AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಡೆಮಾಲಿಷನ್ ಮಾಡುವ ಮುನ್ನ ಎಚ್ಚರ! ಇನ್ಮುಂದೆ ಬರಲಿದೆ ಹೊಸ ನಿಯಮ

Demolition Waste Management: ನಗರದ ಸೌಂದರ್ಯ ಹಾಳಾಗದಂತೆ ತಡೆಯಲು ಮತ್ತು ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸಲು ಜಿಬಿಎ ಹೊಸ ನಿಯಮಗಳ ಜಾರಿಗೆ ಮುಂದಾಗಿದೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಕಟ್ಟಡ ಅವಶೇಷ ವಿಲೇವಾರಿಗೆ ಹೊಸ ನಿಯಮಗಳು ಬರಲಿವೆ. ಮನೆ ಡೆಮಾಲಿಷನ್ ಮಾಡುವವರು ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಬೇಕು.

ಕಟ್ಟಡ ಡೆಮಾಲಿಷನ್ ಮಾಡುವ ಮುನ್ನ ಎಚ್ಚರ! ಇನ್ಮುಂದೆ ಬರಲಿದೆ ಹೊಸ ನಿಯಮ
ಪ್ರಾತಿನಿಧಿಕ ಚಿತ್ರ Image Credit source: Getty images
ಗಂಗಾಧರ​ ಬ. ಸಾಬೋಜಿ
|

Updated on: Jul 30, 2026 | 3:22 PM

Share

ಬೆಂಗಳೂರು, ಜುಲೈ 30: ಕಟ್ಟಡ ತ್ಯಾಜ್ಯ ವಿಲೇವಾರಿ ಸೇರಿದಂತೆ ಕಸ ಸುರಿಯುವವರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕ್ರಮಕ್ಕೆ ಮುಂದಾಗಿದೆ. ಆ ಮೂಲಕ ನಗರದ ಅಂದ ಹಾಳಾಗದಂತೆ ವಹಿಸಲಾಗುತ್ತಿದೆ. ಇನ್ನು ಕಟ್ಟಡ ಅವಶೇಷಗಳನ್ನು ಎಲ್ಲೆಂದರಲ್ಲಿ ಸುರಿಯುವುದಕ್ಕೆ ಬ್ರೇಕ್ ಹಾಕಲು ಪಾಲಿಕೆ ಹೊಸ ನಿಯಮ ಜಾರಿಗೆ ಮುಂದಾಗಿದೆ. ಇನ್ಮುಂದೆ ಕಟ್ಟಡ ಅವಶೇಷ ವಿಲೇವಾರಿಗೂ (Demolition)  ನಿಯಮಗಳು ಬರಲಿವೆ.

ಎಲ್ಲೆಂದರಲ್ಲಿ ಕಟ್ಟಡದ ಅವಶೇಷ ವಿಲೇವಾರಿ ಮಾಡಿದರೆ ಬೀಳುತ್ತೆ ದಂಡ 

ಇನ್ಮುಂದೆ ಮನೆ ಅಥವಾ ಕಟ್ಟಡ ಡೆಮಾಲಿಷನ್ ಮಾಡುವವರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳದೆ ಕಟ್ಟಡದ ಅವಶೇಷಗಳನ್ನು ಎಲ್ಲೆಂದರಲ್ಲಿ ವಿಲೇವಾರಿ ಮಾಡಿದರೆ ದಂಡ ಬೀಳುವುದು ಖಚಿತ.

ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಡಿಕೆ ಶಿವಕುಮಾರ್

ಈ ಅವಶೇಷಗಳ ವಿಲೇವಾರಿಗೆ ಸಂಬಂಧಿಸಿದ ಕಂಪನಿಯು ಪ್ರತಿ ಟನ್‌ಗೆ 760 ರೂ ದರ ನಿಗದಿಪಡಿಸಲಿದೆ. ನಗರದ ಸೌಂದರ್ಯ ಹಾಳಾಗದಂತೆ ತಡೆಯಲು ಮತ್ತು ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸಲು ಈ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ.

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಮತ್ತಷ್ಟು ಕ್ರಮಕೈಗೊಳ್ಳಲಾಗುವುದು: ಸಚಿವ ಕೃಷ್ಣಬೈರೇಗೌಡ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಮತ್ತಷ್ಟು ಕ್ರಮಕೈಗೊಳ್ಳಲಾಗುತ್ತೆ. ಖಾಸಗಿ ವಾಹನಗಳಲ್ಲಿ ಕಸದ ವಿಲೇವಾರಿ ಮಾಡಲಾಗುತ್ತೆ. ಇನ್ನೂ ಕೆಲವರು ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕುತ್ತಿದ್ದು, ಬಹಳ ಸಮಸ್ಯೆ ಆಗುತ್ತಿದೆ. ಹೀಗಾಗಿ ಇನ್ಮುಂದೆ ಯಾರೆಲ್ಲಾ ಕಸ ವಿಲೇವಾರಿ ಮಾಡುತ್ತಾರೋ, ಆ ಎಲ್ಲಾ ವಾಹನಗಳಿಗೆ ಜಿಪಿಎಸ್ ಹಾಕಬೇಕು. ಕಸವನ್ನು ವಿಲೇವಾರಿ ಮಾಡುವವರು ರಿಜಿಸ್ಟರ್ ಮಾಡಿಕೊಳ್ಳಬೇಕು. ಈ ಬಗ್ಗೆ ಪೊಲೀಸ್​​, ಸಾರಿಗೆ ಇಲಾಖೆ ಜೊತೆ ಸಭೆ ನಡೆಸಿ, ಶೀಘ್ರದಲ್ಲೇ ಈ ನಿಯಮ ಜಾರಿಗೆ ಬರುವಂತೆ ಮಾಡಲಾಗುವುದು’ ಎಂದು ಹೇಳಿದ್ದಾರೆ.

ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿದೆ

ಇನ್ನು ಬೆಂಗಳೂರಿನಲ್ಲಿ ಕುಡಿಯುವ ನೀರು ವಿಚಾರವಾಗಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಿದೆ. ಈಗಾಗಲೇ ಸಿಎಂ ಡಿಕೆ ಶಿವಕುಮಾರ್​ ಜೊತೆಗೆ ಚರ್ಚೆ ಮಾಡಲಾಗಿದೆ. ಸರ್ಕಾರವೂ ಕುಡಿಯುವ ‌ನೀರಿಗೆ ಆದ್ಯತೆ ಅಂತಾ ಹೇಳಿದೆ’ ಎಂದರು.

ವರದಿ: ಅರುಣ್​​ ಕುಮಾರ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್