AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ; 41 ಗ್ರಾಹಕರಿಗೆ ಟೋಪಿ ಹಾಕಿ ಮ್ಯಾನೇಜರ್ ಎಸ್ಕೇಪ್!

ಬೆಂಗಳೂರು ಮಲ್ಲೇಶ್ವರಂನ 15 ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಹಿರಿಯ ಮ್ಯಾನೇಜರ್ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ 3.11 ಕೋಟಿ ರೂ. ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ವಂಚನೆಗೊಳಪಟ್ಟ 41 ಖಾತೆಗಳನ್ನು ಫ್ರೀಜ್ ಮಾಡಲಾಗಿದ್ದು, ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ; 41 ಗ್ರಾಹಕರಿಗೆ ಟೋಪಿ ಹಾಕಿ ಮ್ಯಾನೇಜರ್ ಎಸ್ಕೇಪ್!
ನಕಲಿ ಗೋಲ್ಡ್​​ ಲೋನ್​​ ಸೃಷ್ಟಿ ಮಾಡಿ ಕೋಟಿ ಕೋಟಿ ವಂಚನೆ
Vinay Kashappanavar
| Edited By: |

Updated on:Dec 29, 2025 | 12:42 PM

Share

ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನ (Bengaluru) ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್​ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

3 ಕೋಟಿ ರೂ.ಗೂ ಹೆಚ್ಚು ವಂಚನೆ

ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಹೆಚ್ಚಿನ ಮಾಹಿತಿಗೆ ಈ ವೀಡಿಯೋ ನೋಡಿ

ಗ್ರಾಹಕರು ಎಚ್ಚರದಿಂದಿರುವಂತೆ ಸೂಚನೆ

ಈಗಾಗಲೇ ಕೆನರಾ ಬ್ಯಾಂಕ್ 41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಯ ನಂತರ ತಮ್ಮ ಖಾತೆಗಳಲ್ಲಿ ಯಾವುದೇ ಅನುಮಾನಾಸ್ಪದ ಲೋನ್ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:26 am, Mon, 29 December 25

Follow Us
Vinay Kashappanavar
Vinay Kashappanavar
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು