AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಪಾಕಿಸ್ತಾನ-ತಾಯಿ ಬೆಂಗಳೂರು: ಭಾರತ ಪೌರತ್ವಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಅಪ್ರಾಪ್ತ ಮಕ್ಕಳ ಅರ್ಜಿ ವಜಾ!

ಬೆಂಗಳೂರಿನ ಮಹಿಳೆಯೊಬ್ಬರು ಪಾಕಿಸ್ತಾನ ವ್ಯಕ್ತಿಯೊಂದಿಗೆ ಮದ್ವೆಯಾಗಿ ಬಳಿಕ ವಿಚ್ಚೇದನ ಪಡೆದುಕೊಂಡಿದ್ದು, ಇದೀಗ ತನ್ನ ಮಕ್ಕಳಿಗೆ ಭಾರತ ಪೌರತ್ವ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿದೆ.

ತಂದೆ ಪಾಕಿಸ್ತಾನ-ತಾಯಿ ಬೆಂಗಳೂರು: ಭಾರತ ಪೌರತ್ವಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಅಪ್ರಾಪ್ತ ಮಕ್ಕಳ ಅರ್ಜಿ ವಜಾ!
ಕರ್ನಾಟಕ ಹೈಕೋರ್ಟ್
ರಮೇಶ್ ಬಿ. ಜವಳಗೇರಾ
|

Updated on: Apr 07, 2023 | 8:29 AM

Share

ಬೆಂಗಳೂರು: ಪಾಕಿಸ್ತಾನ ಮೂಲದ ಇಬ್ಬರು ಅಪ್ರಾಪ್ತ ಮಕ್ಕಳು ಭಾರತದ ಪೌರತ್ವಕ್ಕಾಗಿ(Indian citizenship) ಕರ್ನಾಟಕ ಹೈಕೋರ್ಟ್‌ನಲ್ಲಿ(Karnataka High Court) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಮಾನವೀಯತೆ ಆಧಾರದಲ್ಲಿ ಪಾಸ್‌ಪೋರ್ಟ್ ಪಡೆದ ಭಾರತಕ್ಕೆ ಮರಳಿದ ಬೆಂಗಳೂರು ಮೂಲದ ಮಹಿಳೆ ಹಾಗೂ ಇಬ್ಬರು ಮಕ್ಕಳಿಗೆ ಕಾನೂನಿನ ತೊಡಕು ಎದುರಾಗಿದೆ. ಪಾಕಿಸ್ತಾನ ಪೌರತ್ವ(Pakistani citizenship) ತ್ಯಜಿಸದೆ ಭಾರತ ಪೌರತ್ವ ನೀಡಲು ಸಾಧ್ಯವಾಗದ ಕಾರಣ, ಕರ್ನಾಟಕ ಹೈಕೋರ್ಟ್ ಅರ್ಜಿ ವಜಾ ಮಾಡಿದೆ. ಭಾರತದ ಪೌರತ್ವ ನೀಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ, ಆದರೆ ಪಾಕಿಸ್ತಾನ ಪೌರತ್ವ ತ್ಯಜಿಸಲು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎನ್ನುವ ನಿಯಮವಿದೆ. ಈ ಕಾರಣದಿಂದ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.

ಬೆಂಗಳೂರಿನ ಅಮೀನಾ ರಾಹೀಲ್, ಪಾಕಿಸ್ತಾನದ ಮೂಲದ ಅಸಾದ್ ಮಲಿಕ್ ಜೊತೆ 2002ರಲ್ಲಿ ವಿವಾಹವಾಗಿದ್ದು, ದುಬೈನಲ್ಲಿ ಅದ್ಧೂರಿ ಮದುವೆ ಸಮಾರಂಭ ನಡೆದಿತ್ತು. ಉದ್ಯೋಗ ಕಾರಣ ಅಸಾದ್ ಹಾಗೂ ಅಮೀನಾ ದುಬೈನಲ್ಲೇ ನೆಲೆಸಿದ್ದರು. ದಂಪತಿಗಳಿಗೆ 17 ವಯಸ್ಸು ಹಾಗೂ 14 ವರ್ಷದ ಇಬ್ಬರು ಮಕ್ಕಳಿದ್ದಾರೆ. ಆದ್ರೆ, 2014ರಲ್ಲಿ ಅಮೀನಾ ಹಾಗೂ ಅಸಾದ್ ದುಬೈ ನ್ಯಾಯಾಲಯದಿಂದ ವಿಚ್ಚೇದನ ಪಡೆದಿದ್ದರು. ಈ ವೇಳೆ ಮಕ್ಕಳ ಪಾಲನ ಹಾಗೂ ಎಲ್ಲಾ ಹಕ್ಕನ್ನು ತಾಯಿಗೆ ನೀಡಲಾಗಿತ್ತು. 2021ರಲ್ಲಿ ಅಮೀನಾ ದುಬೈ ಜೀವನ ಕಷ್ಟವಾದ ಕಾರಣ ತಾಯಿ ಮನಗೆ ಮರಳಲು ನಿರ್ಧರಿಸಿದ್ದರು. ಆದ್ರೆ, ತಾಯಿ ಅಮೀನಾ ಭಾರತದ ಪ್ರಜೆಯಾದರೂ, ಮಕ್ಕಳಿಬ್ಬರು ಪಾಕಿಸ್ತಾನದ ಪ್ರಜೆಗಳಾಗಿದ್ದಾರೆ.

ತಂದೆ ಪಾಕಿಸ್ತಾನ ಪ್ರಜೆಯಾದ ಕಾರಣ ಮಕ್ಕಳಿಗೆ ಪಾಕಿಸ್ತಾನದ ಪೌರತ್ವ ಸಿಕ್ಕಿದೆ. ಆದರೆ ಅಮೀನಾ ಭಾರತಕ್ಕೆ ಮರಳಲು ರಾಯಭಾರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಇಬ್ಬರು ಅಪ್ರಾಪ್ತ ಮಕ್ಕಳ ಬಳಿ ಭಾರತದಲ್ಲಿ ಪಾಸ್‌ಪೋರ್ಟ್ ಇಲ್ಲದ ಕಾರಣ ಕಾನೂನು ತೊಡಕು ಎದುರಾಗಿತ್ತು. ಅಮೀನಾ ಹಾಗೂ ಮಕ್ಕಳು ಬೆಂಗಳೂರಿನಲ್ಲಿ ನೆಲಸಲು ಮಾನ್ಯತೆ ಇಲ್ಲದಾಗಿತ್ತು. ಈ ವೇಳೆ ಮಕ್ಕಳ ಪಾಕಿಸ್ತಾನ ಪಾಸ್‌ಪೋರ್ಟ್ ಕಚೇರಿಗೆ ಹಿಂದುರುಗಿಸಿ, ಮಾನವೀಯತೆ ಆಧಾರದಲ್ಲಿ ಭಾರತ ರಾಯಭಾರ ಕಚೇರಿ ತಾತ್ಕಾಲಿಕ ಪಾಸ್‌ಪೋರ್ಟ್ ನೀಡಿತ್ತು. ಬಳಿಕ ಬೆಂಗಳೂರಿಗೆ ಆಗಮಿಸಿದ ಅಮೀನಾ ಹಾಗೂ ಇಬ್ಬರು ಮಕ್ಕಳು ತಾಯಿ ಮನೆಯಲ್ಲಿ ವಾಸವಾಗಿದ್ದಾರೆ. 17 ವರ್ಷ ಹಾಗೂ 14 ವರ್ಷದ ಮಕ್ಕಳು ಪಾಕಿಸ್ತಾನ ಪೌರತ್ವ ತ್ಯಜಿಸಿ ಭಾರತದ ಪೌರತ್ವ ಪಡೆಯಬೇಕಿದೆ.

ಆದ್ರೆ ತಾತ್ಕಾಲಿಕ ಪಾಸ್‌ಪೋರ್ಟ್ ಅವಧಿ ಅಂತ್ಯಗೊಂಡಿದೆ. ಇತ್ತ ಗೃಹ ಸಚಿವಾಲಯಕ್ಕೆ ಮನವಿ ಮಾಡಿದರೂ ಉತ್ತರ ಬಂದಿರಲಿಲ್ಲ. ಹೀಗಾಗಿ ಅಪ್ರಾಪ್ತ ಮಕ್ಕಳಿಗೆ ಭಾರತ ಪೌರತ್ವ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್