ಬೆಂಗಳೂರು: ನಕಲಿ ನೋಟು ಸಾಗಾಟ ಪ್ರಕರಣ; ಅಪರಾಧಿಗೆ 6 ವರ್ಷ ಜೈಲುಶಿಕ್ಷೆ

ಖೋಟಾ ನೋಟು ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಎನ್ಐಎ, ಪೊಲೀಸರು ಕಾರ್ಯಾಚರಣೆ ನಡೆಸಿ, 8 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. ಈ ವೇಳೆ ಅಪರಾಧಿ ವನಿತಾ ಅಲಿಯಾಸ್ ತಂಗಂ ಬಳಿ 2.50 ಲಕ್ಷ ನಕಲಿ ನೋಟು ಪತ್ತೆಯಾಗಿತ್ತು. ಈ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.

ಬೆಂಗಳೂರು: ನಕಲಿ ನೋಟು ಸಾಗಾಟ ಪ್ರಕರಣ; ಅಪರಾಧಿಗೆ 6 ವರ್ಷ ಜೈಲುಶಿಕ್ಷೆ
ಪ್ರಾತಿನಿಧಿಕ ಚಿತ್ರ
Follow us
| Edited By: Kiran Hanumant Madar

Updated on: Sep 16, 2023 | 4:27 PM

ಬೆಂಗಳೂರು, ಸೆ.16: ನಕಲಿ ನೋಟು (Fake Note) ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ವನಿತಾಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ 6 ವರ್ಷ ಜೈಲುಶಿಕ್ಷೆ ಜೊತೆಗೆ 20 ಸಾವಿರ ದಂಡ ವಿಧಿಸಿದೆ. 2018ರಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ರಾಜ್ಯಕ್ಕೆ ಖೋಟಾ ನೋಟು ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಎನ್ಐಎ, ಪೊಲೀಸರು ಕಾರ್ಯಾಚರಣೆ ನಡೆಸಿ, 8 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. ಈ ವೇಳೆ ಅಪರಾಧಿ ವನಿತಾ ಅಲಿಯಾಸ್ ತಂಗಂ ಬಳಿ 2.50 ಲಕ್ಷ ನಕಲಿ ನೋಟು ಪತ್ತೆಯಾಗಿತ್ತು. ಈ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಪ್ರಕರಣದ 6ನೇ ಆರೋಪಿ ವನಿತಾ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ವಿಧಿಸಲಾಗಿದೆ.

ಕೇಬಲ್ ರಿಪೇರಿ ಮಾಡಲು ಹೋದ ವೇಳೆ ವಿದ್ಯುತ್ ಶಾಕ್

ಬೆಂಗಳೂರು ಗ್ರಾಮಾಂತರ: ಕೇಬಲ್ ರಿಪೇರಿ ಮಾಡಲು ಹೋದ ವೇಳೆ ವಿದ್ಯುತ್ ಶಾಕ್ ಅವಘಡವಾದ ಘಟನೆ ದೊಡ್ಡಬಳ್ಳಾಪುರ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ. ಜಯಕುಮಾರ್ (26) ವಿದ್ಯುತ್ ಶಾಕ್​ಗೆ ಒಳಗಾದ ಕೇಬಲ್ ರಿಪೇರಿ ಯುವಕ. ಕೂಡಲೇ ಇತನನ್ನು ದೊಡ್ಡಬಳ್ಳಾಪುರ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಶ್ ರಿಪೇರಿ ಮಾಡುವ ವೇಳೆ ಪಕ್ಕದಲ್ಲೇ ಇದ್ದ ಲೈನ್​ನಿಂದ ಶಾಕ್ ಹೊಡೆದಿದ್ದು,ಶೇಕಡಾ 60 ರಷ್ಟು ಸುಟ್ಟು ಗಾಯಗಳಾಗಿವೆ. ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಖೋಟಾ ನೋಟು ಪ್ರಿಂಟ್​ ಅಡ್ಡೆ ಮೇಲೆ ದಾಳಿ: 3ರ ಬಂಧನ, 60 ಲಕ್ಷಕ್ಕೂ ಹೆಚ್ಚು ಬೆಲೆಯ ಖೋಟಾ ನೋಟು ಜಪ್ತಿ

ಕಾರು ಡಿಕ್ಕಿ, ಬೈಕ್​ ಡಿಕ್ಕಿ; ಓರ್ವ ವ್ಯಕ್ತಿ ಸಾವು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು, ಬೈಕ್​ ನಡುವೆ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಯುವತಿ ಸಾವನ್ನಪ್ಪಿರುವ ಧಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಬಾಕ್ರಬೈಲು ನಿವಾಸಿ ಪ್ರೀತಿಕಾ ಶೆಟ್ಟಿ(21) ಮೃತ ವ್ಯಕ್ತಿ. ಬೈಕ್ ಸವಾರ ಬಂಟ್ವಾಳದ ಮನ್ವಿತ್ ರಾಜ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆ ಬರುವಾಗ ಈ ದುರ್ಘಟನೆ ನಡೆದಿದ್ದು, ಈ ವೇಳೆ ಬೈಕ್​ನಿಂದ ರಸ್ತೆಗೆ ಬಿದ್ದ ಯುವತಿ ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಆಸ್ಪತ್ರೆಗೆ ಸಾಗಿಸುವ ಮೊದಲೇ ಗಾಯಾಳು ಪ್ರೀತಿಕಾ ಶೆಟ್ಟಿ ಸಾವನ್ನಪ್ಪಿದ್ದಾಳೆ. ಈ ಕುರಿತು ಮುಲ್ಕಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಂಗ್ರೆಸ್​​ ಸರ್ಕಾರ ಪತನದ ಭವಿಷ್ಯ ನುಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಕಾಂಗ್ರೆಸ್​​ ಸರ್ಕಾರ ಪತನದ ಭವಿಷ್ಯ ನುಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್