AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಮಾರಾಟ ಆರೋಪ: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ

MLA Munirathna: ಆರ್​​.ಆರ್​​.ನಗರದ ವಾರ್ಡ್​ವೊಂದರಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಮುನಿರತ್ನ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರ ಬಳಿ ದೂರು ದಾಖಲಾಗಿದೆ. ಯುವಕನೋರ್ವ ದೂರು ನೀಡಿದ್ದು ಡ್ರಗ್ಸ್ ಸಂಬಂಧ ಕ್ರಮ ಕೈಗೊಳ್ಳುವಂತೆ ಸಿಸಿಬಿಗೆ ಮನವಿ ಮಾಡಿದ್ದಾನೆ.

ಗಾಂಜಾ ಮಾರಾಟ ಆರೋಪ: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ
ಬಿಜೆಪಿ ಶಾಸಕ ಮುನಿರತ್ನ
ಪ್ರಸನ್ನ ಗಾಂವ್ಕರ್​
| Edited By: ಆಯೇಷಾ ಬಾನು|

Updated on:Oct 01, 2023 | 11:42 AM

Share

ಬೆಂಗಳೂರು, ಅ.01: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಂಜಾ (Cannabis) ಹಾವಳಿ ಹೆಚ್ಚಾಗಿದ್ದು ಮಾಜಿ ಸಚಿವ, ಶಾಸಕ ಮುನಿರತ್ನ (Munirathna) ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಆರ್​​.ಆರ್​​.ನಗರದ (RR Nagara) ವಾರ್ಡ್​ವೊಂದರಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಮುನಿರತ್ನ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರ (Bengaluru CCB Police) ಬಳಿ ದೂರು ದಾಖಲಾಗಿದೆ. ಯುವಕನೋರ್ವ ದೂರು ನೀಡಿದ್ದು ಡ್ರಗ್ಸ್ ಸಂಬಂಧ ಕ್ರಮ ಕೈಗೊಳ್ಳುವಂತೆ ಸಿಸಿಬಿಗೆ ಮನವಿ ಮಾಡಿದ್ದಾನೆ. ಸದ್ಯ ದೂರು ಪಡೆದಿರುವ ಸಿಸಿಬಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ತಮ್ಮ ಕ್ಷೇತ್ರದ ವಾರ್ಡ್ ಒಂದರಲ್ಲೇ 14 ಕೆಜಿ ಗಾಂಜಾ ಮಾರಾಟವಾಗುತ್ತದೆ ಎಂದು ಗಣೇಶೋತ್ಸವ ಕಾರ್ಯಕ್ರಮದಲ್ಲಿ ಘಂಟಾಘೋಷವಾಗಿ ಮುನಿರತ್ನ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಂತೋಷ್ ಎಂಬ ಯುವಕ ಸಿಸಿಬಿಗೆ ದೂರು ನೀಡಿದ್ದು ಡ್ರಗ್ ಪೆಡ್ಲರ್​ಗಳು ಪೊಲೀಸರ ಜೊತೆಗೇ ಸೆಲ್ಫಿ ತೆಗೆದುಕೊಳ್ಳುತ್ತಾರೆ ಎಂದೂ ಗಂಭೀರ ಆರೋಪ ಮಾಡಿದ್ದಾನೆ. ಅಲ್ಲದೆ ಮುನಿರತ್ನ ಹಾಗೂ ಮಾಜಿ ಕಾರ್ಪೋರೇಟರ್ ಜಿಕೆ ವೆಂಕಟೇಶ ವಿರುದ್ದ ದೂರು ನೀಡಿದ್ದಾನೆ. ಮಾಹಿತಿ ಪಡೆದು ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಂತೆ ಸಿಸಿಬಿಗೆ ಸಂತೋಷ್ ದೂರು ನೀಡಿದ್ದಾನೆ.

ಇದನ್ನೂ ಓದಿ: ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆಸಾಮಿ: ನಟೋರಿಯಸ್ ಗಾಂಜಾ ಪೆಡ್ಲರ್ ಬಂಧನ

ಖಚಿತ ಮಾಹಿತಿ ಮೇರೆಗೆ ದಾಳಿ: 2 ಕೆ.ಜಿ ಗಾಂಜಾ ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 2 ಕೆ.ಜಿ ಗಾಂಜಾ ಹಾಗೂ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಹಾನಗಲ್ ತಾಲೂಕಿನ ತಿರವಳ್ಳಿ ಗ್ರಾಮದ ಸಲ್ಮಾನಖಾನ ಆಲೂರ(24) ಬಂಧಿತ ಆರೋಪಿ. ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯ ಹತ್ತಿರ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ 28ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದಾಗ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಸಿಪಿಐ ಬಿ.ಎಸ್‌. ಲೋಕಾಪುರ ನಿರ್ದೇಶನದಂತೆ ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ ಮತ್ತು ಹನಮಂತ ಕುಡಗುಂಚಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:41 am, Sun, 1 October 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ