AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗೆ ಮಕ್ಕಳ ನೀಲಿಚಿತ್ರದ ವಿಡಿಯೊ ಕಳಿಸಿದ ಪ್ರೊಫೆಸರ್; ಕಾಮುಕ ಶಿಕ್ಷಕನ ವಿರುದ್ಧ ಕೇಸ್

ಮಕ್ಕಳ ಲೈಂಗಿಕ ವಿಡಿಯೋ ಕಳಿಸುವುದು, ನೋಡುವುದು ಹಾಗೂ ಸ್ಟೋರ್ ಮಾಡಿರುವುದು ಶಿಕ್ಷಾರ್ಹ ಅಪರಾಧ. ಆದ್ರೆ ಗೌರವಯುತ ಸ್ಥಾನದಲ್ಲಿರುವ ಪ್ರೊಫೆಸರ್ ತಮ್ಮ ವಿದ್ಯಾರ್ಥಿಗೆ ವಿಡಿಯೋ ಕಳಿಸಿದ್ದಾರೆ.

ವಿದ್ಯಾರ್ಥಿಗೆ ಮಕ್ಕಳ ನೀಲಿಚಿತ್ರದ ವಿಡಿಯೊ ಕಳಿಸಿದ ಪ್ರೊಫೆಸರ್; ಕಾಮುಕ ಶಿಕ್ಷಕನ ವಿರುದ್ಧ ಕೇಸ್
ಮಧುಸೂದನ್ ಆಚಾರ್ಯ
TV9 Web
| Edited By: |

Updated on:Oct 20, 2022 | 8:29 AM

Share

ಬೆಂಗಳೂರು: ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ವಿರುದ್ಧ ಚೈಲ್ಡ್ ಪೋರ್ನೊಗ್ರಫಿ(Child Pornography) ಕೇಸ್ ದಾಖಲಾಗಿದೆ. ಚೈಲ್ಡ್ ಪೋರ್ನೊಗ್ರಫಿ (ಮಕ್ಕಳ ನೀಲಿಚಿತ್ರ) ಬೇರೆಯವರಿಗೆ ಕಳಿಸಿದ್ದಕ್ಕೆ ಮಧುಸೂದನ್ ಆಚಾರ್ಯ ಎಂಬ ಪ್ರೊಫೆಸರ್ ವಿರುದ್ಧ ಕೇಸ್ ದಾಖಲಾಗಿದೆ. ಮಧುಸೂದನ್ ಆಚಾರ್ಯ ಅವರು ತಾವು ಕೆಲಸ ಮಾಡುವ ಕಾಲೇಜಿನ ಓರ್ವ ವಿದ್ಯಾರ್ಥಿಗೆ ಇನ್ಸ್ಟಾಗ್ರಾಮ್ ಮೂಲಕ ವಿಡಿಯೋ ಕಳಿಸಿದ್ದರು. ಮಕ್ಕಳ ಲೈಂಗಿಕ ವಿಡಿಯೋ ಕಳಿಸುವುದು, ನೋಡುವುದು ಹಾಗೂ ಸ್ಟೋರ್ ಮಾಡಿರುವುದು ಶಿಕ್ಷಾರ್ಹ ಅಪರಾಧ. ಆದ್ರೆ ಗೌರವಯುತ ಸ್ಥಾನದಲ್ಲಿರುವ ಪ್ರೊಫೆಸರ್ ತಮ್ಮ ವಿದ್ಯಾರ್ಥಿಗೆ ವಿಡಿಯೋ ಕಳಿಸಿದ್ದಾರೆ.

ವಿಡಿಯೋ ಕಳಿಸಿದ್ದನ್ನು ಮಾನಿಟರ್ ಮಾಡಿದ್ದ National Center For Missing and Exploited Children ಪೋರ್ಟೆಲ್ ನಂತ್ರ ಈ ಮಾಹಿತಿಯನ್ನು ಎನ್​ಸಿಆರ್​ಬಿಗೆ ನೀಡಿದೆ. ಬಳಿಕ ಎನ್​ಸಿಆರ್​ಬಿ ರಾಜ್ಯ ಸಿಐಡಿಗೆ ಸಿಡಿ ಸಹಿತ ಪ್ರಕರಣದ ಮಾಹಿತಿ ನೀಡಿದೆ. ನಂತರ ಸೈಬರ್ ಕ್ರೈಮ್ ಟಿಪ್ ಲೈನ್ ಅಡಿಯಲ್ಲಿ ಮಾಹಿತಿ ನೀಡಲಾಗಿದೆ. ಮಾಹಿತಿ ಅನ್ವಯ ತಾಂತ್ರಿಕ ತನಿಖೆ ನಡೆಸಿದ್ದ ಸಿಐಡಿ ಸೈಬರ್ ಕ್ರೈಮ್ ಪೊಲೀಸರು ವಿಚಾರಣೆ ವೇಳೆ ಯಲಹಂಕ ಬಳಿಯ ಪ್ರತಿಷ್ಠಿತ ಕಾಲೇಜಿನ ಬಗ್ಗೆ ಮಾಹಿತಿ ಸಿಕ್ಕಿದೆ.

ಐಪಿ ಅಡ್ರಸ್ ಸಹಿತ ಏರಿಯಾ ಪತ್ತೆ ಮಾಡಿದ್ದ ಪೊಲೀಸರು ನಂತ್ರ ಘಟನೆ ಸಂಬಂಧ ಈಶಾನ್ಯ ವಿಭಾಗ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಕೇಸ್ ದಾಖಲು ಮಾಡಿದ ಸಿಇಎನ್ ಪೊಲೀಸರು ಕೇಸ್ ಸಂಬಂಧಿಸಿ ಪ್ರೊಫೆಸರ್ ಮಧುಸೂದನ್​ರನ್ನು ವಿಚಾರಣೆಗೆ ಕರೆಸಿ ವಿಚಾರಿಸಿದ್ದಾರೆ. ಆಗ ಕೃತ್ಯ ಬಯಲಾಗಿದೆ. ಪ್ರೊಫೆಸರ್ ಮಧುಸೂದನ್ ಹಲವಾರು ವಿದ್ಯಾರ್ಥಿಗಳನ್ನು ಕಾಮ ದೃಷ್ಟಿಯಿಂದ ಕಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಘಟನೆ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಸೆನ್ಸೇಷನಲ್ ಕ್ರೈಮ್ ಕತೆಗಳು: ನರರೂಪದ ನರರಾಕ್ಷಸರು ನಿರ್ಭಯಳನ್ನು ಹಸಿದ ನಾಯಿಗಳಂತೆ ಕೊಂದ ಭೀಕರ ಕತೆಯಿದು!

ಗಾಂಜಾ ದಂಧೆಗೆ ಕೈ ಜೋಡಿಸಿದ ರೈಲ್ವೆ ಇಲಾಖೆ ಹೊರಗುತ್ತಿಗೆ ನೌಕರರು

ಬೆಂಗಳೂರು: ಗಾಂಜಾ ದಂಧೆಗೆ ಕೈಜೋಡಿಸಿದ್ದ ರೈಲ್ವೆ ಇಲಾಖೆಯ ಮೂವರು ಹೊರಗುತ್ತಿಗೆ ನೌಕರರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಹಾಗೂ ತ್ರಿಪುರಾ ಮೂಲದ ಬಪ್ಪಾ ಕರ್ದೆ, ಪಿಂಟು ದಾಸ್, ರಾಜೇಶ್ ಪಾಲ್ ಬಂಧಿತರು. ರೈಲ್ವೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಿಂದ ನೇಮಕಗೊಂಡಿದ್ದ ಇವರು, ಈಶಾನ್ಯ ಫರ್ಟೈನರ್ ರೈಲ್ವೆ ಅಗ್ರಿಟ್ಲಾ ಕೊಚಿಂಗ್ ಡಿಪೊರ್ಟ್ ನಲ್ಲಿ ಎಸಿ ಅಟೆಂಡೆಂಟ್ ಹಾಗೂ ಬೆಡ್ ರೋಲ್ ಸ್ಟಾಫ್ ಗಳಾಗಿ ಕೆಲಸ ಮಾಡುತ್ತಿದ್ದರು.

ಆರೋಪಿಗಳು ತಮ್ಮ ಕೆಲಸಗಳ ನಿರ್ವಹಣೆಗೆ ನೀಡಲಾಗಿದ್ದ ರೈಲ್ವೆ ಬೋಗಿಗಳ ಲಾಕರ್ ಗಳನ್ನೇ ಕೃತ್ಯಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ಅಸ್ಸಾಂನಿಂದ ಗಾಂಜಾ ಕದ್ದು ಸಾಗಾಣಿಕೆ ಮಾಡಿ ಪೆಡ್ಲರ್​ಗಳಿಂದ ಲಕ್ಷ ಲಕ್ಷ ಹಣ ಪಡೆಯುತಿದ್ದರು. ಅಸ್ಸಾಂನಿಂದ ದೇಶದ ವಿವಿಧ ಕಡೆ ರೈಲು ಮುಖಾಂತರವೇ ಸಾಗಿ ದಂಧೆ ನಡೆಸುತ್ತಿದ್ದರು. ಸದ್ಯ ಈಗ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಂದ 80 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್, 6 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Published On - 8:29 am, Thu, 20 October 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?