AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡಿ ಬಿಟ್ಟು ಮನೆಗೆ ಹೋಗಿ ಫೈನ್ ಕಟ್ಟಿ; ವೃದ್ಧ ದಂಪತಿಗೆ ಜಯನಗರ ಸಂಚಾರಿ ಪೊಲೀಸರಿಂದ ಕಿರುಕುಳ, ದೂರು ದಾಖಲು

ಜೆ.ಪಿ.ನಗರದ ನಿವಾಸಿಗಳಾದ ಮಂಗಳ, ಮಲ್ಲೇಶ್ ದಂಪತಿ ಬೈಕ್ ಮೂಲಕ ಆಸ್ಪತ್ರೆಗೆ ತೆರಳ್ತಿದ್ದರು. ಈ ವೇಳೆ ಜಯನಗರ ಸಂಚಾರಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಬಳಿಕ ವಾಹನದ ಮೇಲಿದ್ದ 5 ಸಾವಿರ ದಂಡ ಪಾವತಿಸಲು ಒತ್ತಾಯಿಸಿದ್ದಾರೆ.

ಗಾಡಿ ಬಿಟ್ಟು ಮನೆಗೆ ಹೋಗಿ ಫೈನ್ ಕಟ್ಟಿ; ವೃದ್ಧ ದಂಪತಿಗೆ ಜಯನಗರ ಸಂಚಾರಿ ಪೊಲೀಸರಿಂದ ಕಿರುಕುಳ, ದೂರು ದಾಖಲು
ಜಯನಗರ ಸಂಚಾರಿ ಪೊಲೀಸ್ ಠಾಣೆ
TV9 Web
| Edited By: |

Updated on: Feb 07, 2023 | 11:04 AM

Share

ಬೆಂಗಳೂರು: ದಂಡ ವಸೂಲಿ ಭರದಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಮಾನವೀಯತೆಯನ್ನೇ ಮರೆತಿದ್ದಾರೆ. ಜಯನಗರ ಸಂಚಾರಿ ಪೊಲೀಸರು ವೃದ್ಧರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೈಕ್​ನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದ ವೃದ್ಧ ದಂಪತಿಯನ್ನು ನಿಲ್ಲಿಸಿ 5 ಸಾವಿರ ಫೈನ್ ಕಟ್ಟುವಂತೆ ಕಿರುಕುಳ ನೀಡಿದ್ದಾರಂತೆ.

ಜೆ.ಪಿ.ನಗರದ ನಿವಾಸಿಗಳಾದ ಮಂಗಳ, ಮಲ್ಲೇಶ್ ದಂಪತಿ ಬೈಕ್ ಮೂಲಕ ಆಸ್ಪತ್ರೆಗೆ ತೆರಳ್ತಿದ್ದರು. ಈ ವೇಳೆ ಜಯನಗರ ಸಂಚಾರಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಬಳಿಕ ವಾಹನದ ಮೇಲಿದ್ದ 5 ಸಾವಿರ ದಂಡ ಪಾವತಿಸಲು ಒತ್ತಾಯಿಸಿದ್ದಾರೆ. ಆದ್ರೆ ಬಿಪಿ & ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ 45 ವರ್ಷದ ಮಂಗಳ ಅವರಿಗೆ ಆಸ್ಪತ್ರೆಗೆ ಹೋಗುವುದು ತೀವ್ರ ಅನಿವಾರ್ಯವಾಗಿತ್ತು. ಹಾಗೂ ಅವರ ಬಳಿ ಕೇವಲ 2 ಸಾವಿರ ರೂಗಳು ಮಾತ್ರ ಇದ್ದವು. ಹೀಗಾಗಿ ದಂಪತಿ ಸದ್ಯಕ್ಕೆ 2 ಸಾವಿರ ರೂ. ಮಾತ್ರ ಕಟ್ಟುವುದಾಗಿ ಹೇಳಿದ್ರು. ಆಗ ಶಿವಸ್ವಾಮಿ ಎಂಬ ಅಧಿಕಾರಿ 5 ಸಾವಿರ ಕಟ್ಟಲೇಬೇಕೇಂದು ಸೂಚಿಸಿದ್ದಾರಂತೆ. ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವೃದ್ಧ ದಂಪತಿ ಆರೋಪ ಮಾಡಿದ್ದಾರೆ.

ಇನ್ನು ಘಟನೆಯಿಂದ ವಿಚಲಿತರಾದ ದಂಪತಿ 2 ಕಿಲೋಮೀಟರ್ ಮನೆಗೆ ನಡೆದುಕೊಂಡು ಹೋಗಿ ಹಣ ತಂದಿದ್ದಾರೆ. ಇದರಿಂದಾಗಿ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಕುಸಿದು ಬಿದ್ದಿದ್ದು ಸದ್ಯ ವೃದ್ದ ದಂಪತಿಯ ಮಗ ಸಂಚಾರಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಪ್ರತಿಯನ್ನ ಬೆಂಗಳೂರಿನ ಸಂಚಾರಿ ಪೊಲೀಸ್ ಟ್ವಿಟರ್ ಪೇಜ್​ಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್