AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇಂದು(ಸೆ.22) ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆಯಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಬೆಂಗಳೂರಿನ ಎಲ್ಲಾ ಡಿಸಿಪಿಗಳಿಗೆ ಸೂಚನೆ ನೀಡಿದರು.

ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ
ಪ್ರಾತಿನಿಧಿಕ ಚಿತ್ರ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 22, 2023 | 7:16 AM

Share

ಬೆಂಗಳೂರು, ಸೆ.22: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇಂದು(ಸೆ.22) ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆಯಿದೆ. ಈ ವೇಳೆ ತಮಿಳುನಾಡು ಸರ್ಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಯಬಹುದು. ಹೀಗಾಗಿ ಬೆಂಗಳೂರಿನಾದ್ಯಂತ(Bengaluru) ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದರು. ಮುಖ್ಯವಾಗಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಹೆಚ್ಚು ನಿಗಾ ಇಡುವಂತೆ ಸೂಚಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ರಸ್ತೆ ತಡೆ ನಡೆಸುವವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವಂತೆ ಬೆಂಗಳೂರಿನ ಎಲ್ಲಾ ಡಿಸಿಪಿಗಳಿಗೆ ಪೊಲೀಸ್ ಆಯುಕ್ತ ದಯಾನಂದ್ ಸೂಚಿಸಿದ್ದಾರೆ.

ನಾಳೆ ಮಂಡ್ಯ ಬಂದ್​

ಹೌದು, ಸುಪ್ರೀಂ ಕೋರ್ಟ್​ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ (ಸೆ.23) ರಂದು ಮಂಡ್ಯ ಬಂದ್​ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಈ ಸಂಬಂಧ ಇಂದು ರಾಜಕೀಯ ಪಕ್ಷಗಳ ನಾಯಕರು, ವರ್ತಕರು, ಸಂಘಟನೆ ಮುಖಂಡರು ಸೇರಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲಿ ಮಂಡ್ಯ ನಗರ ಬಂದ್‌ನ ರೂಪರೇಷೆ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಇದನ್ನೂ ಓದಿ:ಪ್ರತಿಭಟನೆ ಬಳಿಕ ಕಾವೇರಿ ಪರ ‘ಆನ್​ಲೈನ್ ಬೆಂಬಲ’ ವ್ಯಕ್ತಪಡಿಸಲಾರಂಭಿಸಿದ ನಟರು

ಮಂಡ್ಯದಲ್ಲಿ ಮುಂದುವರಿಯಲಿದೆ ಕಾವೇರಿ ಕಿಚ್ಚು

ಮಂಡ್ಯದಲ್ಲಿ ಇಂದು ಸಹ ಕಾವೇರಿ ಕಿಚ್ಚು ಮುಂದುವರಿಯಲಿದೆ. ಅದರಂತೆ ಬೆಳಗ್ಗೆ 10 ಗಂಟೆಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಇಡೀ ಬೆಂಗಳೂರು ನಗರಕ್ಕೆ ನೀರನ್ನು ಸರಬರಾಜು ಮಾಡುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯ ಟಿ.ಕೆ ಹಳ್ಳಿ ಪಂಪ್ ಹೌಸ್​ಗೆ ಮುತ್ತಿಗೆ ಹಾಕಲಿದ್ದಾರೆ. ಬೆಂಗಳೂರು ಜನರಿಗೆ ನೀರನ್ನ ನಿಲ್ಲಿಸಿ, ರೈತರಿಗೆ ನೀರು ಕೊಡಿ ಎಂದು ಒತ್ತಾಯ ಮಾಡಲಿದ್ದಾರೆ.

ಕಾವೇರಿ ಹೋರಾಟದಲ್ಲಿ ಅಭಿಷೇಕ್ ಅಂಬರೀಶ್ ಭಾಗಿ

ಇನ್ನು ಕಾವೇರಿ ಹೋರಾಟದಲ್ಲಿ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಹ ಭಾಗಿಯಾಗಲಿದ್ದಾರೆ. ಹೌದು, ಮಂಡ್ಯದಲ್ಲಿ ನಡೆಯುವ ರೈತರ ಪ್ರತಿಭಟನೆಯಲ್ಲಿ ಬೆಳಗ್ಗೆ 11 ಗಂಟೆಗೆ ಹೋರಾಟಗಾರರ ಜೊತೆ ಸೇರಿಕೊಳ್ಳಲಿದ್ದಾರೆ. ಉಳಿದಂತೆ ಶ್ರೀರಂಗಪಟ್ಟಣ, ಪಾಂಡವಪುರ, ‌ಮದ್ದೂರಿನಲ್ಲಿ ವಿವಿಧ ರೈತ ಸಂಘಗಳು ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ನಾಳೆ ಮಂಡ್ಯನಗರ ಬಂದ್​ಗೆ ಕರೆ ಕೊಟ್ಟಿರೊ ಜಿಲ್ಲಾ ರೈತ ಹಿತರಕ್ಷಣಾ ಸಮತಿ ನಾಳೆ ಬಂದ್ ಕುರಿತು ಇಂದು ರೂಪುರೇಷು ತಯಾರಿ ನಡೆಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ