AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ, ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ಬೆಂಗಳೂರು ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಬೆಸ್ಕಾಂನ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ, ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್
ತಾಯಿ, ಮಗು ಸಜೀವ ದಹನ ಪ್ರಕರಣ ಸಂಬಂಧ ಬೆಸ್ಕಾಂನ ಐವರು ಸಿಬ್ಬಂದಿಯನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on: Nov 19, 2023 | 7:39 PM

Share

ಬೆಂಗಳೂರು, ನ.19: ನಗರದ (Bengaluru) ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಪ್ರಕರಣ ಸಂಬಂಧ ಪೊಲೀಸರು ಬೆಸ್ಕಾಂನ (BESCOM) ಇಇ ಶ್ರೀರಾಮ್ ಸೇರಿದಂತೆ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಕಾರ್ಯನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ ಫೀಲ್ಡ್ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್ ಫೀಲ್ಡ್ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜುನಾಥ್ ಬಂಧಿತರಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

ಏನಿದು ಪ್ರಕರಣ?

ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿದ್ದವು. ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಸೌಂದರ್ಯ (23) ಮತ್ತು 9 ತಿಂಗಳ ಮಗು ಲೀಲಾ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದರು.

ಮೃತ ಸೌಂದರ್ಯ ಕಾಡುಗೋಡಿಯ ಎ.ಕೆ.ಗೋಪಾಲ್ ಕಾಲೋನಿಯ ನಿವಾಸಿಯಾಗಿದ್ದು, ಚೆನ್ನೈಗೆ ಮದುವೆ ಮಾಡಿಕೊಡಲಾಗಿತ್ತು. ದೀಪಾವಳಿ ಹಬ್ಬ ಆಚರಿಸಲು ಗಂಡ, ಹೆಂಡತಿ, ಮಗು ಊರಿಗೆ ಹೋಗಿದ್ದರು. ಇಂದು ಮುಂಜಾನೆ ಊರಿನಿಂದ ಹಸುಗೂಸು ಜೊತೆ ದಂಪತಿ ಬೆಂಗಳೂರಿಗೆ ಬಂದಿದ್ದರು.

ಇದನ್ನೂ ಓದಿ: ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು

ಬಸ್ ಇಳಿದು ಮುಂಜಾನೆ ಐದು ಗಂಟೆ ಸುಮಾರಿಗೆ ಕತ್ತಲಿನಲ್ಲಿ ಮನೆಗೆ ನಡೆದು ಹೋಗುವಾಗ ರಸ್ತೆ ಬದಿ ತುಂಡಾಗಿ ಬಿದ್ದಿದ್ದ ತಂತಿಯನ್ನು ಸೌಂದರ್ಯ ತುಳಿದಿದ್ದಾರೆ. ಇದರಿಂದ ವಿದ್ಯುತ್ ಶಾಕ್ ಹೊಡೆದು ಬೆಂಕಿ ಹತ್ತಿಕೊಂಡಿದ್ದು ಪತಿ ಎದುರೇ ಪತ್ನಿ ಹಾಗೂ 9 ತಿಂಗಳ ಹಸುಗೂಸು ಲೀಲಾ ಸಜೀವದಹನವಾಗಿದ್ದರು.

ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿರಲಿಲ್ಲ. ಇದರಿಂದಾಗಿ ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿ ಸಂತೋಷ್ ಇದ್ದರು. ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 304ಎ ಅಡಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ