AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News:ನಿಗಮ ಮಂಡಳಿ ಕೊಡಿಸುವುದಾಗಿ ಪ್ರಿಯಾಂಕ್ ಖರ್ಗೆ ಹೆಸರಿನ ಮೇಲೆ ಹಣ ವಸೂಲಿ, ಆರೋಪಿ ಅರೆಸ್ಟ್

ವ್ಯಕ್ತಿಯೋರ್ವ ಸಚಿವ ಪ್ರಿಯಾಂಕ್ ಖರ್ಗೆಯವರ ಪಿಎ ಎಂದು ಹೇಳಿಕೊಂಡು ನಿಗಮ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕೊಡಿಸ್ತೀನಿ ಎಂದು ನಂಬಿಸಿ ಜನರ ಬಳಿಯಿಂದ ಹಣ ಪೀಕುತ್ತಿದ್ದ. ಈ ಬಗ್ಗೆ ದೂರು ದಾಖಲಾಗಿದೆ.

Bengaluru News:ನಿಗಮ ಮಂಡಳಿ ಕೊಡಿಸುವುದಾಗಿ ಪ್ರಿಯಾಂಕ್ ಖರ್ಗೆ ಹೆಸರಿನ ಮೇಲೆ ಹಣ ವಸೂಲಿ, ಆರೋಪಿ ಅರೆಸ್ಟ್
ಸದಾಶಿವನಗರ ಪೊಲೀಸ್ ಠಾಣೆ
Follow us
ಆಯೇಷಾ ಬಾನು
|

Updated on:May 31, 2023 | 9:19 AM

ಬೆಂಗಳೂರು: ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ(Priyank kharge) ಅವರ ಹೆಸರು ಹೇಳಿಕೊಂಡು ಜನರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪೀಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ(job aspirants). ಪ್ರಿಯಾಂಕ್ ಖರ್ಗೆಯವರ ಆಪ್ತ ಸಹಾಯಕ ಕೇಶವ್ ಮೂರ್ತಿಯವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ(sadashivanagar police station) ದೂರು ದಾಖಲಿಸಿದ್ದರು. ದೂರು ಆಧರಿಸಿ ಆರೋಪಿ ರಘುನಾಥ್​​ನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅನೇಕರ ಬಳಿ ಸುಳ್ಳು ಆಸೆ ತೋರಿಸಿ ಹಣ ಪಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ರಘುನಾಥ್ ಎಂಬ ವ್ಯಕ್ತಿಯೋರ್ವ ಸಚಿವ ಪ್ರಿಯಾಂಕ್ ಖರ್ಗೆಯವರ ಪಿಎ ಎಂದು ಹೇಳಿಕೊಂಡು ನಿಗಮ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕೊಡಿಸ್ತೀನಿ ಎಂದು ನಂಬಿಸಿ ಜನರ ಬಳಿಯಿಂದ ಹಣ ಪೀಕುತ್ತಿದ್ದ. ಹುದ್ದೆ ಬೇಕೆಂದರೆ 9980823165 ಈ ನಂಬರ್​ಗೆ ಗೂಗಲ್ ಪೇ ಮಾಡಿ. ಹಣ ಹಾಕಿದರೆ ಅಧ್ಯಕ್ಷ ಸ್ಥಾನ ಫಿಕ್ಸ್ ಎಂದು ಹೇಳಿ ಗೂಗಲ್ ಪೇ ಮಾಡಿಸಿಕೊಳ್ತಿದ್ದ. ಇನ್ನು ಈತ ಸಚಿವರ ಬಳಿ 10 ವರ್ಷದಿಂದ ಆಪ್ತ ಸಹಾಯಕನಾಗಿದ್ದೇನೆ ಎಂದು ಪರಿಚಯ ಮಾಡಿಕೊಂಡು ದುಡ್ಡು ಸುಲಿಗೆ ಮಾಡ್ತಿದ್ದ. ಹೇಳುವಷ್ಟು ಹಣ ನೀಡದಿದ್ದರೆ ನಿಗಮ ಮಂಡಳಿಯಲ್ಲಿ ಮರ್ಯಾದಿನೇ ಇರಲ್ಲಾ, ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನ ಮಾನ ಸಿಗೋದಿಲ್ಲ ಅದಕ್ಕೆ ಹಣ ನೀಡಬೇಕೆಂದು ಬೆದರಿಕೆ ಹಾಕುತ್ತಿದ್ದ. ಅಲ್ಲದೆ 6361231868 ಮೊಬೈಲ್ ಸಂಖ್ಯೆಯಿಂದ ಕೆಲ ಮುಖಂಡರಿಗೆ ಕರೆ ಕೂಡ ಮಾಡಿದ್ದ. ಈ ಬಗ್ಗೆ ಮಾಹಿತಿ ತಿಳಿದ ಕಾಂಗ್ರೆಸ್​ನ ಗೀತಾ ಶಿವರಾಮ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರಿಯಾಂಕ್ ಖರ್ಗೆಯವರ ಆಪ್ತ ಸಹಾಯಕ ಕೇಶವ್ ಮೂರ್ತಿಯವರಿಗೆ ವಿಚಾರ ಮುಟ್ಟಿಸಿದ್ದರು. ಬಳಿಕ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಶವ್ ಮೂರ್ತಿ ದೂರು ದಾಖಲಿಸಿದ್ದರು. ಸದ್ಯ ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Belagavi News: ಸಚಿವಗಿರಿ ಮಿಸ್, ನನಗೆ ತಾಳ್ಮೆ ದೂರದೃಷ್ಟಿ ಇದೆ ಎಂದ ಶಾಸಕ ಲಕ್ಷ್ಮಣ್​ ಸವದಿ

ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

ತುಮಕೂರು/ಹಾವೇರಿ: ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ(Karnataka Lokayukta raid) ಮಾಡಿದ್ದಾರೆ. ಬೆಂಗಳೂರು, ತುಮಕೂರು(Tumakuru) ಹಾಗೂ ಹಾವೇರಿ(Haveri) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:52 am, Wed, 31 May 23

ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ