AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Kambala: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು, ಕಾರಣವೇನು?

Bengaluru Kambala: ಬೆಂಗಳೂರಿನಲ್ಲಿ ಕಂಬಳ ಆಯೋಜಿಸಿದ್ದ ಸಂಘಟಕರ ವಿರುದ್ಧ ದೂರು ದಾಖಲಾಗಿದೆ. ಅನುಮತಿ ಪಡೆಯದೇ ಬ್ಯಾನರ್, ಫ್ಲೆಕ್ಸ್​ ಅವಳಡಿಸಿದ್ದಕ್ಕೆ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru Kambala: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು, ಕಾರಣವೇನು?
TV9 Web
| Edited By: |

Updated on: Nov 28, 2023 | 12:44 PM

Share

ಬೆಂಗಳೂರು, (ನವೆಂಬರ್ 28): ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಂಬಳ (Kambla) ಅದ್ಧೂರಿಯಾಗಿ ತೆರೆ ಕಂಡಿದೆ. ಲಕ್ಷಾಂತರ ಜನರು ಕೋಣಗಳ ಓಟವನ್ನು ನೋಡಿ ಫುಲ್ ಖುಷ್​ ಆಗಿದ್ದಾರೆ. ಮತ್ತೊಂದೆಡೆ ಕಂಬಳ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಫ್ಲೆಕ್ಸ್​, ಬ್ಯಾನರ್​ ಅಳವಡಿಸಿದ್ದಕ್ಕೆ ಬಿಬಿಎಂಪಿ ವಾರ್ಡ್ ನ ಕಂದಾಯ ನಿರೀಕ್ಷಕ ನೀಡಿದ ದೂರಿನ ಮೇರೆಗೆ ಕಂಬಳ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದೇ ಮೊದಲ ಬಾರಿಗೆ ಸಿಲಿಕಾನ್​ ಸಿಟಿಯಲ್ಲಿ ಕಾರವಳಿ ಭಾಗದ ಪ್ರಮುಖ ಕ್ರೀಡೆಯಾದ ಕಂಬಳವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿತ್ತು. ಈ ಹಿನ್ನಲೆ ಕಂಬಳಕ್ಕೆ ಶುಭಾಶಯ ಕೋರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರು. ಆದ್ರೆ, ಕಂಬಳ ಆಯೋಜಕರು ಯಾವುದೇ ಅನುಮತಿ ಪಡೆದಿರಲಿಲ್ಲ.

ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರಿಗೆ ಬಿಬಿಎಂಪಿ ಶಾಕ್; ಬ್ಯಾನರ್, ಫ್ಲೆಕ್ಸ್ ಹಾಕಿದ್ದಕ್ಕೆ ದಂಡ

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಾಳಿ ಮಾಡಿ ಫ್ಲೆಕ್ಸ್​, ಬ್ಯಾನರ್ ತೆರವುಗೊಳಿಸಿತ್ತು. ಅಲ್ಲದೇ ದಂಡ ಸಹ ವಿಧಿಸಿತ್ತು. ಇದೀಗ ಪ್ರಕರವನ್ನೂ ದಾಖಲಿಸಿದೆ. ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಸಂಬಂಧ ಬಿಬಿಎಂಪಿಗೆ ಹಲವು ಬಾರಿ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಈ ಬಗ್ಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಅನಧಿಕೃತ ಫ್ಲೆಕ್ಸ್, ಬ್ಯಾನರ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾರೆಲ್ಲಾ ಬ್ಯಾನರ್​ ಹಾಕಿದ್ದಾರೋ ಅವರಿಗೆ ದಂಡ ವಿಧಿಸುವ ಕಾರ್ಯ ಮಾಡುತ್ತಿದೆ.

ಇತ್ತೀಚೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​