AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡಿ ಬಿಟ್ಟು ಮನೆಗೆ ಹೋಗಿ ಫೈನ್ ಕಟ್ಟಿ; ವೃದ್ಧ ದಂಪತಿಗೆ ಜಯನಗರ ಸಂಚಾರಿ ಪೊಲೀಸರಿಂದ ಕಿರುಕುಳ, ದೂರು ದಾಖಲು

ಜೆ.ಪಿ.ನಗರದ ನಿವಾಸಿಗಳಾದ ಮಂಗಳ, ಮಲ್ಲೇಶ್ ದಂಪತಿ ಬೈಕ್ ಮೂಲಕ ಆಸ್ಪತ್ರೆಗೆ ತೆರಳ್ತಿದ್ದರು. ಈ ವೇಳೆ ಜಯನಗರ ಸಂಚಾರಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಬಳಿಕ ವಾಹನದ ಮೇಲಿದ್ದ 5 ಸಾವಿರ ದಂಡ ಪಾವತಿಸಲು ಒತ್ತಾಯಿಸಿದ್ದಾರೆ.

ಗಾಡಿ ಬಿಟ್ಟು ಮನೆಗೆ ಹೋಗಿ ಫೈನ್ ಕಟ್ಟಿ; ವೃದ್ಧ ದಂಪತಿಗೆ ಜಯನಗರ ಸಂಚಾರಿ ಪೊಲೀಸರಿಂದ ಕಿರುಕುಳ, ದೂರು ದಾಖಲು
ಜಯನಗರ ಸಂಚಾರಿ ಪೊಲೀಸ್ ಠಾಣೆ
TV9 Web
| Edited By: |

Updated on: Feb 07, 2023 | 11:04 AM

Share

ಬೆಂಗಳೂರು: ದಂಡ ವಸೂಲಿ ಭರದಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಮಾನವೀಯತೆಯನ್ನೇ ಮರೆತಿದ್ದಾರೆ. ಜಯನಗರ ಸಂಚಾರಿ ಪೊಲೀಸರು ವೃದ್ಧರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೈಕ್​ನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದ ವೃದ್ಧ ದಂಪತಿಯನ್ನು ನಿಲ್ಲಿಸಿ 5 ಸಾವಿರ ಫೈನ್ ಕಟ್ಟುವಂತೆ ಕಿರುಕುಳ ನೀಡಿದ್ದಾರಂತೆ.

ಜೆ.ಪಿ.ನಗರದ ನಿವಾಸಿಗಳಾದ ಮಂಗಳ, ಮಲ್ಲೇಶ್ ದಂಪತಿ ಬೈಕ್ ಮೂಲಕ ಆಸ್ಪತ್ರೆಗೆ ತೆರಳ್ತಿದ್ದರು. ಈ ವೇಳೆ ಜಯನಗರ ಸಂಚಾರಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಬಳಿಕ ವಾಹನದ ಮೇಲಿದ್ದ 5 ಸಾವಿರ ದಂಡ ಪಾವತಿಸಲು ಒತ್ತಾಯಿಸಿದ್ದಾರೆ. ಆದ್ರೆ ಬಿಪಿ & ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ 45 ವರ್ಷದ ಮಂಗಳ ಅವರಿಗೆ ಆಸ್ಪತ್ರೆಗೆ ಹೋಗುವುದು ತೀವ್ರ ಅನಿವಾರ್ಯವಾಗಿತ್ತು. ಹಾಗೂ ಅವರ ಬಳಿ ಕೇವಲ 2 ಸಾವಿರ ರೂಗಳು ಮಾತ್ರ ಇದ್ದವು. ಹೀಗಾಗಿ ದಂಪತಿ ಸದ್ಯಕ್ಕೆ 2 ಸಾವಿರ ರೂ. ಮಾತ್ರ ಕಟ್ಟುವುದಾಗಿ ಹೇಳಿದ್ರು. ಆಗ ಶಿವಸ್ವಾಮಿ ಎಂಬ ಅಧಿಕಾರಿ 5 ಸಾವಿರ ಕಟ್ಟಲೇಬೇಕೇಂದು ಸೂಚಿಸಿದ್ದಾರಂತೆ. ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವೃದ್ಧ ದಂಪತಿ ಆರೋಪ ಮಾಡಿದ್ದಾರೆ.

ಇನ್ನು ಘಟನೆಯಿಂದ ವಿಚಲಿತರಾದ ದಂಪತಿ 2 ಕಿಲೋಮೀಟರ್ ಮನೆಗೆ ನಡೆದುಕೊಂಡು ಹೋಗಿ ಹಣ ತಂದಿದ್ದಾರೆ. ಇದರಿಂದಾಗಿ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಕುಸಿದು ಬಿದ್ದಿದ್ದು ಸದ್ಯ ವೃದ್ದ ದಂಪತಿಯ ಮಗ ಸಂಚಾರಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಪ್ರತಿಯನ್ನ ಬೆಂಗಳೂರಿನ ಸಂಚಾರಿ ಪೊಲೀಸ್ ಟ್ವಿಟರ್ ಪೇಜ್​ಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ