AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

ದಿನಗೂಲಿ ನೌಕರರ ಏಜೆನ್ಸಿ ಕೊಡಿಸುವುದಾಗಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ 4 ಕಂತುಗಳಲ್ಲಿ ಮಂಜುನಾಥ್ 15 ಲಕ್ಷ ರೂಪಾಯಿ ನೀಡಿದ್ದಾರೆ.

ಗೃಹ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 29, 2021 | 10:32 AM

Share

ಬೆಂಗಳೂರು: ಗೃಹ ಇಲಾಖೆಯಲ್ಲಿ ಸಹಾಯಕರ ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 55 ಜನರಿಂದ 1.62 ಕೋಟಿ ರೂಪಾಯಿ ವಸೂಲಿ ಮಾಡಿ ವಂಚನೆ ಮಾಡಿರುವ ಅರೋಪ ಕೇಳಿ ಬಂದಿದ್ದು. ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲೇಖಾ, ರಾಧಾ ಉಮೇಶ್ ಮತ್ತು ಸಂಪತ್‌ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜಿ.ಮಂಜುನಾಥ್ ದೂರು ನೀಡಿದ್ದು, ದೂರಿನನ್ವಯ ಎಫ್ಐಆರ್ (FIR) ದಾಖಲಿಸಲಾಗಿದೆ.

2019ರಲ್ಲಿ ರಾಧ ಉಮೇಶ್, ಕೆಪಿಸಿಸಿ ಕಾರ್ಮಿಕ ವಿಭಾಗ ಉಪಾಧ್ಯಕ್ಷೆ ಎಂದು ಪರಿಚಯ ಮಾಡಿಕೊಂಡಿದ್ದು, ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳು ಪರಿಚಯವಿದ್ದಾರೆ ಎಂದು ತಿಳಿಸಿದ್ದಾರೆ. ನಂತರ ದಿನಗೂಲಿ ನೌಕರರ ಏಜೆನ್ಸಿ ಕೊಡಿಸುವುದಾಗಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ 4 ಕಂತುಗಳಲ್ಲಿ ಮಂಜುನಾಥ್ 15 ಲಕ್ಷ ರೂಪಾಯಿ ನೀಡಿದ್ದಾರೆ.

ಗೃಹ ಇಲಾಖೆಯಲ್ಲಿ ಕಿರಿಯ, ಹಿರಿಯ ಮತ್ತು ಅಧೀಕ್ಷರ ಹುದ್ದೆಗೆ ನೇರ ನೇಮಕಾತಿ ನಡೆಯುತ್ತಿದೆ ಅಂದಿದ್ದ ಶ್ರೀಲೇಖಾ ಕೂಡ, ಆಗ 55 ಮಂದಿಯಿಂದ ಮೂವರು ಆರೋಪಿಗಳಿಗೂ 1.61 ಕೋಟಿ ರೂಪಾಯಿ ಸಂದಾಯ ಮಾಡಿದ್ದಾರೆ. ಸೆ.24 ರಂದು ಆರ್ಥಿಕ ಇಲಾಖೆ ಭೇಟಿ ವೇಳೆ ಅಸಲಿಯತ್ತು ಪತ್ತೆಯಾಗಿದೆ. ಅಲ್ಲದೇ ನೇಮಕಾತಿ ಆದೇಶ ಪ್ರಮಾಣ ಪತ್ರವನ್ನು ನೀಡಿದಾಗ ನಕಲಿ ಎನ್ನುವುದು ದೃಢವಾಗಿದೆ. ಹೀಗಾಗಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ವಿಧಾನಸೌಧ ಠಾಣೆ ಪೊಲೀಸರಿಂದ ಇಬ್ಬರ ಬಂಧನ ಗೃಹ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 55 ಜನರಿಂದ 1.62 ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ ಆರೋಪದಡಿ ಶ್ರೀಲೇಖಾ ಮತ್ತು ಸಂಪತ್‌ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ಮಂಜುನಾಥ್ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಿಸಿದ್ದು, ಮೂವರು ಆರೋಪಿಗಳಲ್ಲಿ ಸದ್ಯ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ನಕಲಿ‌ ಕಲಾಕೃತಿ ಮಾರಾಟ ಮಾಡಿ 10 ಕೋಟಿ ವಂಚನೆ; ಕೇರಳ‌ ಮೂಲದ ಯೂಟ್ಯೂಬರ್ ಮಾವುಂಗಲ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್​ಗೆ ವಂಚನೆ; ದಂಪತಿ ವಿರುದ್ಧ ದೂರು ದಾಖಲು

Published On - 7:27 am, Wed, 29 September 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?