ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ರೇಡ್ ಮಾಡುವ ಬೆದರಿಕೆ: ಹಣಕ್ಕೆ ಬೇಡಿಕೆ ಇಟ್ಟ ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸ್ರು

ತಾವು ಲೋಕಾಯುಕ್ತ ಅಧಿಕಾರಿಗಳು ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿ ಬಳಿಯೇ ಹಣದ ಬೇಡಿಕೆ ಇಟ್ಟು ಅವರನ್ನು ಬೆದರಿಸಿದ್ದು ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೀತಾ ಎಂ ಪಾಟೀಲ್ ಅವರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ರೇಡ್ ಮಾಡುವ ಬೆದರಿಕೆ: ಹಣಕ್ಕೆ ಬೇಡಿಕೆ ಇಟ್ಟ ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸ್ರು
ವಿಧಾನಸೌಧ ಪೊಲೀಸ್ ಠಾಣೆ
Follow us
| Updated By: ಆಯೇಷಾ ಬಾನು

Updated on:Oct 11, 2023 | 7:27 AM

ಬೆಂಗಳೂರು, ಅ.11: ತಾವು ಲೋಕಾಯುಕ್ತ ಅಧಿಕಾರಿಗಳು (Lokayukta Officers) ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿ (Government Officers) ಬಳಿಯೇ ಹಣದ ಬೇಡಿಕೆ ಇಟ್ಟು ಅವರನ್ನು ಬೆದರಿಸುತ್ತಿದ್ದ ಎಂಬ ಬಗ್ಗೆ ಸರ್ಕಾರಿ ಅಧಿಕಾರಿಯೊಬ್ಬರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ (Vidhana Soudha Police Station) ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ಹಣ ಕಳಿಸಲು ನೀಡಿದ್ದ ಮೊಬೈಲ್ ನಂಬರ್ ಜಾಡು ಹಿಡಿದು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಇನ್ನು ಆರೋಪಿ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಅನೇಕರಿಗೆ ವಂಚಿಸಿರಬಹುದು ಎನ್ನಲಾಗುತ್ತಿದೆ. ಮೊಬೈಲ್ ನಂಬರ್ ಮೂಲಕ ಆರೋಪಿಗಳ ಹೆಸರನ್ನು ಪತ್ತೆ ಮಾಡಲಾಗಿದೆ.

ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೀತಾ ಎಂ ಪಾಟೀಲ್ ಎಂಬುವವರಿಗೆ ಕಚೇರಿಯ ನಂಬರ್​ಗೆ ಕರೆ ಮಾಡಿ ತಾನು ಲೋಕಾಯುಕ್ತ ಡಿವೈಎಸ್ಪಿ ರಾಜರಾಮ್ ಗಾಯಕ್ವಾಡ್ ಎಂದು ಆರೋಪಿ ಪರಿಚಯಿಸಿಕೊಂಡಿದ್ದಾನೆ. ಅದೇ ಸಂಜೆ ಗೀತಾ ಅವರ ಮೊಬೈಲ್ ನಂಬರ್ ಗೆ ಕರೆ ಮಾಡಿ ನಿಮ್ಮ ಮೇಲೆ ದೂರು ಬಂದಿದೆ. ದಾಳಿ ಮಾಡಲು ಪ್ರಸ್ತಾಪ ಇದೆ ಎಂದು ಬೆದರಿಸಿದ್ದಾನೆ. ನೀವು ಈ ಸಂಕಷ್ಟದಿಂದ ಪಾರಾಗಬೇಕು, ನಿಮ್ಮ ಮನೆ ಮೇಲೆ ದಾಳಿ ಮಾಡಬಾರದು ಎಂದರೆ 926011711 ಈ ನಂಬರ್​ಗೆ 70 ಸಾವಿರ ಗೂಗಲ್ ಪೇ ಮಾಡಿ ಎಂದು ಆರೋಪಿಯು ಸರ್ಕಾರಿ ಅಧಿಕಾರಿ ಗೀತಾ ಅವರಿಗೆ ಹೆದರಿಸಿದ್ದಾನೆ.

ಇದರಿಂದ ಅನುಮಾನಗೊಂಡ ಅರಣ್ಯ ಅಧಿಕಾರಿ ಗೀತಾ ಎಂ ಪಾಟೀಲ್ ಅವರು ಲೋಕಾಯುಕ್ತ ಅಧಿಕಾರಿ ಎಂದು ನಟಿಸಿ ದಾಳಿ ಮಾಡದೆ ಇರಲು ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಆರೋಪಿ ಗೂಗಲ್ ಪೇ ಮಾಡಲು ನೀಡಿದ್ದ ಹಾಗೂ ಕರೆ ಮಾಡಿದ್ದ ನಂಬರ್​ಗಳು ರಾಜರಾಮ್ ಘಾಟ್ಕೆ ಮತ್ತು ಯಲ್ಲಪ್ಪ ಕಾಂಬ್ಳೆ ಎಂಬ ಹೆಸರಿನಲ್ಲಿದೆ. ಸದ್ಯ ಈ ನಂಬರ್​ಗಳ ಮಾಹಿತಿ ಕಲೆ ಹಾಕಿ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸ್ತಿದ್ದ ಯುವಕನನ್ನು ರಕ್ಷಿಸಿದ ಪೊಲೀಸರು

ಬಿಎಂಟಿಸಿ ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ದಂಡಾಸ್ತ್ರ

ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ 3027 ಪ್ರಯಾಣಿಕರಿಂದ 6,10,880 ರೂ. ದಂಡ ವಸೂಲಿ ಮಾಡಲಾಗಿದೆ. ಸಿಬ್ಬಂದಿ ಬಿಎಂಟಿಸಿ ಬಸ್​ಗಳಲ್ಲಿ 14930 ಟ್ರಿಪ್ ತಪಾಸಣೆ ನಡೆಸಿದ್ದರು. ಈ ವೇಳೆ ಬಿಎಂಟಿಸಿ ಬಸ್ ನಿರ್ವಾಹಕರ ವಿರುದ್ಧವೂ 906 ಪ್ರಕರಣ ದಾಖಲಾಗಿದೆ. ಮಹಿಳೆಯರಿಗೆ ಮೀಸಲಿಟ್ಟ ಆಸನದಲ್ಲಿ ಕುಳಿತವರಿಂದಲೂ ದಂಡ ವಸೂಲಿ ಮಾಡಲಾಗಿದೆ. 387 ಪುರುಷ ಪ್ರಯಾಣಿಕರಿಂದ 38,700 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಹಾಗೂ ಮೋಟಾರು ವಾಹನ ಕಾಯ್ದೆ ಅನ್ವಯ ಅಧಿಕಾರಿಗಳಿಂದ ದಂಡ ವಸೂಲಿ ಮಾಡಲಾಗಿದೆ. ಬಿಎಂಟಿಸಿ ಅಧಿಕಾರಿಗಳು ಸೆಪ್ಟೆಂಬರ್​ನಲ್ಲಿ 6.49 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:14 am, Wed, 11 October 23

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ