AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ತರಬೇತಿ ವೇಳೆ ಯುವತಿ ಎದುರೇ ಹಸ್ತಮೈಥುನ: ತರಬೇತುದಾರನ ವಿರುದ್ಧ ಕೇಸ್ ಬುಕ್, ಲೈಸೆನ್ಸ್ ರದ್ದು

ಯುವತಿಗೆ ಕಾರು ಚಾಲನೆ ತರಬೇತಿ ನೀಡುವಾಗ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಡ್ರೈವಿಂಗ್ ಸ್ಕೂಲ್ ಪರವಾನಗಿ ಹಾಗೂ ತರಬೇತುದಾರನ ಚಾಲನಾ ಪರವಾನಗಿ ಕೂಡಲೇ ರದ್ದುಗೊಳಿಸಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ವಿವರ ಇಲ್ಲಿದೆ.

ಕಾರು ತರಬೇತಿ ವೇಳೆ ಯುವತಿ ಎದುರೇ ಹಸ್ತಮೈಥುನ: ತರಬೇತುದಾರನ ವಿರುದ್ಧ ಕೇಸ್ ಬುಕ್, ಲೈಸೆನ್ಸ್ ರದ್ದು
ಪ್ರಾತಿನಿಧಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Jul 22, 2024 | 3:33 PM

Share

ಬೆಂಗಳೂರು (ಜುಲೈ 22): ಯುವತಿಗೆ ಕಾರು ಚಾಲನೆ ತರಬೇತಿ ನೀಡುವಾಗ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರನ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಕ್ಷ್ಮಿಪುರದ 18 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಎಂಬಾತನ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಇನ್ನು ಕಾರಿ ಚಾಲನಾ ತರಬೇತಿದಾರನ ಅಸಭ್ಯ ವರ್ತನೆಯ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿರುವುದನ್ನು ಗಮನಿಸಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಸವೇಶ್ವರನಗರ ಮಾರುತಿ ಡ್ರೈವಿಂಗ್ ಸ್ಕೂಲ್ ಪರವಾನಗಿ ಹಾಗೂ ಚಾಲಕ ಅಣ್ಣಪ್ಪ ಚಾಲನಾ ಪರವಾನಗಿ ಕೂಡಲೇ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಡ್ರೈವಿಂಗ್ ಸ್ಕೂಲ್ ಗಳಲ್ಲಿ ಈ ರೀತಿ ಘಟನೆ ಮರುಕಳಿಸದಂತೆ ನಿರ್ದೇಶನ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಪ್ರಕರಣ ಹಿನ್ನೆಲೆ?

ಕಾರು ಚಾಲನೆ ಕಲಿಯಲು ಯುವತಿ ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನಲ್ಲಿ ನೋಂದಣಿ ಮಾಡಿಕೊಂಡು ಕೋರ್ಸ್‌ ಮುಗಿಸಿದ್ದಳು. ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪನೇ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದ. ಕೋರ್ಸ್‌ ಮುಗಿದ ಬಳಿಕ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಗೆ ಹೇಳಿದ್ದ. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪನಿಗೆ 10,500 ರೂ. ಪಾವತಿಸಿದ್ದಾರೆ.

ಇದನ್ನೂ ಓದಿ: ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ; ಕುಖ್ಯಾತ ಭೂಕಬಳಿಕೆದಾರ ಅರೆಸ್ಟ್

ಅದರಂತೆ ಜೂ.26ರಂದು ವಿಶೇಷ ಕ್ಲಾಸ್‌ ಆರಂಭಿಸಿದ್ದ ಅಣ್ಣಪ್ಪ, ಪ್ರತಿ ದಿನ ಯುವತಿಯ ಮನೆ ಬಳಿ ಬಂದು ಆಕೆ ಕಾರಿನಲ್ಲೇ ಒಂದು ಗಂಟೆ ಚಾಲನೆ ತರಬೇತಿ ನೀಡುತ್ತಿದ್ದ. ಜು.7ರಂದು ಬೆಳಗ್ಗೆ 6 ಗಂಟೆಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಗೆ ಚಾಲನೆ ಮಾಡಲು ಕಾರು ನೀಡಿದ್ದಾನೆ. ಯುವತಿ ಬಸವೇಶ್ವರನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ಯುವತಿ ಕಾರು ಚಾಲನೆ ಮಾಡುತ್ತಿದ್ದರು.

ಈ ವೇಳೆ ಪಕ್ಕದ ಆಸನದಲ್ಲಿ ಕುಳಿತಿದ್ದ ಅಣ್ಣಪ್ಪ, ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದರಿಂದ ಆತಂಕಗೊಂಡ ಯುವತಿ, ಕಾರನ್ನು ಮನೆಗೆ ಕಡೆಗೆ ತಿರುಗಿಸಿದ್ದಾರೆ. ಈ ವೇಳೆ ಅಣ್ಣಪ್ಪ ಎಚ್ಚೆತ್ತುಕೊಂಡು ಸುಮ್ಮನಾಗಿದ್ದ. ನಂತರ ಕಾರು ಚಾಲನೆ ತರಬೇತಿ ನೆಪದಲ್ಲಿ ಅನುಚಿತವಾಗಿ ವರ್ತಿಸಿ ಮುಜುಗರ ಉಂಟು ಮಾಡಿದ ಅಣ್ಣಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರು ನೀಡಿದ್ದಳು. ಈ ದೂರಿನ ಮೇರೆಗೆ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್