ನೀಡಿದ್ದರು.

ಭಾರತ ಅಭಿವೃದ್ಧಿ ದೇಶ ಆಗಬೇಕು, ಅಂದ್ರೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯ ಆಗುತ್ತೆ. ವಿದ್ಯಾರ್ಥಿಗಳಿಗೆ ಸದೃಢ ಹಾಗೂ ಉತ್ತಮ ಶಿಕ್ಷಣ ನೀತಿ ಕೊಡಬೇಕು. ವಿದ್ಯಾರ್ಥಿಗಳ ಸಬಲೀಕರಣ, ವಿದ್ಯಾರ್ಥಿಗಳ ಭವಿಷ್ಯ ಉತ್ತಮ ಆಗಬೇಕು ಎಂದು ಅಶ್ವತ್ಥ್ ನಾರಾಯಣ ಹೇಳಿದ್ದರು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಬಗ್ಗೆ ಗೊತ್ತಿಲ್ಲದಿದ್ರೆ ಬೇರೆಯವರ ಬಳಿ ಕೇಳಿ ತಿಳಿಯಲಿ: ಡಿಕೆ ಶಿವಕುಮಾರ್​ಗೆ ಅಶ್ವತ್ಥ್ ನಾರಾಯಣ ತಿರುಗೇಟು

ಇದನ್ನೂ ಓದಿ: NEP: ಬೆಂಗಳೂರು ನಗರ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ; ಎನ್​ಇಪಿ ವಿರೋಧಿಸಿ ಸಿದ್ದರಾಮಯ್ಯ ಪತ್ರ

Published On - 6:54 pm, Tue, 14 September 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!