AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ, ಶಿಶುಗಳ ಸಾವಿಗೆ ಕಾರಣರಾದ ಆರೋಗ್ಯ ಸಚಿವ ತಕ್ಷಣ ರಾಜೀನಾಮೆ ನೀಡಲಿ: ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ

ತಾಯಿ, ಶಿಶುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಸುಧಾಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಸುಧಾಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ.

ತಾಯಿ, ಶಿಶುಗಳ ಸಾವಿಗೆ ಕಾರಣರಾದ ಆರೋಗ್ಯ ಸಚಿವ ತಕ್ಷಣ ರಾಜೀನಾಮೆ ನೀಡಲಿ: ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ
ವಿಪಕ್ಷ ನಾಯಕ ಸಿದ್ದರಾಮಯ್ಯ, ಆರೋಗ್ಯ ಸಚಿವ ಸುಧಾಕರ್
TV9 Web
| Edited By: |

Updated on:Nov 03, 2022 | 9:45 PM

Share

ಬೆಂಗಳೂರು: ತಾಯಿ, ಶಿಶುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಸುಧಾಕರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಸುಧಾಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಬೇಕು. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದರು. ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿಗೆ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಧಾಕರ್ ಅವರೇ​ ಆರೋಗ್ಯ ಸಚಿವರಾಗಿ ಮುಂದುವರೆದರೆ, ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಬಿಜೆಪಿ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ. ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಗೆ ಸಚಿವ ಡಾ. ಕೆ ಸುಧಾಕರ್‌ ಭೇಟಿ 

ಇನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ರಾತ್ರಿ 9.30 ಸುಮಾರಿಗೆ ಭೇಟಿ ನೀಡಲಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ವೈದ್ಯರ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ನಿನ್ನೆ ಸಂಜೆ ಜಿಲ್ಲಾಸ್ಪತ್ರೆಗೆ ದಾಖಲಾಗಲು ಬಂದಿದ್ದ ಗರ್ಭಿಣಿ ಮಹಿಳೆ ಕಸ್ತೂರಿ. ಇಂದು ಬೆಳಿಗ್ಗೆ ಮನೆಯಲ್ಲಿ ಹೆರಿಗೆ ಬಳಿಕ ಅವಳಿ ಮಕ್ಕಳು ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ದಾಖಲೆಗಳು ಇಲ್ಲವೆಂದು ಸಿಬ್ಬಂದಿ ವಾಪಸ್ ಕಳಿಸಿದ್ದರು. ಆರೋಗ್ಯ ಇಲಾಖೆ ಪ್ರಕರಣ ಗಂಭೀರವಾಗಿ ಪರಿಗಣಿಸಿದೆ. ಒಂದು ವೇಳೆ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರೇ ತಾಯಿ ಮಕ್ಕಳು ಬದುಕುಳಿತ್ತಿದ್ದರು‌.

ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಅಮಾನತು: ಡಾ.ಮಂಜುನಾಥ್ 

ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ್ ಹೇಳಿಕೆ ನೀಡಿದ್ದು, ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ವೈದ್ಯೆ, ಸಿಬ್ಬಂದಿ ಅಮಾನತುಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಟಿವಿ9ಗೆ ತುಮಕೂರು ಡಿಹೆಚ್​ಒ ಡಾ.ಮಂಜುನಾಥ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:41 pm, Thu, 3 November 22

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ