AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ನೀರು ವಿವಾದ: ತಮಿಳುನಾಡಿನ ಜೊತೆ ಸಂಧಾನಕ್ಕೆ ಮುಂದಾದ ಕರ್ನಾಟಕ; ಆ. 3ರಂದು ಮಾತುಕತೆಗೆ ಬರುವಂತೆ ವಿಜಯ್​​ಗೆ ಆಹ್ವಾನ

Cauvery Water Dispute: ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ವಿವಾದ ಇತ್ಯರ್ಥಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಆಗಸ್ಟ್ 3 ರಂದು ಸಂಧಾನ ಮಾತುಕತೆಗೆ ಬರುವಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಆಹ್ವಾನ ನೀಡಿದೆ. ಒಂದೊಮ್ಮೆ ಕರ್ನಾಟಕದ ಆಹ್ವಾನ ಒಪ್ಪಿ ವಿಜಯ್​​ ಬಂದಿದ್ದೇ ಆದಲ್ಲಿ ಸಂಕಷ್ಟ ಪರಿಹಾರ ಸೂತ್ರದ ಬಗ್ಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮಹತ್ವದ ಚರ್ಚೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡದಿರಲು CWMA ನಿನ್ನೆಯಷ್ಟೇ ಆದೇಶಿಸಿರುವ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ.

ಕಾವೇರಿ ನದಿ ನೀರು ವಿವಾದ: ತಮಿಳುನಾಡಿನ ಜೊತೆ ಸಂಧಾನಕ್ಕೆ ಮುಂದಾದ ಕರ್ನಾಟಕ;  ಆ. 3ರಂದು ಮಾತುಕತೆಗೆ ಬರುವಂತೆ ವಿಜಯ್​​ಗೆ ಆಹ್ವಾನ
ಕಾವೇರಿ ನದಿ ನೀರು ವಿವಾದ: ತಮಿಳುನಾಡಿನ ಜೊತೆ ಸಂಧಾನಕ್ಕೆ ಮುಂದಾದ ಕರ್ನಾಟಕImage Credit source: PTI
ಪ್ರಸನ್ನ ಗಾಂವ್ಕರ್​
| Edited By: |

Updated on:Jul 23, 2026 | 5:02 PM

Share

ಮುಖ್ಯಾಂಶಗಳು

  • ಕಾವೇರಿ ನದಿ ನೀರು, ಮೇಕೆದಾಟು ಯೋಜನೆ ವಿವಾದ
  • ತಮಿಳುನಾಡಿನ ಜೊತೆ ಸಂಧಾನಕ್ಕೆ ಕರ್ನಾಟಕ ಮುಂದು
  • ಆ. 3ರಂದು ಮಾತುಕತೆಗೆ ಬರುವಂತೆ ವಿಜಯ್​​ಗೆ ಆಹ್ವಾನ

ಬೆಂಗಳೂರು, ಜುಲೈ 23: ಕಾವೇರಿ ನೀರು ಹಂಚಿಕೆ ಸಮಸ್ಯೆ ಮತ್ತು ಮೇಕೆದಾಟು ಯೋಜನೆ ವಿಚಾರ ಸಂಬಂಧ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತಿರುವ ನೆರೆ ರಾಜ್ಯ ತಮಿಳುನಾಡಿನೊಂದಿಗೆ ಸಂಧಾನಕ್ಕೆ ಕರ್ನಾಟಕ ಮುಂದಾಗಿದೆ. ಈ ವಿಚಾರವಾಗಿ ಆಗಸ್ಟ್ 3ರಂದು ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್​ಗೆ ಕರ್ನಾಟಕ ಆಹ್ವಾನ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವೆ ಪತ್ರ ವ್ಯವಹಾರ ನಡೆದಿದ್ದರೂ ಮಾತುಕತೆಗೆ ಬರುವ ವಿಚಾರವಾಗಿ ವಿಜಯ್​​ರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ತಮಿಳುನಾಡಿನ ಮುಂದಿನ ನಿರ್ಧಾರ ಏನಿರಬಹುದು ಎಂಬ ಕುತೂಹಲ ಹೆಚ್ಚಿದೆ. ಒಂದೊಮ್ಮೆ ಕರ್ನಾಟಕದ ಆಹ್ವಾನ ಒಪ್ಪಿ ವಿಜಯ್​​ ಬಂದಿದ್ದೇ ಆದಲ್ಲಿ ಸಂಕಷ್ಟ ಪರಿಹಾರ ಸೂತ್ರದ ಬಗ್ಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮಹತ್ವದ ಚರ್ಚೆ ನಡೆಸಲಿದ್ದಾರೆ.

ನೀರು ಬಿಡದಿರಲು ಆದೇಶಿಸಿದ್ದ CWMA

ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡದಿರಲು CWMA ನಿನ್ನೆಯಷ್ಟೇ ಆದೇಶಿಸಿತ್ತು. ಜುಲೈ 26ರ ಬಳಿಕ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ . ಈ ಹಿನ್ನೆಲೆ ಒಂದು ವಾರದ ಬಳಿಕ ಅಂದರೆ ,ಜು.28ಕ್ಕೆ ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ನೀರು ಬಿಡುವುದೋ ಅಥವಾ ಬೇಡವೋ ಎಂಬ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿತ್ತು. ಈ ನಡುವೆಯೇ ಮಹತ್ವದ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ: ಸಂಪೂರ್ಣ ಬತ್ತಿದ ಕಾವೇರಿ ನದಿ; ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ

ಲೋಕಸಭೆಯಲ್ಲಿ ಪ್ರತಿಭಟಿಸಿದ್ದ ಡಿಎಂಕೆ

ಇನ್ನು ಲೋಕಸಭೆ ಅಧಿವೇಶನದ ಮೊದಲ ದಿನವೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನೆರೆ ರಾಜ್ಯ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿತ್ತು. ಕರ್ನಾಟಕದ ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪ ಮಾಡಿತ್ತು. ಮೇಕೆದಾಟು ವಿಚಾರವಾಗಿ ನಿಲುವಳಿ ಸೂಚನೆಗೆ ಅವಕಾಶ ಡಿಎಂಕೆ ಕೋರಿದ್ದು, ತಕ್ಷಣವೇ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿತ್ತು. ಆದರೆ ಪ್ರಸ್ತಾವನೆಗೆ ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದ ಕಾರಣ ಲೋಕಸಭೆ ಸದನದ ಬಾವಿಗಿಳಿದು ಡಿಎಂಕೆ‌ ಸಂಸದರು ಪ್ರತಿಭಟನೆ ನಡೆಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:48 pm, Thu, 23 July 26

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​