AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಪಾಕಿಸ್ತಾನ-ತಾಯಿ ಬೆಂಗಳೂರು: ಭಾರತ ಪೌರತ್ವಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಅಪ್ರಾಪ್ತ ಮಕ್ಕಳ ಅರ್ಜಿ ವಜಾ!

ಬೆಂಗಳೂರಿನ ಮಹಿಳೆಯೊಬ್ಬರು ಪಾಕಿಸ್ತಾನ ವ್ಯಕ್ತಿಯೊಂದಿಗೆ ಮದ್ವೆಯಾಗಿ ಬಳಿಕ ವಿಚ್ಚೇದನ ಪಡೆದುಕೊಂಡಿದ್ದು, ಇದೀಗ ತನ್ನ ಮಕ್ಕಳಿಗೆ ಭಾರತ ಪೌರತ್ವ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿದೆ.

ತಂದೆ ಪಾಕಿಸ್ತಾನ-ತಾಯಿ ಬೆಂಗಳೂರು: ಭಾರತ ಪೌರತ್ವಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಅಪ್ರಾಪ್ತ ಮಕ್ಕಳ ಅರ್ಜಿ ವಜಾ!
ಕರ್ನಾಟಕ ಹೈಕೋರ್ಟ್
ರಮೇಶ್ ಬಿ. ಜವಳಗೇರಾ
|

Updated on: Apr 07, 2023 | 8:29 AM

Share

ಮುಖ್ಯಾಂಶಗಳು

  • ಭಾರತ ಪೌರತ್ವಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಪಾಕ್ ಮೂಲದ ಅಪ್ರಾಪ್ತ ಮಕ್ಕಳ ಅರ್ಜಿ ವಜಾ
  • ತನ್ನ ಮಕ್ಕಳಿಗೆ ಭಾರತ ಪೌರತ್ವ ನೀಡುವಂತೆ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಬೆಂಗಳೂರಿನ ಮಹಿಳೆ
  • ಪಾಕಿಸ್ತಾನ ಪೌರತ್ವ ತ್ಯಜಿಸಲು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎನ್ನುವ ಕಾರಣಕ್ಕೆ ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಪಾಕಿಸ್ತಾನ ಮೂಲದ ಇಬ್ಬರು ಅಪ್ರಾಪ್ತ ಮಕ್ಕಳು ಭಾರತದ ಪೌರತ್ವಕ್ಕಾಗಿ(Indian citizenship) ಕರ್ನಾಟಕ ಹೈಕೋರ್ಟ್‌ನಲ್ಲಿ(Karnataka High Court) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಮಾನವೀಯತೆ ಆಧಾರದಲ್ಲಿ ಪಾಸ್‌ಪೋರ್ಟ್ ಪಡೆದ ಭಾರತಕ್ಕೆ ಮರಳಿದ ಬೆಂಗಳೂರು ಮೂಲದ ಮಹಿಳೆ ಹಾಗೂ ಇಬ್ಬರು ಮಕ್ಕಳಿಗೆ ಕಾನೂನಿನ ತೊಡಕು ಎದುರಾಗಿದೆ. ಪಾಕಿಸ್ತಾನ ಪೌರತ್ವ(Pakistani citizenship) ತ್ಯಜಿಸದೆ ಭಾರತ ಪೌರತ್ವ ನೀಡಲು ಸಾಧ್ಯವಾಗದ ಕಾರಣ, ಕರ್ನಾಟಕ ಹೈಕೋರ್ಟ್ ಅರ್ಜಿ ವಜಾ ಮಾಡಿದೆ. ಭಾರತದ ಪೌರತ್ವ ನೀಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ, ಆದರೆ ಪಾಕಿಸ್ತಾನ ಪೌರತ್ವ ತ್ಯಜಿಸಲು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎನ್ನುವ ನಿಯಮವಿದೆ. ಈ ಕಾರಣದಿಂದ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.

ಬೆಂಗಳೂರಿನ ಅಮೀನಾ ರಾಹೀಲ್, ಪಾಕಿಸ್ತಾನದ ಮೂಲದ ಅಸಾದ್ ಮಲಿಕ್ ಜೊತೆ 2002ರಲ್ಲಿ ವಿವಾಹವಾಗಿದ್ದು, ದುಬೈನಲ್ಲಿ ಅದ್ಧೂರಿ ಮದುವೆ ಸಮಾರಂಭ ನಡೆದಿತ್ತು. ಉದ್ಯೋಗ ಕಾರಣ ಅಸಾದ್ ಹಾಗೂ ಅಮೀನಾ ದುಬೈನಲ್ಲೇ ನೆಲೆಸಿದ್ದರು. ದಂಪತಿಗಳಿಗೆ 17 ವಯಸ್ಸು ಹಾಗೂ 14 ವರ್ಷದ ಇಬ್ಬರು ಮಕ್ಕಳಿದ್ದಾರೆ. ಆದ್ರೆ, 2014ರಲ್ಲಿ ಅಮೀನಾ ಹಾಗೂ ಅಸಾದ್ ದುಬೈ ನ್ಯಾಯಾಲಯದಿಂದ ವಿಚ್ಚೇದನ ಪಡೆದಿದ್ದರು. ಈ ವೇಳೆ ಮಕ್ಕಳ ಪಾಲನ ಹಾಗೂ ಎಲ್ಲಾ ಹಕ್ಕನ್ನು ತಾಯಿಗೆ ನೀಡಲಾಗಿತ್ತು. 2021ರಲ್ಲಿ ಅಮೀನಾ ದುಬೈ ಜೀವನ ಕಷ್ಟವಾದ ಕಾರಣ ತಾಯಿ ಮನಗೆ ಮರಳಲು ನಿರ್ಧರಿಸಿದ್ದರು. ಆದ್ರೆ, ತಾಯಿ ಅಮೀನಾ ಭಾರತದ ಪ್ರಜೆಯಾದರೂ, ಮಕ್ಕಳಿಬ್ಬರು ಪಾಕಿಸ್ತಾನದ ಪ್ರಜೆಗಳಾಗಿದ್ದಾರೆ.

ತಂದೆ ಪಾಕಿಸ್ತಾನ ಪ್ರಜೆಯಾದ ಕಾರಣ ಮಕ್ಕಳಿಗೆ ಪಾಕಿಸ್ತಾನದ ಪೌರತ್ವ ಸಿಕ್ಕಿದೆ. ಆದರೆ ಅಮೀನಾ ಭಾರತಕ್ಕೆ ಮರಳಲು ರಾಯಭಾರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಇಬ್ಬರು ಅಪ್ರಾಪ್ತ ಮಕ್ಕಳ ಬಳಿ ಭಾರತದಲ್ಲಿ ಪಾಸ್‌ಪೋರ್ಟ್ ಇಲ್ಲದ ಕಾರಣ ಕಾನೂನು ತೊಡಕು ಎದುರಾಗಿತ್ತು. ಅಮೀನಾ ಹಾಗೂ ಮಕ್ಕಳು ಬೆಂಗಳೂರಿನಲ್ಲಿ ನೆಲಸಲು ಮಾನ್ಯತೆ ಇಲ್ಲದಾಗಿತ್ತು. ಈ ವೇಳೆ ಮಕ್ಕಳ ಪಾಕಿಸ್ತಾನ ಪಾಸ್‌ಪೋರ್ಟ್ ಕಚೇರಿಗೆ ಹಿಂದುರುಗಿಸಿ, ಮಾನವೀಯತೆ ಆಧಾರದಲ್ಲಿ ಭಾರತ ರಾಯಭಾರ ಕಚೇರಿ ತಾತ್ಕಾಲಿಕ ಪಾಸ್‌ಪೋರ್ಟ್ ನೀಡಿತ್ತು. ಬಳಿಕ ಬೆಂಗಳೂರಿಗೆ ಆಗಮಿಸಿದ ಅಮೀನಾ ಹಾಗೂ ಇಬ್ಬರು ಮಕ್ಕಳು ತಾಯಿ ಮನೆಯಲ್ಲಿ ವಾಸವಾಗಿದ್ದಾರೆ. 17 ವರ್ಷ ಹಾಗೂ 14 ವರ್ಷದ ಮಕ್ಕಳು ಪಾಕಿಸ್ತಾನ ಪೌರತ್ವ ತ್ಯಜಿಸಿ ಭಾರತದ ಪೌರತ್ವ ಪಡೆಯಬೇಕಿದೆ.

ಆದ್ರೆ ತಾತ್ಕಾಲಿಕ ಪಾಸ್‌ಪೋರ್ಟ್ ಅವಧಿ ಅಂತ್ಯಗೊಂಡಿದೆ. ಇತ್ತ ಗೃಹ ಸಚಿವಾಲಯಕ್ಕೆ ಮನವಿ ಮಾಡಿದರೂ ಉತ್ತರ ಬಂದಿರಲಿಲ್ಲ. ಹೀಗಾಗಿ ಅಪ್ರಾಪ್ತ ಮಕ್ಕಳಿಗೆ ಭಾರತ ಪೌರತ್ವ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ