AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ, ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ನೀರು ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ಸರ್ಕಾರವಿದೆ. ತಮಿಳುನಾಡಿಗೆ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ಸುನಿಲ್​ ಎಮ್​ ಹೆಚ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 11, 2023 | 6:02 PM

Share

ಬೆಂಗಳೂರು, ಅ.11: ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy)ಅವರು ಟ್ವೀಟ್​ ಮೂಲಕ ಹೇಳಿದ್ದಾರೆ. ಹೌದು, ಇಂದು(ಅ.11) ನವದೆಹಲಿಯಲ್ಲಿ ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್​ ನೀರು ಹರಿಸಲು CWRC ಆದೇಶ ಹೊರಡಿಸಿದೆ. ಇದು ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದೆ ಎಂದಿದ್ದಾರೆ.

ಒಂದೆಡೆ ರೈತರಿಗೆ ವಿದ್ಯುತ್ ಆಘಾತ, ಇನ್ನೊಂದೆಡೆ ಕಾವೇರಿ ಬವಣೆ

ಹೌದು, ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ, ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ನೀರು ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ಸರ್ಕಾರವಿದೆ. ತಮಿಳುನಾಡಿಗೆ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ. ಮಳೆಯ ಕೊರತೆಯಿಂದ ರಾಜ್ಯದ ಜಲಾಶಯಗಳೆಲ್ಲ ಖಾಲಿ ಆಗಿವೆ. ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ. ಇಂತಹ ಜಲಾಘಾತಗಳನ್ನು ಕೊಡುವುದಕ್ಕಾಗಿಯೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಲಾಗಿದೆಯೇ?. ಈ ಆದೇಶಗಳು ಸಂವಿಧಾನ, ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಿಷ್ಟು

CWRC ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನವಾಗಿದೆ

ಬೆಂಗಳೂರಿನ ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದಲ್ಲಿ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಈ ಆದೇಶ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಿದೆ. ಕನ್ನಡಿಗರೂ ಮನುಷ್ಯರೇ, ಅವರಿಗೂ ಅನ್ನ, ನೀರು ಬೇಕು. ಅವರೂ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಮರೆತಿರುವಂತಿದೆ. ರಾಜ್ಯ ಸರ್ಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಾಗಿಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು. ಕರ್ನಾಟಕದ ಜನರ ಜೊತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ