AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ, ಪ್ರತಿಭಟನೆಕಾರರಿಗೆ ಪೊಲೀಸ್ ಶಾಕ್

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ, ಕೇಂದ್ರ ಸರ್ಕಾರದ ಜೊತೆ ಸುಪ್ರೀಂಕೋರ್ಟ್​ ಗಮನಸೆಳೆಯಲು ನಾಳೆ(ಸೆ.29) ಕರ್ನಾಟಕ ಬಂದ್​ ಕರೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲು ವಿವಿಧ ಸಂಘಟನೆಗಳು ಸಜ್ಜಾಗಿವೆ. ಆದ್ರೆ, ಬೆಂಗಳೂರಿನಲ್ಲಿ ಪ್ರತಿಭಟನಾಕಾರರಿಗೆ ಪೊಲೀಸ್ ಇಲಾಖೆ ಶಾಕ್ ಕೊಟ್ಟಿದೆ.

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ, ಪ್ರತಿಭಟನೆಕಾರರಿಗೆ ಪೊಲೀಸ್ ಶಾಕ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 28, 2023 | 1:51 PM

Share

ಬೆಂಗಳೂರು, (ಸೆಪ್ಟೆಂಬರ್ 28) : ಕಾವೇರಿ ನದಿ ನೀರು (Cauvery Water Dispute) ವಿವಾದಕ್ಕೆ ಸಂಬಂಧಿಸಿದಂತೆ ನಾಳೆ(ಶುಕ್ರವಾರ) ಅಖಂಡ ಕರ್ನಾಟಕ ಬಂದ್​ಗೆ (Karnataka Bandh)ಕರೆ ನೀಡಲಾಗಿದೆ. ಈ ಬಂದ್​ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದ್ದು, ಬೃಹತ್ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್, ರಾಜ್ಯ ಹಾಗೂ ಸುಪ್ರೀಂಕೋರ್ಟ್​ ಗಮನಸೆಳೆಯುವ ಪಯತ್ನಕ್ಕೆ ಮುಂದಾಗಿವೆ. ಆದ್ರೆ, ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು(ಸೆ.28) ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ ಮಾಡಲಾಗಿದ್ದು, ಶುಕ್ರವಾರ ದಿನವಿಡೀ ಜಾರಿಯಲ್ಲಿರಲಿದೆ.

ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಶುಕ್ರವಾರ ಹಲವಾರು ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ನಾಳೆಯೂ ಸಹ ಪ್ರತಿಭಟನೆ ರ್ಯಾಲಿ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ. ಇಂದು ರಾತ್ರಿ ಹನ್ನೆರಡು ಗಂಟೆಯಿಂದ ನಾಳೆ(ಸೆ.29) ರಾತ್ರಿ ಹನ್ನೆರಡು ಗಂಟೆ ವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಹೀಗಾಗಿ ಮೆರವಣಿಗೆ ಮಾಡುವುದು ಸಾರ್ವಜನಿಕ ಸಭೆ ನಿಷೇಧವಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್ ಮಾಡಿದರೆ ಕಾನೂನು ಕ್ರಮ: ಸಂಘಟನೆಗಳಿಗೆ ಗೃಹ ಸಚಿವರ ಎಚ್ಚರಿಕೆ

ಸಾರ್ವಜನಿಕ ಜೀವನಕ್ಕೆ ಸಮಸ್ಯೆ ಉಂಟು ಮಾಡುವಂತಿಲ್ಲ. ಬಂದ್ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಸಹ ಇದೆ. ಸಂಘಟನೆಗಳು ಮತ್ತು ರಾಜಕೀಯ ಪಾರ್ಟಿಗಳು ಬಂದ್ ಮಾಡುವಂತೆ ಇಲ್ಲ. ಬಂದ್ ಮಾಡಿದಾಗ ಯಾವುದೇ ನಷ್ಟ ಮತ್ತು ಆಸ್ತಿಗೆ ದಕ್ಕೆ ಉಂಟಾದರೆ ಬಂದ್ ಕರೆ ನೀಡಿದವರೇ ಹೊಣೆ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದ್ರೆ ಸಮಸ್ಯೆ ಇಲ್ಲ. ಬದಲಾಗಿ ಬಲವಂತವಾಗಿ ಬಂದ್ ಮಾಡಿದ್ರೆ ಕಾನೂನಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ನಗರದ ಎಲ್ಲಾ ಪೊಲೀಸರು ಭದ್ರತೆಯಲ್ಲಿ ಇರುತ್ತಾರೆ. ಕೆಎಸ್​ಆರ್​ಪಿ, ಹೋಮ್ ಗಾರ್ಡ್‌ ,ಆರ್​ಎಎಫ್ ಅವರು ಇರುತ್ತಾರೆ ಎಂದು ತಿಳಿಸಿದರು.

ಎಸ್‌ಪಿ ಮತ್ತು ಡಿಸಿಪಿಗಳಿಗೆ ಸೂಚನೆ

ಇನ್ನು ನಾಳಿನ ಕರ್ನಾಟಕ ಬಂದ್ ಸಲುವಾಗಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಎಲ್ಲಾ ಎಸ್‌ಪಿ ಮತ್ತು ಡಿಸಿಪಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ. ನಾಳೆ ಯಾವುದೇ ಕಾರಣಕ್ಕೂ ಬಲವಂತವಾಗಿ ಬಂದ್‌ ಮಾಡುಸುವಂತಿಲ್ಲ. ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನಾಳಿನ ಬಂದ್‌ಗೆ ಸಕಲ ಸಿದ್ದತೆಯನ್ನ ಕೈಗೊಳ್ಳಲಾಗಿದ್ದು, ಬಲವಂತವಾಗಿ ಅಂಗಡಿ ಮುಗಟ್ಟಗಳನ್ನ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:32 pm, Thu, 28 September 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?