Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇಂದು(ಸೆ.22) ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆಯಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಬೆಂಗಳೂರಿನ ಎಲ್ಲಾ ಡಿಸಿಪಿಗಳಿಗೆ ಸೂಚನೆ ನೀಡಿದರು.

ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ
ಪ್ರಾತಿನಿಧಿಕ ಚಿತ್ರ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 22, 2023 | 7:16 AM

ಬೆಂಗಳೂರು, ಸೆ.22: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇಂದು(ಸೆ.22) ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆಯಿದೆ. ಈ ವೇಳೆ ತಮಿಳುನಾಡು ಸರ್ಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಯಬಹುದು. ಹೀಗಾಗಿ ಬೆಂಗಳೂರಿನಾದ್ಯಂತ(Bengaluru) ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದರು. ಮುಖ್ಯವಾಗಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಹೆಚ್ಚು ನಿಗಾ ಇಡುವಂತೆ ಸೂಚಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ರಸ್ತೆ ತಡೆ ನಡೆಸುವವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವಂತೆ ಬೆಂಗಳೂರಿನ ಎಲ್ಲಾ ಡಿಸಿಪಿಗಳಿಗೆ ಪೊಲೀಸ್ ಆಯುಕ್ತ ದಯಾನಂದ್ ಸೂಚಿಸಿದ್ದಾರೆ.

ನಾಳೆ ಮಂಡ್ಯ ಬಂದ್​

ಹೌದು, ಸುಪ್ರೀಂ ಕೋರ್ಟ್​ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ (ಸೆ.23) ರಂದು ಮಂಡ್ಯ ಬಂದ್​ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಈ ಸಂಬಂಧ ಇಂದು ರಾಜಕೀಯ ಪಕ್ಷಗಳ ನಾಯಕರು, ವರ್ತಕರು, ಸಂಘಟನೆ ಮುಖಂಡರು ಸೇರಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲಿ ಮಂಡ್ಯ ನಗರ ಬಂದ್‌ನ ರೂಪರೇಷೆ ಬಗ್ಗೆ ಚರ್ಚೆ ಮಾಡಲಿದ್ದಾರೆ.

ಇದನ್ನೂ ಓದಿ:ಪ್ರತಿಭಟನೆ ಬಳಿಕ ಕಾವೇರಿ ಪರ ‘ಆನ್​ಲೈನ್ ಬೆಂಬಲ’ ವ್ಯಕ್ತಪಡಿಸಲಾರಂಭಿಸಿದ ನಟರು

ಮಂಡ್ಯದಲ್ಲಿ ಮುಂದುವರಿಯಲಿದೆ ಕಾವೇರಿ ಕಿಚ್ಚು

ಮಂಡ್ಯದಲ್ಲಿ ಇಂದು ಸಹ ಕಾವೇರಿ ಕಿಚ್ಚು ಮುಂದುವರಿಯಲಿದೆ. ಅದರಂತೆ ಬೆಳಗ್ಗೆ 10 ಗಂಟೆಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಇಡೀ ಬೆಂಗಳೂರು ನಗರಕ್ಕೆ ನೀರನ್ನು ಸರಬರಾಜು ಮಾಡುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯ ಟಿ.ಕೆ ಹಳ್ಳಿ ಪಂಪ್ ಹೌಸ್​ಗೆ ಮುತ್ತಿಗೆ ಹಾಕಲಿದ್ದಾರೆ. ಬೆಂಗಳೂರು ಜನರಿಗೆ ನೀರನ್ನ ನಿಲ್ಲಿಸಿ, ರೈತರಿಗೆ ನೀರು ಕೊಡಿ ಎಂದು ಒತ್ತಾಯ ಮಾಡಲಿದ್ದಾರೆ.

ಕಾವೇರಿ ಹೋರಾಟದಲ್ಲಿ ಅಭಿಷೇಕ್ ಅಂಬರೀಶ್ ಭಾಗಿ

ಇನ್ನು ಕಾವೇರಿ ಹೋರಾಟದಲ್ಲಿ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಹ ಭಾಗಿಯಾಗಲಿದ್ದಾರೆ. ಹೌದು, ಮಂಡ್ಯದಲ್ಲಿ ನಡೆಯುವ ರೈತರ ಪ್ರತಿಭಟನೆಯಲ್ಲಿ ಬೆಳಗ್ಗೆ 11 ಗಂಟೆಗೆ ಹೋರಾಟಗಾರರ ಜೊತೆ ಸೇರಿಕೊಳ್ಳಲಿದ್ದಾರೆ. ಉಳಿದಂತೆ ಶ್ರೀರಂಗಪಟ್ಟಣ, ಪಾಂಡವಪುರ, ‌ಮದ್ದೂರಿನಲ್ಲಿ ವಿವಿಧ ರೈತ ಸಂಘಗಳು ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ನಾಳೆ ಮಂಡ್ಯನಗರ ಬಂದ್​ಗೆ ಕರೆ ಕೊಟ್ಟಿರೊ ಜಿಲ್ಲಾ ರೈತ ಹಿತರಕ್ಷಣಾ ಸಮತಿ ನಾಳೆ ಬಂದ್ ಕುರಿತು ಇಂದು ರೂಪುರೇಷು ತಯಾರಿ ನಡೆಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ