AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ, ಪ್ರತಿಭಟನೆಕಾರರಿಗೆ ಪೊಲೀಸ್ ಶಾಕ್

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ, ಕೇಂದ್ರ ಸರ್ಕಾರದ ಜೊತೆ ಸುಪ್ರೀಂಕೋರ್ಟ್​ ಗಮನಸೆಳೆಯಲು ನಾಳೆ(ಸೆ.29) ಕರ್ನಾಟಕ ಬಂದ್​ ಕರೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲು ವಿವಿಧ ಸಂಘಟನೆಗಳು ಸಜ್ಜಾಗಿವೆ. ಆದ್ರೆ, ಬೆಂಗಳೂರಿನಲ್ಲಿ ಪ್ರತಿಭಟನಾಕಾರರಿಗೆ ಪೊಲೀಸ್ ಇಲಾಖೆ ಶಾಕ್ ಕೊಟ್ಟಿದೆ.

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ, ಪ್ರತಿಭಟನೆಕಾರರಿಗೆ ಪೊಲೀಸ್ ಶಾಕ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 28, 2023 | 1:51 PM

Share

ಬೆಂಗಳೂರು, (ಸೆಪ್ಟೆಂಬರ್ 28) : ಕಾವೇರಿ ನದಿ ನೀರು (Cauvery Water Dispute) ವಿವಾದಕ್ಕೆ ಸಂಬಂಧಿಸಿದಂತೆ ನಾಳೆ(ಶುಕ್ರವಾರ) ಅಖಂಡ ಕರ್ನಾಟಕ ಬಂದ್​ಗೆ (Karnataka Bandh)ಕರೆ ನೀಡಲಾಗಿದೆ. ಈ ಬಂದ್​ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದ್ದು, ಬೃಹತ್ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್, ರಾಜ್ಯ ಹಾಗೂ ಸುಪ್ರೀಂಕೋರ್ಟ್​ ಗಮನಸೆಳೆಯುವ ಪಯತ್ನಕ್ಕೆ ಮುಂದಾಗಿವೆ. ಆದ್ರೆ, ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು(ಸೆ.28) ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ ಮಾಡಲಾಗಿದ್ದು, ಶುಕ್ರವಾರ ದಿನವಿಡೀ ಜಾರಿಯಲ್ಲಿರಲಿದೆ.

ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಶುಕ್ರವಾರ ಹಲವಾರು ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ನಾಳೆಯೂ ಸಹ ಪ್ರತಿಭಟನೆ ರ್ಯಾಲಿ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ. ಇಂದು ರಾತ್ರಿ ಹನ್ನೆರಡು ಗಂಟೆಯಿಂದ ನಾಳೆ(ಸೆ.29) ರಾತ್ರಿ ಹನ್ನೆರಡು ಗಂಟೆ ವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಹೀಗಾಗಿ ಮೆರವಣಿಗೆ ಮಾಡುವುದು ಸಾರ್ವಜನಿಕ ಸಭೆ ನಿಷೇಧವಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್ ಮಾಡಿದರೆ ಕಾನೂನು ಕ್ರಮ: ಸಂಘಟನೆಗಳಿಗೆ ಗೃಹ ಸಚಿವರ ಎಚ್ಚರಿಕೆ

ಸಾರ್ವಜನಿಕ ಜೀವನಕ್ಕೆ ಸಮಸ್ಯೆ ಉಂಟು ಮಾಡುವಂತಿಲ್ಲ. ಬಂದ್ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಸಹ ಇದೆ. ಸಂಘಟನೆಗಳು ಮತ್ತು ರಾಜಕೀಯ ಪಾರ್ಟಿಗಳು ಬಂದ್ ಮಾಡುವಂತೆ ಇಲ್ಲ. ಬಂದ್ ಮಾಡಿದಾಗ ಯಾವುದೇ ನಷ್ಟ ಮತ್ತು ಆಸ್ತಿಗೆ ದಕ್ಕೆ ಉಂಟಾದರೆ ಬಂದ್ ಕರೆ ನೀಡಿದವರೇ ಹೊಣೆ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದ್ರೆ ಸಮಸ್ಯೆ ಇಲ್ಲ. ಬದಲಾಗಿ ಬಲವಂತವಾಗಿ ಬಂದ್ ಮಾಡಿದ್ರೆ ಕಾನೂನಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ನಗರದ ಎಲ್ಲಾ ಪೊಲೀಸರು ಭದ್ರತೆಯಲ್ಲಿ ಇರುತ್ತಾರೆ. ಕೆಎಸ್​ಆರ್​ಪಿ, ಹೋಮ್ ಗಾರ್ಡ್‌ ,ಆರ್​ಎಎಫ್ ಅವರು ಇರುತ್ತಾರೆ ಎಂದು ತಿಳಿಸಿದರು.

ಎಸ್‌ಪಿ ಮತ್ತು ಡಿಸಿಪಿಗಳಿಗೆ ಸೂಚನೆ

ಇನ್ನು ನಾಳಿನ ಕರ್ನಾಟಕ ಬಂದ್ ಸಲುವಾಗಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಎಲ್ಲಾ ಎಸ್‌ಪಿ ಮತ್ತು ಡಿಸಿಪಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ. ನಾಳೆ ಯಾವುದೇ ಕಾರಣಕ್ಕೂ ಬಲವಂತವಾಗಿ ಬಂದ್‌ ಮಾಡುಸುವಂತಿಲ್ಲ. ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನಾಳಿನ ಬಂದ್‌ಗೆ ಸಕಲ ಸಿದ್ದತೆಯನ್ನ ಕೈಗೊಳ್ಳಲಾಗಿದ್ದು, ಬಲವಂತವಾಗಿ ಅಂಗಡಿ ಮುಗಟ್ಟಗಳನ್ನ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:32 pm, Thu, 28 September 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು